AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ – ಎಚ್ ಡಿ ಕುಮಾರಸ್ವಾಮಿ

HD Kumaraswamy: ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನಂತೆಯೇ ಆರ್​ಎಸ್​ಎಸ್​ ಸಹ ಕ್ರೂರವಾಗಿ ವರ್ತಿಸುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking) ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ - ಎಚ್ ಡಿ ಕುಮಾರಸ್ವಾಮಿ
ದೇಶ ಮುಂದಿನ ದಿನಗಳಲ್ಲಿ ಎಂತಹ ದುಸ್ಥಿತಿಗೆ ತಲುಪಲಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ; ಎಚ್.ಡಿ.ಕುಮಾರಸ್ವಾಮಿ
guruganesh bhat
| Edited By: |

Updated on:Feb 16, 2021 | 6:23 PM

Share

ಬೆಂಗಳೂರು: ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನ Adolf Hitler ನಾಜಿ ಪಡೆಯಂತೆಯೇ ಆರ್​ಎಸ್​ಎಸ್​ RSS ಕ್ರೂರವಾಗಿ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್​ಎಸ್​ಎಸ್​ ಅನುಸರಿಸುತ್ತಿದೆ. ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನಂತೆಯೇ ಆರ್​ಎಸ್​ಎಸ್​ ಸಹ ಕ್ರೂರವಾಗಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆರ್​ಎಸ್​ಎಸ್​ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಟ್ವೀಟ್ ವಿವಾದ ಸೃಷ್ಟಿಸಿದೆ.

ಜರ್ಮನಿಯಲ್ಲಿ ನಾಜಿ ಸೇನೆ ರಚನೆಯಾದಾಗಲೇ ಆರ್​ಎಸ್​ಎಸ್ ಸಹ ಆರಂಭವಾಗಿದೆ. ನಾಜಿಗಳಂತೆಯೇ ಆರ್​ಎಸ್​ಎಸ್​ ಸಹ ದೇಶದಲ್ಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮುಂದಿನ ದಿನಗಳಲ್ಲಿ ದೇಶವನ್ನು ಯಾವ ಸ್ಥಿತಿಗೆ ಕರೆದೊಯ್ಯಲಿದೆ ಎಂದು ತಿಳಿಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಜನರು ತಮ್ಮ ಅಭಿಪ್ರಾಯಗಳನ್ನು ಸ್ವತಂತ್ರವಾಗಿ ವ್ಯಕ್ತಪಡಿಸಲು ಅವಕಾಶಗಳನ್ನು ಕಸಿದುಕೊಳ್ಳಲಾಗುತ್ತಿದೆ. ದೇಶ ಮುಂದಿನ ದಿನಗಳಲ್ಲಿ ಎಂತಹ ದು:ಸ್ಥಿತಿಗೆ ತಲುಪಲಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ವಿಶ್ವ ಹಿಂದೂ ಪರಿಷತ್, ಆರ್​ಎಸ್​ಎಸ್ ಮತ್ತು ಇನ್ನಿತರ ಹಿಂದೂ ​ಸಂಘಟನೆಗಳು ದೇಶಾದ್ಯಂತ ಅಭಿಯಾನದ ಮೂಲಕ ದೇಣಿಗೆ ಸಂಗ್ರಹಿಸಿದ್ದು, ಸಾವಿರ ಕೋಟಿಯಷ್ಟು ದೇಣಿಗೆ ಸಂಗ್ರಹವಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಉಡುಪಿಯ ರಥ: ಶ್ರೀರಾಮನ ಹೊತ್ತು ಮೆರೆಯುವ ರಥ ಉಡುಪಿಯಲ್ಲೇ ನಿರ್ಮಾಣ! ವಿವರ ಇಲ್ಲಿದೆ

Published On - 1:50 pm, Tue, 16 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?