ನನ್ನ ತೋಟದ ಮನೆಯಲ್ಲಿ ವೃದ್ಧಾಶ್ರಮ ಅಥವಾ ಅನಾಥಾಶ್ರಮ ನಿರ್ಮಿಸುವೆ: ಎಚ್​ಡಿಕೆ

ನನ್ನ ತೋಟದ ಭೂಮಿ  ಶಕ್ತಿ ಕೇಂದ್ರ ಎಂದು ನನ್ನ ಗೆಳೆಯರು ಹೇಳುತ್ತಾರೆ. ಹೀಗಾಗಿಯೇ ತೋಟದ ಮನೆಯಲ್ಲಿಯೇ ಜೆಡಿಎಸ್ ಕಾರ್ಯಾಗಾರ ನಡೆಸಿದ್ದಾಗಿ ಅವರು ತಿಳಿಸಿದರು.

ನನ್ನ ತೋಟದ ಮನೆಯಲ್ಲಿ ವೃದ್ಧಾಶ್ರಮ ಅಥವಾ ಅನಾಥಾಶ್ರಮ ನಿರ್ಮಿಸುವೆ: ಎಚ್​ಡಿಕೆ
ಎಚ್ ​ಡಿ ಕುಮಾರಸ್ವಾಮಿ
Edited By:

Updated on: Oct 04, 2021 | 4:53 PM

ಬೆಂಗಳೂರು: ನಮ್ಮ ತೋಟದ ಮನೆ ಜಾಗದಲ್ಲಿ ವೃದ್ಧಾಶ್ರಮ ಅಥವಾ ಅನಾಥಾಶ್ರಮ ಮಾಡಬೇಕೆಂಬ ಚಿಂತನೆ ಮಾಡಿದ್ದೇನೆ. ಇದಕ್ಕಾಗಿಯೇ ಎರಡು ಎಕರೆ ಜಾಗವನ್ನು ಬಿಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನನ್ನ ತಂದೆ ತಾಯಿ ಹೆಸರಿನಲ್ಲಿ ವೃದ್ಧಾಶ್ರಮ ಅಥವಾ ಅನಾಥಾಶ್ರಮ ಆರಂಭ ಮಾಡುತ್ತೇನೆ ಎಂದು ಅವರು ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ತೋಟದ ಕುಳಿತು ಘೋಷಿಸಿದರು.

ನನ್ನ ತೋಟದ ಭೂಮಿ  ಶಕ್ತಿ ಕೇಂದ್ರ ಎಂದು ನನ್ನ ಗೆಳೆಯರು ಹೇಳುತ್ತಾರೆ. ಹೀಗಾಗಿಯೇ ತೋಟದ ಮನೆಯಲ್ಲಿಯೇ ಜೆಡಿಎಸ್ ಕಾರ್ಯಾಗಾರ ನಡೆಸಿದ್ದಾಗಿ ಅವರು ತಿಳಿಸಿದರು.

ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ
ದೇಶ ಉಳಿಸಲು ಮುಸಲ್ಮಾನ ಬಾಂಧವರ ಮನೆ ಮನೆಗೆ ಜೆಡಿಎಸ್ ಪಕ್ಷವನ್ನು ತಲುಪಿಸಬೇಕು ಎಂದು 5ನೆ ದಿನದ ಜೆಡಿಎಸ್ ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದ ಮುಖಂಡರನ್ನುದ್ದೇಶಿಸಿ ಕರೆ ನೀಡಿದರು. ಜೆಡಿಎಸ್ ಬಿಜೆಪಿ ಬಿ ಟೀಂ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ಆದರೆ ಅದು ಸುಳ್ಳೆಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ರಾಮಮಂದಿರ ಕಟ್ಟಲು ದೇಣಿಗೆ ನೀಡಿದ ಇಟ್ಟಿಗೆಗಳು ಈಗ ಎಲ್ಲಿ ಹೋದವೊ ತಿಳಿಯದು ಎಂದು ಅವರು ಟೀಕಿಸಿದರು.

19 ಪರ್ಸೆಂಟ್ ಇರುವ ಮುಸಲ್ಮಾನ್ ಬಂಧುಗಳನ್ನು ದ್ರೋಹಿಗಳು ಎಂದು ಬಿಂಬಿಸಲಾಗುತ್ತಿದೆ. ನಮ್ಮ ಸಂವಿಧಾನದ ವ್ಯವಸ್ಥೆಯಲ್ಲಿ ನಾವೆಲ್ಲಾ ಒಂದು ಕುಟುಂಬದಂತೆ ಬದುಕಬೇಕು. ಕಾಂಗ್ರೆಸ್ ಸುದೀರ್ಘವಾಗಿ ಆಡಳಿತ ನಡೆಸಿದೆ. ತುರ್ತು ಪರಿಸ್ಥಿತಿಯವರೆಗೆ ಕಾಂಗ್ರೆಸ್ ಹತ್ತಿರಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕಾಂಗ್ರೆಸ್ ಸಂಪೂರ್ಣವಾಗಿ ನಶಿಸಿ ಹೋಗುತ್ತಿದೆ. ಕಾಂಗ್ರೆಸ್ ಸ್ವಯಂಕೃತ್ಯ ಅಪರಾಧವೇ ಅದಕ್ಕೆ ಕಾರಣ. ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ಈ ದೇಶ ಈ ಪರಿಸ್ಥಿತಿಗೆ ಬರಲು ಕಾರಣ ಏನು ಅಂತ ಯೋಚನೆ ಮಾಡಿ. ಕಾಂಗ್ರೆಸ್ ಪಕ್ಷ ನಮ್ಮನ್ನು ಗುಲಾಮರಂತೆ ನೋಡಿತು. ಮುಸ್ಲಿಂ ಸಮುದಾಯದವರ ಮುಗ್ಧತೆಯನ್ನು ಬಳಸಿಕೊಂಡಿತು. 2004 ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಾಗಿತ್ತು. ಆಗಲೂ ನಮಗೆ ಅಧಿಕಾರ ಮಾಡಲು ಬಿಡಲಿಲ್ಲ. ಪಕ್ಷದ ಕಾರ್ಯಕ್ರಮ ಬಿಟ್ಟು ಅಹಿಂದ ಅಂತಾ ಸಿದ್ದರಾಮಯ್ಯ ಹೊರಟರು.. ಮತ್ತೆ ಚುನಾವಣೆಗೆ ಹೋಗಬೇಕು ಅಂದುಕೊಂಡಿದ್ದೆವು. ಆದರೆ ನಮ್ಮ ಶಾಸಕರು ಕೈ ಮುಗಿದು ಬೇಡಿ ಮತ್ತೆ ಚುನಾವಣೆ ಬೇಡ ಅಂದ್ರು. ಬಿಜೆಪಿಯವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದು. ಬಿಜೆಪಿಯವರು ಸಹ ನಮ್ಮನ್ನು ಅವರಿಗೆ ಬೇಕಾದಾಗ ಬಳಸಿಕೊಂಡರು ಎಂದು ಎಚ್ಡಿಕೆ ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದರು.

ಇದನ್ನೂ ಓದಿ: 

ಬಹಿರಂಗ ಹೇಳಿಕೆ ನೀಡದಂತೆ ಜೆಡಿಎಸ್ ಶಾಸಕರಿಗೆ ಹೆಚ್ ಡಿ ಕುಮಾರಸ್ವಾಮಿ ಸೂಚನೆ

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ

Web contact

TV9 Kannada

Read More
Follow Us