AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ಹೋರಾಡೋಣ; ಬೇರೆಲ್ಲಾ ವಿಷಯ ಉಪೇಕ್ಷಿಸೋಣ -ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಕರೆ​

ಕೊವಿಡ್‌ ಸಂಕಷ್ಟ ಕಾಲದಲ್ಲಿ ಜೆಡಿಎಸ್​ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ. ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ, ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ.

ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ಹೋರಾಡೋಣ; ಬೇರೆಲ್ಲಾ ವಿಷಯ ಉಪೇಕ್ಷಿಸೋಣ -ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಕರೆ​
ಎಚ್.ಡಿ.ಕುಮಾರಸ್ವಾಮಿ
Follow us
TV9 Web
| Updated By: Skanda

Updated on:Jul 10, 2021 | 1:59 PM

ಬೆಂಗಳೂರು: ಸಂಸದೆ ಸುಮಲತಾ ಜತೆಗಿನ ಕಿತ್ತಾಟಕ್ಕೆ ಅಂತ್ಯ ಕಾಣಿಸಲು ಮುಂದಾಗಿರುವ ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮಾಡುವ ಮೂಲಕ ಈ ವಿಚಾರವನ್ನು ಇಲ್ಲಿಗೇ ನಿಲ್ಲಿಸೋಣ ಎಂದು ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಸುಮಲತಾ ಬಗೆಗೆ ಯಾವುದೇ ಹೇಳಿಕೆ ನೀಡುವುದು ಬೇಡ, ಅದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಹೆಚ್.ಡಿ.ದೇವೇಗೌಡ ಸೂಚನೆ ನೀಡಿದ ಬೆನ್ನಲ್ಲೇ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನಾವು ಹೋರಾಟ ಮಾಡಬೇಕಾದ ವಿಚಾರಗಳು ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ಬೇರೆಲ್ಲಾ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಹೇಳಿದ್ದಾರೆ.

ಕೊವಿಡ್‌ ಸಂಕಷ್ಟ ಕಾಲದಲ್ಲಿ ಜೆಡಿಎಸ್​ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ. ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ, ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ಕರ್ನಾಟಕ ಕೇಂದ್ರಿತ ರಾಜಕಾರಣವನ್ನು ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ನಿರ್ಧಾರಕ್ಕೆ ಬಿಡೋಣ. ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಯೋಜನೆಗೆ ತಡೆ ಮಾಡುತ್ತಿರುವವರ ವಿರುದ್ಧ ಸಿಡಿಯೋಣ, ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನ ಹಾರಿಸಲು ಬಿಡಲೊಲ್ಲದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಸಿಡಿಯೋಣ ಎಂದು ಕರೆ ನೀಡಿದ್ದಾರೆ.

ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ನಾವು ಸಿಡಿಯಬೇಕಾಗಿದೆ. ಇದು ನಮ್ಮ ಆಯ್ಕೆಯಾಗಲಿ. ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಗೌಣವಾಗುತ್ತಿವೆ, ಆ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನ ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಟ್ವಿಟರ್​ ಮೂಲಕ ಸುಮಲತಾ ಜತೆಗಿನ ವಾಕ್ಸಮರವನ್ನು ಅಂತ್ಯಗೊಳಿಸುವ ಸೂಚನೆ ನೀಡಿದ್ದಾರೆ.

ಸುಮಲತಾ ಕಾವೇರಿ ತಾಯಿಗೆ ಪೂಜೆ ಮಾಡಿ ಕ್ಷಮೆ ಕೇಳಲಿ ಇದಕ್ಕೂ ಮುನ್ನ ವಿವಾದದ ಬಗ್ಗೆ ಅರಕೆರೆಯಲ್ಲಿ ಮಾತನಾಡಿದ್ದ ಜೆಡಿಎಸ್​ ಶಾಸಕ ರವೀಂದ್ರ ಶ್ರೀಕಂಠಯ್ಯ, ಕಾವೇರಿ ತಾಯಿಗೆ ಸುಮಲತಾ ಪೂಜೆ ಮಾಡಿ ಜನರ ಕ್ಷಮೆಕೇಳಲಿ. ಸುಮಲತಾ ಅವರು ಕ್ಷಮೆ ಕೇಳಿದ ಮೇಲೆ ವಿವಾದ ಮುಗಿಯುತ್ತೆ. ಅವರಿಂದ ತಪ್ಪಾಗಿರೋದು ಜಗಜ್ಜಾಹೀರಾಗಿದೆ. ಕೆಆರ್​ಎಸ್​ಗೆ ಬಂದು ಸುಮಲತಾ ಪೂಜೆ ಸಲ್ಲಿಸಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

ಹೆಚ್​ಡಿಕೆ ಕದನ ವಿರಾಮ ವಿವಾದ ಭುಗಿಲೆದ್ದ ನಂತರ ಕಳೆದ 5 ದಿನಗಳಿಂದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಬೀಡುಬಿಟ್ಟಿದ್ದ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನತ್ತ ಹೊರಟಿದ್ದಾರೆ. ಕಳೆದ ಐದು ದಿನಗಳಿಂದ ರಾಮನಗರ ತಾಲೂಕಿನ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಇದ್ದ ಹೆಚ್.ಡಿ.ಕುಮಾರಸ್ವಾಮಿ ಇದೀಗ ವಾಕ್ಸಮರ ಅಂತ್ಯಗೊಳಿಸುವ ಸೂಚನೆ ನೀಡಿ ರಾಜಧಾನಿಗೆ ಮರಳುತ್ತಿದ್ದಾರೆ. ತೋಟದೇ ಮನೆಯಿಂದ ಹೊರಡುವಾಗಲೂ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟಿದ್ದಾರೆ.

ಇದನ್ನೂ ಓದಿ: ಟಾಕ್ ಫೈಟ್ ನಡೆಸುತ್ತಿದ್ದ ಸುಮಲತಾ ಈಗ ಟ್ವೀಟ್ ವಾರ್ 

ಮಾತು ಪಕ್ಷವನ್ನೇ ಕೆಡಿಸುತ್ತೆ, ಸುಮ್ನಿರಿ ಎಂದ ದೊಡ್ಡಗೌಡರು; ತೋಟದ ಮನೆಯಲ್ಲಿ ಮೌನಕ್ಕೆ ಶರಣಾದ ಕುಮಾರಸ್ವಾಮಿ

Published On - 1:42 pm, Sat, 10 July 21

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ