AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು. ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ […]

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Apr 24, 2020 | 11:28 AM

Share

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು.

ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ ಮಾಡ್ಬೇಕು, ಇಲ್ಲದಿದ್ರೆ ಇಂದಿನಿಂದ್ಲೇ ಉಗ್ರ ಹೋರಾಟ ಮಾಡ್ತೇನೆ ಎಂದು ಹೆಚ್​ಡಿಕೆ ಟ್ವಿಟ್ಟರ್​ನಲ್ಲಿ ಗುಡುಗಿದ್ದಾರೆ.

ಇತ್ತ ರಾಜ್ಯ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ಪಾದರಾಯನಪುರ ಗಲಾಟೆ ಕೇಸ್​ನಲ್ಲಿ ಅರೆಸ್ಟ್ ಮಾಡಿರೋರನ್ನ ರಾಮನಗರಕ್ಕೆ ಶಿಫ್ಟ್ ಮಾಡದಂತೆ ಗೃಹಸಚಿವರಿಗೆ ಪತ್ರ ಬರೆದಿದ್ರು. ಆದ್ರೆ ಬಸವರಾಜ ಬೊಮ್ಮಾಯಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಒಟ್ನಲ್ಲಿ ಸರ್ಕಾರದ ಎಡವಟ್ಟೋ, ಅಥವಾ ಆತುರದ ನಿರ್ಧಾರವೋ ಗೊತ್ತಿಲ್ಲ ಆದ್ರೆ ಗ್ರೀನ್ ಜೋನ್​ನಲ್ಲಿರೋ ರಾಮನಗರ ಜಿಲ್ಲೆಯಲ್ಲೀಗ ಸೋಂಕು ಬಂದಿರೋದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಎಲ್ಲಾ ಆರೋಪಿಗಳನ್ನ ಬೇರೆಡೆಗೆ ಶಿಫ್ಟ್ ಮಾಡ್ಬೇಕು ಅನ್ನೋ ಕೂಗು ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡ್ಬೇಕಿದೆ.

Published On - 10:52 am, Fri, 24 April 20

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ