Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: sandhya thejappa

Updated on: Jun 29, 2021 | 12:43 PM

ರಾಮನಗರ: ನಾಡಿನ ವಿಚಾರದಲ್ಲಿ ಕೆಲ ಜನಪ್ರತಿನಿಧಿಗಳು ನಿರ್ಲಿಪ್ತ ಭಾವನೆ ಹೊಂದಿದ್ದಾರೆ. ಇದು ರಾಜ್ಯಕ್ಕೆ ಮಾರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತಮಿಳುನಾಡಿನಲ್ಲಿ ನೀರಿನ ವಿಚಾರ ಬಂದಾಗ ಎಲ್ಲ ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಅವರ ಒಗ್ಗಟ್ಟು ನಮ್ಮಲ್ಲಿ ಇಲ್ಲದಿರುವುದು ದುರದೃಷ್ಟಕರ. ನಾಡಿನ ಭಾಷೆ, ನೆಲ, ಜಲದ ಹಕ್ಕು ಪಡೆಯಲು ಶಕ್ತಿ ಬೇಕು. ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವಕಾಶ ಸಿಕ್ಕಾಗಲೇ ಅವರು ಮಾಡಲಿಲ್ಲ. 2008 ರಲ್ಲಿ ನಾನೇ ಖರ್ಗೆ ಅವರಿಗೆ ಮನವಿ ಮಾಡಿದ್ದೆ. ನಾವು ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ ಎಂದು ತಿಳಿಸಿದರು.

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮುಂದಾಗಿದ್ದೇನೆ. ನಾವು ಪ್ರಾರಂಭದಲ್ಲಿ ಕೊರೊನಾ ಇದ್ದಿದ್ದರಿಂದ ಪ್ರತಿಭಟನೆ ಮಾಡಲಿಲ್ಲ. ಕಾಂಗ್ರೆಸ್ನವರಿಗೆ ಪ್ರತಿಭಟನೆ ಮಾಡಲು ಅವಕಾಶ ಕೊಡುತ್ತಾರೆ. ಬಿಜೆಪಿ ಅವರು ಕಾರ್ಯಕ್ರಮ ಮಾಡಲು ಅವರಿಗೆ ಅವಕಾಶ ನೀಡುತ್ತಾರೆ. ನಮ್ಮ ಪಕ್ಷದ ಸಾಂಕೇತಿಕ ಪ್ರತಿಭಟನೆ ಅನುಮತಿ ನೀಡದಿದ್ದಕ್ಕೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಎರಡು ಪಕ್ಷಗಳ ಧೋರಣೆ ಯಾವ ರೀತಿ ಇದೆ ಎಂದು ನಾಡಿನ ಜನತೆ ಗಮನಿಸಬೇಕು ಎಂದು ಹೆಚ್ಡಿಕೆ ಹೇಳಿದರು.

ಇದನ್ನೂ ಓದಿ

ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​

(HD Kumaraswamy says Representatives have detached Feeling in Karnataka)

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!