ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು. ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ […]

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ
ಸಾಧು ಶ್ರೀನಾಥ್​

Updated on: Apr 24, 2020 | 11:28 AM

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು.

ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ!
ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ ಮಾಡ್ಬೇಕು, ಇಲ್ಲದಿದ್ರೆ ಇಂದಿನಿಂದ್ಲೇ ಉಗ್ರ ಹೋರಾಟ ಮಾಡ್ತೇನೆ ಎಂದು ಹೆಚ್​ಡಿಕೆ ಟ್ವಿಟ್ಟರ್​ನಲ್ಲಿ ಗುಡುಗಿದ್ದಾರೆ.

ಇತ್ತ ರಾಜ್ಯ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ಪಾದರಾಯನಪುರ ಗಲಾಟೆ ಕೇಸ್​ನಲ್ಲಿ ಅರೆಸ್ಟ್ ಮಾಡಿರೋರನ್ನ ರಾಮನಗರಕ್ಕೆ ಶಿಫ್ಟ್ ಮಾಡದಂತೆ ಗೃಹಸಚಿವರಿಗೆ ಪತ್ರ ಬರೆದಿದ್ರು. ಆದ್ರೆ ಬಸವರಾಜ ಬೊಮ್ಮಾಯಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಒಟ್ನಲ್ಲಿ ಸರ್ಕಾರದ ಎಡವಟ್ಟೋ, ಅಥವಾ ಆತುರದ ನಿರ್ಧಾರವೋ ಗೊತ್ತಿಲ್ಲ ಆದ್ರೆ ಗ್ರೀನ್ ಜೋನ್​ನಲ್ಲಿರೋ ರಾಮನಗರ ಜಿಲ್ಲೆಯಲ್ಲೀಗ ಸೋಂಕು ಬಂದಿರೋದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಎಲ್ಲಾ ಆರೋಪಿಗಳನ್ನ ಬೇರೆಡೆಗೆ ಶಿಫ್ಟ್ ಮಾಡ್ಬೇಕು ಅನ್ನೋ ಕೂಗು ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡ್ಬೇಕಿದೆ.

Published On - 10:52 am, Fri, 24 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us