AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Jun 29, 2021 | 12:43 PM

Share

ರಾಮನಗರ: ನಾಡಿನ ವಿಚಾರದಲ್ಲಿ ಕೆಲ ಜನಪ್ರತಿನಿಧಿಗಳು ನಿರ್ಲಿಪ್ತ ಭಾವನೆ ಹೊಂದಿದ್ದಾರೆ. ಇದು ರಾಜ್ಯಕ್ಕೆ ಮಾರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತಮಿಳುನಾಡಿನಲ್ಲಿ ನೀರಿನ ವಿಚಾರ ಬಂದಾಗ ಎಲ್ಲ ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಅವರ ಒಗ್ಗಟ್ಟು ನಮ್ಮಲ್ಲಿ ಇಲ್ಲದಿರುವುದು ದುರದೃಷ್ಟಕರ. ನಾಡಿನ ಭಾಷೆ, ನೆಲ, ಜಲದ ಹಕ್ಕು ಪಡೆಯಲು ಶಕ್ತಿ ಬೇಕು. ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವಕಾಶ ಸಿಕ್ಕಾಗಲೇ ಅವರು ಮಾಡಲಿಲ್ಲ. 2008 ರಲ್ಲಿ ನಾನೇ ಖರ್ಗೆ ಅವರಿಗೆ ಮನವಿ ಮಾಡಿದ್ದೆ. ನಾವು ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ ಎಂದು ತಿಳಿಸಿದರು.

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮುಂದಾಗಿದ್ದೇನೆ. ನಾವು ಪ್ರಾರಂಭದಲ್ಲಿ ಕೊರೊನಾ ಇದ್ದಿದ್ದರಿಂದ ಪ್ರತಿಭಟನೆ ಮಾಡಲಿಲ್ಲ. ಕಾಂಗ್ರೆಸ್ನವರಿಗೆ ಪ್ರತಿಭಟನೆ ಮಾಡಲು ಅವಕಾಶ ಕೊಡುತ್ತಾರೆ. ಬಿಜೆಪಿ ಅವರು ಕಾರ್ಯಕ್ರಮ ಮಾಡಲು ಅವರಿಗೆ ಅವಕಾಶ ನೀಡುತ್ತಾರೆ. ನಮ್ಮ ಪಕ್ಷದ ಸಾಂಕೇತಿಕ ಪ್ರತಿಭಟನೆ ಅನುಮತಿ ನೀಡದಿದ್ದಕ್ಕೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಎರಡು ಪಕ್ಷಗಳ ಧೋರಣೆ ಯಾವ ರೀತಿ ಇದೆ ಎಂದು ನಾಡಿನ ಜನತೆ ಗಮನಿಸಬೇಕು ಎಂದು ಹೆಚ್ಡಿಕೆ ಹೇಳಿದರು.

ಇದನ್ನೂ ಓದಿ

ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​

(HD Kumaraswamy says Representatives have detached Feeling in Karnataka)

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್