AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂದಿ ಎಂದ ಐಪಿಎಸ್​ಗೆ ಸಂಕಷ್ಟ:​ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ

ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಪತ್ರ ಬರೆದಿರುವ ಹೆಚ್​ಡಿ ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೋ ಎಂದು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಹಂದಿ ಎಂದ ಐಪಿಎಸ್​ಗೆ ಸಂಕಷ್ಟ:​ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ
ಹಂದಿ ಎಂದ ಐಪಿಎಸ್​ಗೆ ಸಂಕಷ್ಟ:​ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ
ಕಿರಣ್​ ಹನಿಯಡ್ಕ
| Edited By: |

Updated on:Sep 30, 2024 | 7:46 PM

Share

ಬೆಂಗಳೂರು, ಸೆಪ್ಟೆಂಬರ್​ 30: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ತಾರಕಕ್ಕೇರಿದೆ. ಚಂದ್ರಶೇಖರ್ ಬರೆದಿದ್ದ ಪತ್ರ ಜೆಡಿಎಸ್ ನಾಯಕರನ್ನ ಕೆರಳಿಸಿದ್ದು, ಸಿಎಸ್​ಗೆ ದೂರು ಸಹ ನೀಡಲಾಗಿದೆ. ಈ ಎಲ್ಲದರ ಮಧ್ಯೆ ಚಂದ್ರಶೇಖರ್ ಪತ್ರ ಬರೆದ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಪತ್ರ ಬರೆದಿರುವ ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೋ ಎಂದು ಪರಿಶೀಲಿಸಬೇಕು. ಚಂದ್ರಶೇಖರ್ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖಾ ತನಿಖೆ ನಡೆಸಬೇಕು. ಕರ್ನಾಟಕ ಕೇಡರ್ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಕೂಡ ಪರಿಶೀಲಿಸಬೇಕಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್​ಡಿಕೆಗೆ ಗಂಗೇನಹಳ್ಳಿ ಜತೆ ಶ್ರೀಸಾಯಿ ಮಿನರಲ್ಸ್‌ ಕೇಸ್ ಉರುಳು: ಏನಿದು ಪ್ರಕರಣ?

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸ್ವತಂತ್ರ ಕೇಂದ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಚುನಾವಣಾ ಬಾಂಡ್ ವಿಚಾರವಾಗಿ ಎಫ್‌ಐಆರ್ ದಾಖಲಾದ ಬಗ್ಗೆಯೂ ಪ್ರಸ್ತಾಪಿಸಿದ್ದು, ಪೊಲೀಸ್ ಅಧಿಕಾರಿಗಳು, ಕಾಂಗ್ರೆಸ್ ನಾಯಕರ ನಡುವಿನ ಸಂಬಂಧದ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ.

ಚಂದ್ರಶೇಖರ್​ ಯಾವ ಕಚೇರಿಯಲ್ಲಿ ಕೂತು ಲೆಟರ್ ಬರೆದರೂ, ಕೆಪಿಸಿಸಿ ಕಚೇರಿಯಿಂದಲೇ ಕೂತು ಬರೆದ್ರೋ, ಎಲ್ಲವೂ ನನಗೆ ಗೊತ್ತಿದೆ ಅಂತಾ ಕುಮಾರಸ್ವಾಮಿ ಬಾಂಬ್ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್​ ಕೆಪಿಸಿಸಿಗೂ? ಚಂದ್ರಶೇಖರ್​​ಗೂ ಏನ್ ಸಂಬಂಧ ಅಂತಾ ತಿರುಗೇಟು ನೀಡಿದ್ದರು.

ಚಂದ್ರಶೇಖರ್ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘ ಆಗ್ರಹ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತಾಗಿ ಎಡಿಜಿಪಿ ಚಂದ್ರಶೇಖರ್ ಪದ ಬಳಕೆ ವಿಚಾರವಾಗಿದೆ. ಚಂದ್ರಶೇಖರ್ ವಿರುದ್ಧ ಸೂಕ್ತ ಕ್ರಮ ಜರುಗಿಸಲು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದ್ದು, ಕ್ರಮ ಜರುಗಿಸಿ ಹದ್ದುಬಸ್ತಿನಲ್ಲಿಡುವಂತೆ ಒತ್ತಾಯಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Mon, 30 September 24

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ