Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಹೆಚ್.ಡಿ.ಕುಮಾಸ್ವಾಮಿ
Follow us
sandhya thejappa
|

Updated on: May 13, 2021 | 1:08 PM

ಬೆಂಗಳೂರು: ಜನರಿಗೆ ಲಸಿಕೆ ಪಡೆಯಲು ಕರೆ ಕೊಟ್ಟು ಇಲ್ಲದಿದ್ದರೆ ಹೇಗೆ ಎಂದು ಟಿವಿ9ಗೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮನೆಯಿಂದ ಹೊರಬರದಂತೆ ಸರ್ಕಾರವೇ ಹೇಳುತ್ತದೆ. ಮತ್ತೊಂದೆಡೆ ಕೊವ್ಯಾಕ್ಸಿನ್ ಪಡೆಯಿರಿ ಎಂದು ಹೇಳುತ್ತಾರೆ. ರಾಜ್ಯ ಸರ್ಕಾರ ಯಾವಾಗ ಲಸಿಕೆ ಬರುತ್ತದೆ ಎಂದು ಜನರಿಗೆ ಸತ್ಯವನ್ನು ತಿಳಿಸಬೇಕು. ಜನರ ಜತೆ ಸರ್ಕಾರ ಬಹಳ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ. ನಾನು ಸರ್ಕಾರವನ್ನು ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ ಎಂದು ಹೇಳಿದರು.

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ. ಕೊವಿಡ್ ಲಸಿಕೆ ಕೊಡುತ್ತೇನೆಂದು ಎಲ್ಲ ಕಡೆ ಹೇಳುತ್ತಾರೆ. ಆದರೆ ಕೊವಿಡ್ ಲಸಿಕೆ ಇಲ್ಲದೆ ಹೇಗೆ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

4-5 ತಿಂಗಳಾದ್ರೂ ಪೂರ್ಣ ಲಸಿಕೆ ನೀಡಲು ಆಗುವುದಿಲ್ಲ. ಲಸಿಕೆ ತರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲವಾ. ಪ್ರಧಾನಿ ಮೋದಿ ವಿಶ್ವ ಗುರು ಆಗುವುದಕ್ಕೆ ಹೊರಟರು. ಹೀಗಾಗಿ ಬೇರೆ ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಿದ್ದಾರೆ. ದೇಶದ ಜನರಿಗೆ ಲಸಿಕೆ ನೀಡದೆ ವಿದೇಶಗಳಿಗೆ ರಫ್ತು ಮಾಡಿದ್ದರು. ಈಗ ಬೇರೆ ದೇಶದಿಂದ ಲಸಿಕೆ ಆಮದು ಮಾಡಿಕೊಳ್ಳಿ ಅಂತಾರೆ. ರಾಜ್ಯ ಸರ್ಕಾರಗಳಿಗೆ ಅನುಮತಿ ಕೊಡಿಸುವುದಾಗಿ ಹೇಳುತ್ತಿದ್ದಾರೆ. ಲಸಿಕಾ ಕಂಪನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು; ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

(HD Kumaraswamy says government was doing very badly with the people)

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ