AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಮೂಲಕ ಜನತೆಗೆ ಟೋಪಿ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಿ ಖಾತಾದಿಂದ ಎ ಖಾತಾ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ ಯೋಜನೆ ಎಂದು ವ್ಯಂಗ್ಯವಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಯೋಜನೆ ಜನರಿಗೆ ಪ್ರಯೋಜನಕ್ಕಿಂತ ಹೊರೆ ಹೆಚ್ಚಾಗಲಿದೆ ಎಂದು ಕಿಡಿಕಾರಿದ್ದಾರೆ.

ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಮೂಲಕ ಜನತೆಗೆ ಟೋಪಿ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಮೂಲಕ ಜನತೆಗೆ ಟೋಪಿ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
TV9 Web
| Edited By: |

Updated on: Oct 25, 2025 | 1:33 PM

Share

ಬೆಂಗಳೂರು, ಅಕ್ಟೋಬರ್ 25: ಬೆಂಗಳೂರು ನಗರದಲ್ಲಿನ ಜೆಡಿಎಸ್ (JDS) ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. “ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ ಯೋಜನೆ” ಎಂದು ವ್ಯಂಗ್ಯವಾಡಿರುವ ಅವರು, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ A-ಖಾತಾ B-ಖಾತಾದಲ್ಲಿ ಜನರನ್ನು ಲೂಟಿ ಮಾಡಲು ಮುಂದಾಗಿದ್ದಾರೆ ಎಂದು HDK ಆರೋಪ

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿರುವ ಅವರು, “ಐದು ಗ್ಯಾರಂಟಿಗಳ ಹೆಸರಿನಲ್ಲಿ ಈಗಾಗಲೇ ರಾಜ್ಯ ಖಜಾನೆ ಖಾಲಿ ಮಾಡಿದ್ದಾರೆ. ಈಗ A-ಖಾತಾ B-ಖಾತಾದಲ್ಲಿ ಲೂಟಿ ಮಾಡಲು ಮುಂದಾಗಿದ್ದಾರೆ. ಬೆಸ್ಕಾಂನಲ್ಲಿ 3–4 ಲಕ್ಷ ಅರ್ಜಿಗಳು ಬಂದಿವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸರ್ಕಾರ 5% ಹೆಚ್ಚುವರಿ ಶುಲ್ಕ ಹೇರುತ್ತಿದೆ. ಇದು ಜನರಿಗೆ ಹೊರೆಯಾಗಲಿದೆ” ಎಂದು ಆರೋಪಿಸಿದರು.

ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಾ, “ಬಿ ಖಾತಾ ಸಮಸ್ಯೆ 1995ರಿಂದಲೂ ಇದೆ. 1997ರಲ್ಲಿ ಈ ಬಗ್ಗೆ ಆದೇಶ ಹೊರಬಂದಿತ್ತು. ನಮ್ಮ ಆಡಳಿತದಲ್ಲಿ ನಗರಾಭಿವೃದ್ಧಿಗೆ ಹಲವಾರು ಕ್ರಮ ಕೈಗೊಂಡಿದ್ದೇವೆ. 7 ನಗರಸಭೆಗಳನ್ನು 9ಕ್ಕೆ ಏರಿಸಿದ್ದೇವೆ, 68 ವಾರ್ಡ್‌ಗಳನ್ನು 98ಕ್ಕೆ ವಿಸ್ತರಿಸಿದ್ದೇವೆ, 110 ಹಳ್ಳಿಗಳನ್ನು ಬಿಬಿಎಂಪಿಗೆ ಸೇರಿಸಿದ್ದೇವೆ. ಐದು ವರ್ಷಗಳಲ್ಲಿ ಸುಮಾರು ₹25 ಸಾವಿರ ಕೋಟಿ ಅನುದಾನ ತಂದಿದ್ದೆವು.” ಎಂದು ಹೇಳಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ