ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ – ಎಚ್ ಡಿ ಕುಮಾರಸ್ವಾಮಿ

| Updated By: Digi Tech Desk

Updated on: Feb 16, 2021 | 6:23 PM

HD Kumaraswamy: ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನಂತೆಯೇ ಆರ್​ಎಸ್​ಎಸ್​ ಸಹ ಕ್ರೂರವಾಗಿ ವರ್ತಿಸುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking) ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ - ಎಚ್ ಡಿ ಕುಮಾರಸ್ವಾಮಿ
ದೇಶ ಮುಂದಿನ ದಿನಗಳಲ್ಲಿ ಎಂತಹ ದುಸ್ಥಿತಿಗೆ ತಲುಪಲಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ; ಎಚ್.ಡಿ.ಕುಮಾರಸ್ವಾಮಿ
Follow us on

ಬೆಂಗಳೂರು: ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನ Adolf Hitler ನಾಜಿ ಪಡೆಯಂತೆಯೇ ಆರ್​ಎಸ್​ಎಸ್​ RSS ಕ್ರೂರವಾಗಿ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್​ಎಸ್​ಎಸ್​ ಅನುಸರಿಸುತ್ತಿದೆ. ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನಂತೆಯೇ ಆರ್​ಎಸ್​ಎಸ್​ ಸಹ ಕ್ರೂರವಾಗಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆರ್​ಎಸ್​ಎಸ್​ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಟ್ವೀಟ್ ವಿವಾದ ಸೃಷ್ಟಿಸಿದೆ.

ಜರ್ಮನಿಯಲ್ಲಿ ನಾಜಿ ಸೇನೆ ರಚನೆಯಾದಾಗಲೇ ಆರ್​ಎಸ್​ಎಸ್ ಸಹ ಆರಂಭವಾಗಿದೆ. ನಾಜಿಗಳಂತೆಯೇ ಆರ್​ಎಸ್​ಎಸ್​ ಸಹ ದೇಶದಲ್ಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮುಂದಿನ ದಿನಗಳಲ್ಲಿ ದೇಶವನ್ನು ಯಾವ ಸ್ಥಿತಿಗೆ ಕರೆದೊಯ್ಯಲಿದೆ ಎಂದು ತಿಳಿಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಜನರು ತಮ್ಮ ಅಭಿಪ್ರಾಯಗಳನ್ನು ಸ್ವತಂತ್ರವಾಗಿ ವ್ಯಕ್ತಪಡಿಸಲು ಅವಕಾಶಗಳನ್ನು ಕಸಿದುಕೊಳ್ಳಲಾಗುತ್ತಿದೆ. ದೇಶ ಮುಂದಿನ ದಿನಗಳಲ್ಲಿ ಎಂತಹ ದು:ಸ್ಥಿತಿಗೆ ತಲುಪಲಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ವಿಶ್ವ ಹಿಂದೂ ಪರಿಷತ್, ಆರ್​ಎಸ್​ಎಸ್ ಮತ್ತು ಇನ್ನಿತರ ಹಿಂದೂ ​ಸಂಘಟನೆಗಳು ದೇಶಾದ್ಯಂತ ಅಭಿಯಾನದ ಮೂಲಕ ದೇಣಿಗೆ ಸಂಗ್ರಹಿಸಿದ್ದು, ಸಾವಿರ ಕೋಟಿಯಷ್ಟು ದೇಣಿಗೆ ಸಂಗ್ರಹವಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಉಡುಪಿಯ ರಥ: ಶ್ರೀರಾಮನ ಹೊತ್ತು ಮೆರೆಯುವ ರಥ ಉಡುಪಿಯಲ್ಲೇ ನಿರ್ಮಾಣ! ವಿವರ ಇಲ್ಲಿದೆ

Published On - 1:50 pm, Tue, 16 February 21