AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಹೆಚ್.ಡಿ.ಕುಮಾಸ್ವಾಮಿ
sandhya thejappa
sandhya thejappa|

Updated on: May 13, 2021 | 1:08 PM

Share

ಬೆಂಗಳೂರು: ಜನರಿಗೆ ಲಸಿಕೆ ಪಡೆಯಲು ಕರೆ ಕೊಟ್ಟು ಇಲ್ಲದಿದ್ದರೆ ಹೇಗೆ ಎಂದು ಟಿವಿ9ಗೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮನೆಯಿಂದ ಹೊರಬರದಂತೆ ಸರ್ಕಾರವೇ ಹೇಳುತ್ತದೆ. ಮತ್ತೊಂದೆಡೆ ಕೊವ್ಯಾಕ್ಸಿನ್ ಪಡೆಯಿರಿ ಎಂದು ಹೇಳುತ್ತಾರೆ. ರಾಜ್ಯ ಸರ್ಕಾರ ಯಾವಾಗ ಲಸಿಕೆ ಬರುತ್ತದೆ ಎಂದು ಜನರಿಗೆ ಸತ್ಯವನ್ನು ತಿಳಿಸಬೇಕು. ಜನರ ಜತೆ ಸರ್ಕಾರ ಬಹಳ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ. ನಾನು ಸರ್ಕಾರವನ್ನು ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ ಎಂದು ಹೇಳಿದರು.

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ. ಕೊವಿಡ್ ಲಸಿಕೆ ಕೊಡುತ್ತೇನೆಂದು ಎಲ್ಲ ಕಡೆ ಹೇಳುತ್ತಾರೆ. ಆದರೆ ಕೊವಿಡ್ ಲಸಿಕೆ ಇಲ್ಲದೆ ಹೇಗೆ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

4-5 ತಿಂಗಳಾದ್ರೂ ಪೂರ್ಣ ಲಸಿಕೆ ನೀಡಲು ಆಗುವುದಿಲ್ಲ. ಲಸಿಕೆ ತರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲವಾ. ಪ್ರಧಾನಿ ಮೋದಿ ವಿಶ್ವ ಗುರು ಆಗುವುದಕ್ಕೆ ಹೊರಟರು. ಹೀಗಾಗಿ ಬೇರೆ ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಿದ್ದಾರೆ. ದೇಶದ ಜನರಿಗೆ ಲಸಿಕೆ ನೀಡದೆ ವಿದೇಶಗಳಿಗೆ ರಫ್ತು ಮಾಡಿದ್ದರು. ಈಗ ಬೇರೆ ದೇಶದಿಂದ ಲಸಿಕೆ ಆಮದು ಮಾಡಿಕೊಳ್ಳಿ ಅಂತಾರೆ. ರಾಜ್ಯ ಸರ್ಕಾರಗಳಿಗೆ ಅನುಮತಿ ಕೊಡಿಸುವುದಾಗಿ ಹೇಳುತ್ತಿದ್ದಾರೆ. ಲಸಿಕಾ ಕಂಪನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು; ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

(HD Kumaraswamy says government was doing very badly with the people)

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ