AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಗಳಲ್ಲಿ ಬಂದ ಅರ್ಜಿಗಳೆಷ್ಟು? ಕುಮಾರಸ್ವಾಮಿ ಹೇಳಿದ್ದೇನು?

ಇಂದು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಇದೀಗ ಅಂತ್ಯವಾಗಿದೆ. ಬಳಿಕ ಮಾತನಾಡಿದ ಅವರು, ಜನತಾದರ್ಶನದಲ್ಲಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. 7 ಗಂಟೆಗಳ ಕಾಲ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಗಳಲ್ಲಿ ಬಂದ ಅರ್ಜಿಗಳೆಷ್ಟು? ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಗಳಲ್ಲಿ ಬಂದ ಅರ್ಜಿಗಳೆಷ್ಟು? ಕುಮಾರಸ್ವಾಮಿ ಹೇಳಿದ್ದೇನು?
ಪ್ರಶಾಂತ್​ ಬಿ.
| Edited By: |

Updated on: Jul 05, 2024 | 10:06 PM

Share

ಮಂಡ್ಯ, ಜುಲೈ 05: ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಯೋಜಿಸಿದ್ದ ಜನತಾದರ್ಶನ (Janata Darshan) ಅಂತ್ಯವಾಗಿದೆ. ಬೆಳಗ್ಗೆ 11.30ರಿಂದ ನಿರಂತರವಾಗಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಜನತಾ ದರ್ಶನ ನಡೆಸಿದ್ದಾರೆ. ಊಟಕ್ಕೂ ತೆರಳದೆ ಜನರ ಅಹವಾಲು ಸ್ವೀಕರಿಸಿದ್ದಾರೆ. ಸರ್ಕಾರದ ಸೂಚನೆ ಹಿನ್ನೆಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ ಅಧಿಕಾರಿಗಳು‌‌‌‌ ಬಂದಿರಲಿಲ್ಲ. ಆದರೂ ಸಮಸ್ಯೆ ಆಲಿಸಿದ ಹೆಚ್ ಡಿ ಕುಮಾರಸ್ವಾಮಿ ಪರಿಹಾರ ಒದಗಿಸಲು‌ ಮುಂದಾಗಿದ್ದಾರೆ. ಹೆಚ್ಚು ಜನರಿದ್ದ ಹಿನ್ನೆಲೆ ಹೊರಗೆ ಊಟಕ್ಕೆ ತೆರಳದೆ ಜನತಾ ದರ್ಶನ ಕಾರ್ಯಕ್ರಮದಲ್ಲೇ ಊಟ ಮಾಡಿದ್ದಾರೆ.

ಜನತಾದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಜನರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುವ ಬಗ್ಗೆ ವಿಶ್ವಾಸವಿಲ್ಲ. ಮಂಡ್ಯ ನಗರದಲ್ಲಿ ನಿವೇಶನ ನೀಡುವಂತೆ ಸಾಕಷ್ಟು ಒತ್ತಡವಿದೆ. ರಾಜಕಾರಣ ಬೇರೆ, ಕೆಲವು ಕಾರ್ಯಕ್ರಮ ತರಲು ಅವಕಾಶ ಇದೆ. ಸಿಎಂ ಸಿದ್ದರಾಮಯ್ಯ, ಸಚಿವರು ಕೂಡ ಜನತಾದರ್ಶನ ಮಾಡಿದ್ದರು. ಚುನಾವಣೆ ಮುಂಚೆ ಜನತಾದರ್ಶನದಲ್ಲಿ ಎಷ್ಟು ಪರಿಹಾರ ಸಿಕ್ಕಿದೆ ಅಂತಾ ಜನತಾದರ್ಶನ ವೇಳೆ ದರ್ಶನವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದು, ಇನ್ಮುಂದೆ ಆದರೂ ಕೆಲಸ ಮಾಡುವಂತೆ ಕಿವಿಮಾತು ಹೇಳಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಲವು ವಿಚಾರ ಸುತ್ತಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರೇ ಪ್ರೇರಣೆ ನೀಡುತ್ತಿದ್ದಾರೆ. ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಈ ರೀತಿಯ ಅಧಿಕಾರ ಇನ್ನೆಷ್ಟು ದಿನ ನಡೆಸುತ್ತೀರಿ. ಜನ ಅಧಿಕಾರ ಕೊಟ್ಟಿದ್ದಾರೆ, ತಿರುಗಿಬೀಳುವ ಮೊದಲು ಎಚ್ಚರವಹಿಸಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಂಡ್ಯ: ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು: ಸರ್ಕಾರದ ವಿರುದ್ಧ ಗರಂ

ಜನತಾದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ಸುತ್ತೋಲೆ ಹೊರಡಿಸಿದ್ದಾರೆ. ಜನತಾದರ್ಶನ ನಡೆಸಲು ನನಗೆ ಅಧಿಕಾರ ಇಲ್ವಾ? ಲೋಕಸಭೆ ಚುನಾವಣೆಗೂ ಮುನ್ನ ಬೆಂಗಳೂರು ಗ್ರಾಮಾಂತರದಲ್ಲಿ ಸಭೆ ಮಾಡಿದ್ದರು. ಅಂದಿನ ಸಂಸದರು ಹಳ್ಳಿಹಳ್ಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿದ್ದರು ಎಂದು ಡಿ.ಕೆ.ಸುರೇಶ್ ನಡೆಸಿದ್ದ ಸಭೆ ಫೋಟೋ ಪ್ರದರ್ಶಿಸಿದರು.

ಹೆಚ್​ಡಿ ಕುಮಾರಸ್ವಾಮಿ ಜನತಾದರ್ಶನ ಮಾಡ್ತಿದ್ದಾನೆಂದು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ಜನರಿಂದ ಆಯ್ಕೆಯಾದ ಪ್ರತಿನಿಧಿಗೆ ಜನತಾದರ್ಶನಮಾಡುವ ಅವಕಾಶವಿದೆ. ರಾಜ್ಯ ಸರ್ಕಾರಕ್ಕೆ ಅಲ್ಪಸ್ವಲ್ಪವಾದರೂ ಜ್ಞಾನ ಇದೆಯಾ ಎಂದು ಪ್ರಶ್ನಿಸಿದರು. ನಾನು ರಾಜ್ಯ ಸರ್ಕಾರದ ಶಿಷ್ಟಾಚಾರ ನಂಬಿ ರಾಜಕಾರಣ ಮಾಡುತ್ತಿಲ್ಲ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದರಲ್ಲಿ ಸಂಶಯವೇ ಇಲ್ಲ. ಅಧಿಕಾರಿಗಳನ್ನು ರಾತ್ರೋರಾತ್ರಿ ವರ್ಗಾವಣೆ ಮಾಡುತ್ತಿದ್ದಾರೆಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಕುಮಾರಸ್ವಾಮಿ ಜನತಾದರ್ಶನಕ್ಕೆ ಅಧಿಕಾರಿಗಳ ಗೈರು: ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ

HMT ಭೂಮಿ ಯಾರು ಯಾರು ಹೊಡೆದಿದ್ದೀರಿ, ಅದರ ಬಗ್ಗೆ ತನಿಖೆ ಮಾಡುತ್ತಿರಾ? ರಾಜ್ಯ ಸರ್ಕಾರಕ್ಕೆ ಬರುತ್ತಿದ್ದ ಆದಾಯದ ಬಗ್ಗೆ ಚಿಂತೆ ಮಾಡಿದ್ದೀರಾ? ನಾನು ಕಡುಬು ತಿನ್ನಲು ಕುಳಿತಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜಾಗಟೆ ಬಾರಿಸಿದ್ದರು. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿಲ್ಲ, ಇವರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!