AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ಕೇಸ್​ನಿಂದ ಮನನೊಂದು ರಾಜೀನಾಮೆಗೆ ಮುಂದಾಗಿದ್ದ ದೇವೇಗೌಡ, ಸ್ಫೋಟಕ ಮಾಹಿತಿ ಬಹಿರಂಗ

ಪ್ರಜ್ವಲ್ ರೇವಣ್ಣ ಹಾಗೂ ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣ ದೇವೇಗೌಡ ಕುಟುಂಬಕ್ಕೆ ಮುಜುಗರ ತಂದಿಟ್ಟಿದೆ. ಕಿಡ್ನ್ಯಾಪ್​ ಪ್ರಕರಣದಲ್ಲಿ ಈಗಾಗಲೇ ರೇವಣ್ಣ ಸಹ ಜೈಲಿಗೆ ಹೋಗಿಬಂದಿದ್ದಾರೆ. ಇನ್ನು ಇದರ ಮಧ್ಯೆ ದೇವೇಗೌಡರ ಕುಟುಂಬ ಫೋನ್​ಗಳನ್ನು ಟ್ಯಾಪ್ ಮಾಡಲಾಗಿತ್ತಿದೆ ಎನ್ನುವ ಗಂಭೀರ ಆರೋಪವನ್ನು ಕುಮಾರಸ್ವಾಮಿ ಮಾಡಿದ್ದಾರೆ. ಅಲ್ಲದೇ ದೇವೇಗೌಡ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನುವ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್​ ಕೇಸ್​ನಿಂದ ಮನನೊಂದು ರಾಜೀನಾಮೆಗೆ ಮುಂದಾಗಿದ್ದ ದೇವೇಗೌಡ, ಸ್ಫೋಟಕ ಮಾಹಿತಿ ಬಹಿರಂಗ
ಎಚ್​ಡಿ ದೇವೇಗೌಡ
Sunil MH
| Edited By: |

Updated on: May 20, 2024 | 3:56 PM

Share

ಬೆಂಗಳೂರು, (ಮೇ 20): ಪ್ರಜ್ವಲ್ ರೆವಣ್ಣ (Prajwal Revanna) ಮತ್ತು ಎಚ್‌ಡಿ ರೇವಣ್ಣ (HD Revanna) ಪ್ರಕರಣಗಳು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ (HD Dwevegowda) ಕುಟುಂಬವನ್ನು ಕಂಗೆಡಿಸಿದ್ದು, ಇಡೀ ದೊಡ್ಡಗೌಡರ ಕುಟುಂಬದಲ್ಲಿ ಆತಂಕ ಛಾಯೆ ಆವರಿಸಿದೆ. ಇದರಿಂದ ನೊಂದಿರುವ ಎಚ್​ಡಿ ದೇವೇಗೌಡ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನುವ ಸ್ಫೋಟಕ ಅಂಶವನ್ನು ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಉದ್ದೇಶ ಪೂರ್ವಕವಾಗಿ ನಮ್ಮ ಕುಟುಂಬ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮ ಕುಟುಂಬ ಮುಗಿಸಲು ಈ ರೀತಿ ಷಡ್ಯಂತ್ರ ಮಾಡುತ್ತಿದ್ದಾರೆ. ಈ ಪ್ರಕರಣದಿಂದನೊಂದು ಎಚ್​ಡಿ ದೇವೇಗೌಡ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿದ್ದರು ಎಂದು ಸ್ಫೋಟಕ ಅಂಶವನ್ನು ಬಿಚ್ಚಿಟ್ಟರು.

ನಮ್ಮ ಕುಟುಂಬದ ಎಲ್ಲರ ಫೋನ್ ಕೂಡ ಟ್ಯಾಪ್ ಆಗುತ್ತಿದೆ. ನಾನು ಅಕ್ರಮದ ಬಗ್ಗೆ ಮಾತಾಡ್ತೇನೆಂದು ನನ್ನ ಮೇಲೆ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ಜೊತೆ ಇದ್ದವರ ಸುಮಾರು 45 ಜನರ ಫೋನ್​ ಟ್ಯಾಪ್​ ಮಾಡಿದ್ದಾರೆ. ಈ ಪ್ರಕರಣದಿಂದನೊಂದು ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿದ್ದರು. ಯಾರೋ ಮಾಡಿದ ತಪ್ಪಿಗೆ ನೀವು ರಾಜೀನಾಮೆ ಕೊಡಬೇಡಿ ಎಂದೆ. ಹೀಗಾಗಿ ಅವರು ಸಮ್ಮನಾದರು ಎಂದು ಹೇಳಿದರು.

ಇದನ್ನೂ ಓದಿ: ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್​ಗೆ ಕುಮಾರಸ್ವಾಮಿ ಮನವಿ

ಕುಮಾರಸ್ವಾಮಿ ಆರೋಪಕ್ಕೆ ಡಿಕೆ.ಶಿವಕುಮಾರ್ ತಿರುಗೇಟು

ನಮ್ಮ ಕುಟುಂಬ ಮುಗಿಸಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಎಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ನನ್ನ ಹೆಸರು ಪ್ರಸ್ತಾಪ ಮಾಡಿಲ್ಲ ಅಂದರೆ ಯಾರಿಗೂ ನಿದ್ದೆ ಬರಲ್ಲ. ಉತ್ತರ ಕೊಡುವ ಅವಶ್ಯಕತೆ ಇಲ್ಲ, ಅದಕ್ಕೂ ನನಗೂ ಸಂಬಂಧವಿಲ್ಲ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದು ಅವರೇ ಹೇಳಿದ್ದಾರೆ. ಕುಮಾರಸ್ವಾಮಿ ಮತ್ತೆ ಏನು ಬೇಕಾದ್ರೂ ಹೇಳಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ನೋವಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ

ಪ್ರಮುಖವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ತಮ್ಮ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಬಹಳಷ್ಟು ಚಿಂತೆಯಾಗಿದೆ. ಅಶ್ಲೀಲ ವಿಡಿಯೋ ಹಾಗೂ ರೇವಣ್ಣ ಬಂಧನದಿಂದ ದೇವೇಗೌಡರ ಕುಟುಂಬಕ್ಕೆ ಮುಜುಗರು ಉಂಟುಮಾಡಿದೆ. ಒಂದು ಕಡೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರೆ, ಮತ್ತೊಂದು ಕಡೆ ರಾಜ್ಯದಲ್ಲಿ ಎಚ್‌ಡಿ ರೇವಣ್ಣ ಅವರ ಬಂಧನ ಮತ್ತು ಬಿಡುಗಡೆ ಎಚ್‌ಡಿ ದೇವೇಗೌಡರ ಕುಟುಂಬವನ್ನು ಕಂಗೆಡಿಸಿದ್ದು, ಇಡೀ ದೊಡ್ಡಗೌಡರ ಕುಟುಂಬದಲ್ಲಿ ಆತಂಕ ಛಾಯೆ ಆವರಿಸಿದೆ. ಹೀಗಾಗಿ ಜನ್ಮದಿನದ ಆಚರಣೆ ಮಾಡಿಕೊಂಡಿರಲಿಲ್ಲ.

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ದೇವೇಗೌಡ ಹೇಳಿದ್ದೇನು?

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪ್ರಕರಣದ ಬಗ್ಗೆ ಒಂದೇ ಒಂದು ಮಾತನಾಡದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಮೊನ್ನೆ ಶನಿವಾರ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದರು. ಈ ವೇಳೆ ಪ್ರಜ್ವಲ್‌ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಯಾವುದೇ ತಕರಾರಿಲ್ಲ. ನಮ್ಮ ಕುಟುಂಬಕ್ಕೆ ಹಿನ್ನಡೆ ತರುವ ಪ್ರಯತ್ನ ನಡೆಯುತ್ತಿದೆ, ಇದೆಲ್ಲದರ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಅವರು ಮಾತನಾಡುತ್ತಾರೆ ಎಂದು ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್