AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್: DCಗೆ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಜಿಲ್ಲಾಧಿಕಾರಿಗೆ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವನ್ 144 ಸೆಕ್ಷನ್ ಹಾಕಲು ಡೈರಕ್ಷನ್ ಕೊಟ್ಟಿದ್ದು ಎಂದು ಸಿಎಂ, ಗೃಹ ಸಚಿವ, ಬಿಜೆಪಿ ರಾಜ್ಯಾಧ್ಯಕ್ಷ, ಜಿಲ್ಲಾಧಿಕಾರಿಗೆ ಏಕವಚನದಲ್ಲಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಸೇರಿ ಯಾವನು ಆಸ್ಪತ್ರೆಗೆ ಹೋಗಿ ಕಷ್ಟ ಕೇಳಿದ್ದೀರಾ? ಶಿವಮೊಗ್ಗ, ಬಿಹಾರ ಸೇರಿದಂತೆ ಹಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಇದ್ದಾರೆ. ಸಿಎಂ ಬಂದವರು ಆಸ್ಪತ್ತೆಗೆ ಹೋಗಿದ್ದರಾ? ಸಿಎಂ ಏನು ಮಾಹಿತಿ ಪಡೆದರು? […]

ಗೋಲಿಬಾರ್: DCಗೆ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 22, 2019 | 1:24 PM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಜಿಲ್ಲಾಧಿಕಾರಿಗೆ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವನ್ 144 ಸೆಕ್ಷನ್ ಹಾಕಲು ಡೈರಕ್ಷನ್ ಕೊಟ್ಟಿದ್ದು ಎಂದು ಸಿಎಂ, ಗೃಹ ಸಚಿವ, ಬಿಜೆಪಿ ರಾಜ್ಯಾಧ್ಯಕ್ಷ, ಜಿಲ್ಲಾಧಿಕಾರಿಗೆ ಏಕವಚನದಲ್ಲಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಸೇರಿ ಯಾವನು ಆಸ್ಪತ್ರೆಗೆ ಹೋಗಿ ಕಷ್ಟ ಕೇಳಿದ್ದೀರಾ? ಶಿವಮೊಗ್ಗ, ಬಿಹಾರ ಸೇರಿದಂತೆ ಹಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಇದ್ದಾರೆ. ಸಿಎಂ ಬಂದವರು ಆಸ್ಪತ್ತೆಗೆ ಹೋಗಿದ್ದರಾ? ಸಿಎಂ ಏನು ಮಾಹಿತಿ ಪಡೆದರು? ಅಲ್ಲಿನ ಪರಿಸ್ಥಿತಿ ನೋಡಬೇಕಿತ್ತು ಎಂದು ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕುಮಾರಸ್ವಾಮಿ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕುಮಾರಸ್ವಾಮಿ ನಾನು ಇಲ್ಲಿಗೆ ಕರ್ಫ್ಯೂ ಸಡಿಲಿಕೆಯಾದ ಹಿನ್ನೆಲೆ ಬಂದಿದ್ದೇನೆ. ಯಾವುದೇ ರಾಜಕೀಯ ಉದ್ದೇಶದಿಂದ ಇಲ್ಲಿಗೆ ಬಂದಿಲ್ಲ ಎಂದು ಹೇಳಿದ್ರು. ಕರಾವಳಿ ಭಾಗದಲ್ಲಿ ಕೋಮು ಘಟನೆಗಳು ನಡೆಯುತ್ತಿತ್ತು, ಆದ್ರೆ ಈ ಗಲಾಟೆ ಕೋಮುಗಲಭೆಯಲ್ಲ. ಇದು ಪೊಲೀಸರು, ನಾಗರಿಕರ ನಡುವೆ ನಡೆದ ಗಲಭೆಯಾಗಿದೆ. ಫೈರಿಂಗ್‌ನಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಸರ್ಕಾರ, ಪೊಲೀಸ್ ಇಲಾಖೆ ಮಾಹಿತಿ ನೀಡಿಲ್ಲ ಎಂದು ಪೊಲೀಸರ ಫೈರಿಂಗ್ ವಿರುದ್ಧ ಹರಿಹಾಯ್ದಿದ್ದಾರೆ.

ಇದು ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಪೊಲೀಸರು ಅನಾಗರಿಕರಂತೆ ವರ್ತಿಸಿದ್ದಾರೆ. ಯಾವೊಬ್ಬ ಜನಪ್ರತಿನಿಧಿಗಾದರೂ ಹೃದಯ ವೈಶಾಲ್ಯತೆ ಇದೆಯಾ? ಹಿಂದೂ ಸಂಸ್ಕೃತಿ, ಮಾನವೀಯತೆ ಬಗ್ಗೆ ಗೊತ್ತಿದೆಯಾ? ಹಿಂದೂ ದೇಶ ಕಟ್ಟಲು ಹೋದವರಿಗೆ ಈ ವಿಚಾರ ಗೊತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಕರ್ನಾಟಕ ಶಾಂತಿಪ್ರಿಯ ರಾಜ್ಯ ಎಂದು ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಮಾತನ್ನು ಉಲ್ಲೇಖಿಸಿದರು. ಆಚರಣೆಯಲ್ಲೂ ನಾವು ಅದೇ ರೀತಿ ಇದ್ದೇವೆ. ಈ ಬಗ್ಗೆ ರಾಜ್ಯದ ನಾನಾ ಮೂಲೆಗಳಲ್ಲಿ ಪ್ರತಿಭಟ‌ನೆ ನಡೆಯುತ್ತಿದೆ ಎಂದರು.

ಶಾಲೆಯಿಂದ ಮಕ್ಕಳನ್ನ ಕರೆದುಕೊಂಡು ಬರುತ್ತಿದ್ದವನ ಮೇಲೆ ಫೈರಿಂಗ್‌: ಮಂಗಳೂರು ಪೊಲೀಸರ ಫೈರಿಂಗ್‌ನಲ್ಲಿ ಜಲೀಲ್ ಮೃತಪಟ್ಟಿದ್ದಾನೆ. ಜಲೀಲ್ ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಬಂದಿದ್ದ. ಮನೆಯ ಗೇಟ್ ಹಾಕುವ ವೇಳೆ ಜಲೀಲ್‌ಗೆ ಗುಂಡು ತಾಗಿದೆ. ಈ ಸಾವಿಗೆ ಯಾರು ಹೊಣೆ ಎಂದು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನಿಸಿದರು. ರಾಜ್ಯದಲ್ಲಿ ಬೆಂಕಿ ಹಚ್ಚಿ ಗೃಹ ಸಚಿವರು ದೆಹಲಿಗೆ ಹೋಗಿದ್ದರು ಎಂದು ಬಸವರಾಜ ಬೊಮ್ಮಾಯಿ ವಿರುದ್ಧ ಹೆಚ್​ಡಿ.ಕೆ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಪರಿಹಾರದ ವಿಚಾರ ಯಡಿಯೂರಪ್ಪರಿಂದ ಡಿಸಿಗೆ ಸೂಚನೆ ಹಿನ್ನೆಲೆ ಈ ಪುರುಷಾರ್ಥಕ್ಕಾ ಯಡಿಯೂರಪ್ಪ ಸಿಎಂ ಆಗಿದ್ದು? ಯಡಿಯೂರಪ್ಪ ನಿಮಗೆ ಮನುಷ್ಯತ್ವ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 1:06 pm, Sun, 22 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ