AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna Kidnap Case: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಅವರಿಗೆ ವಿಚಾರಣಾಧೀನ ಕೈದಿ ನಂಬರ್ 4567 ನೀಡಲಾಗಿದೆ. ಜೈಲು ಸೇರಿದ್ದ ಮೊದಲ ದಿನ ರಾತ್ರಿ ಸರಿಯಾಗಿ ನಿದ್ದೆ, ಊಟ ಮಾಡದೆ ತೊಳಲಾಡಿದ್ದ ರೇವಣ್ಣ, ಎರಡನೇ ದಿನವೂ ನೋವಿನಲ್ಲೇ ಸಮಯ ಕಳೆದಿದ್ದಾರೆ. ಇದರ ಮಧ್ಯೆ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದಿನಿಂದ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆ ಆಪ್ತರು, ಕುಟುಂಬಸ್ಥರಿಗೆ ಭೇಟಿಗೆ ಅವಕಾಶವಿಲ್ಲ.

HD Revanna Kidnap Case: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ
3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ
ರಾಮು, ಆನೇಕಲ್​
| Edited By: |

Updated on: May 10, 2024 | 3:39 PM

Share

ಬೆಂಗಳೂರು, ಮೇ 10: ಕಿಡ್ನ್ಯಾಪ್ ಕೇಸ್​ನಲ್ಲಿ ಜೈಲು ಪಾಲಾಗಿರುವ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ವಿಲ ವಿಲ ಅಂತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಚಡಪಡಿಸುತ್ತಿದ್ದಾರೆ. ರಾತ್ರಿ ನಿದ್ರೆ ಇಲ್ಲದೆಯೇ ಹೈರಾಣಾಗಿದ್ದಾರೆ. ಇದರ ಮಧ್ಯೆ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆ ಆಪ್ತರು, ಕುಟುಂಬಸ್ಥರಿಗೆ ರೇವಣ್ಣ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ದುಗುಡ ಹೇಳಿಕೊಳ್ಳುತ್ತಿದ್ದರು. ಆ ಮೂಲಕ ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅದಕ್ಕೂ ಸರ್ಕಾರಿ ರಜೆ ಅಡ್ಡಿಯಾಗಿದೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಹೆಚ್​​.ಡಿ.ರೇವಣ್ಣ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎಸ್​ಐಟಿ ಅಧಿಕಾರಿಗಳಿಂದ ಪಂಚನಾಮೆ ಸಾಧ್ಯತೆ ಹಿನ್ನೆಲೆ ಅಗತ್ಯವಿರುವ ಪರಿಕರಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಭದ್ರತೆ ನೀಡಲಾಗಿದೆ.

ಜಾಮೀನು ಸಿಗದ್ದಕ್ಕೆ ಜೈಲಿನಲ್ಲಿ ರೇವಣ್ಣ ಕಂಗಾಲು

ಜಾಮೀನು ನಿರೀಕ್ಷೆಯಲ್ಲಿದ್ದ ಹೆಚ್.ಡಿ.ರೇವಣ್ಣಗೆ ರಿಲೀಫ್ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇದರಿಂದಾಗಿ ಕಂಗಾಲಾಗಿರುವ ಹೆಚ್.ಡಿ.ರೇವಣ್ಣ ಮತ್ತಷ್ಟು ಟೆನ್ಷನ್​ಗೆ ಒಳಗಾಗಿದ್ದಾರೆ. ಬೇಲ್ ಸಿಗದ್ದಕ್ಕೆ ರೇವಣ್ಣ ಮತ್ತಷ್ಟು ಮಂಕಾಗಿದ್ದಾರೆ ಎನ್ನಲಾಗಿದೆ.

ಹೊಟ್ಟೆ ನೋವಿನ ಬಳಿಕ ರೇವಣ್ಣಗೆ ಬೆನ್ನು ನೋವಿನ ಸಮಸ್ಯೆ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೊಟ್ಟೆ ನೋವು ಕಾಣಿಸಿಕೊಂಡ ಬಳಿಕ ಈಗ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ಡಾ.ಹರ್ಷವರ್ಧನ್ ರೇವಣ್ಣಗೆ ಚಿಕಿತ್ಸೆಯನ್ನ ನೀಡಿದ್ದಾರೆ. ರೇವಣ್ಣ ಆರೋಗ್ಯದ ಮೇಲೆ ಜೈಲಿನ ಸಿಬ್ಬಂದಿ ನಿಗಾ ಇಟ್ಟಿದ್ದಾರೆ.

ಇದನ್ನೂ ಓದಿ: ಎಚ್‌.ಡಿ ರೇವಣ್ಣಗೆ ಮತ್ತೆ ಬಿಗ್‌ಶಾಕ್‌.. ಇನ್ನಷ್ಟು ದಿನ ಜೈಲುವಾಸ ಮುಂದುವರಿಕೆ!

ರೇವಣ್ಣಗೆ ಜೈಲಲ್ಲಿ ಚಿಕಿತ್ಸೆ ನೀಡಿದ ಬಳಿಕ ಮಲಗಲು ದಿವಾನ್ ಕಾಟ್ ನೀಡಲಾಗಿದೆ. ಜೈಲಿನ ಕ್ವಾರಂಟೈನ್ ರೂಮ್​ನಲ್ಲಿ ಇದ್ದಾರೆ. ಈ ಹಿಂದೆ ಪಿಎಸ್​ಐ ನೇಮಕಾತಿಯ ಅಕ್ರಮ ಕೇಸ್​​ನಲ್ಲಿ ಅಮೃತ್ ಪಾಲ್ ಇದ್ದ ಕೊಠಡಿಯಲ್ಲಿಯೇ ರೇವಣ್ಣ ಇದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು: ಸಂತ್ರಸ್ತೆಗೆ ಬೆದರಿಕೆ, ಮಹಿಳಾ ಆಯೋಗದಿಂದ ಬಹಿರಂಗ

ಹೆಚ್.ಡಿ.ರೇವಣ್ಣಗೆ ಧೈರ್ಯ ತುಂಬಲು ನಿನ್ನೆ ದಳ ಶಾಸಕರು ಭೇಟಿ ನೀಡಿದ್ದರು. ಶ್ರವಣಬೆಳಗೊಳ ಶಾಸಕ ಸಿ.ಎನ್.ಬಾಲಕೃಷ್ಣ, ಅರಕಲಗೂಡು ಶಾಸಕ ಎ.ಮಂಜು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ರೇವಣ್ಣಗೆ ಮಾನಸಿಕ ಸ್ಥೈರ್ಯ ತುಂಬಿದ್ದರು. ಶಾಸಕರ ಭೇಟಿ ವೇಳೆ ನ್ಯಾಯಾಲಯ ಇದೆ, ಧರ್ಮ ಇದೆ ಅಂತಾ ಹೇಳಿರುವ ರೇವಣ್ಣ. ಸೋಮವಾರ ಏನಾಗುತ್ತೆ ನೋಡೋಣ ಅಂತಾ ತಿಳಿಸಿದ್ರಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ