AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವೈರಸ್ ಬಗ್ಗೆ ಆತಂಕ ಬೇಡ, ನಿಗದಿಯಂತೆ ಶಾಲಾ ಕಾಲೇಜು ಆರಂಭ: ಡಾ.ಕೆ. ಸುಧಾಕರ್

ಹೊಸ ವೈರಸ್ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡಿಸಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಹೊಸ ವೈರಸ್ ಬಗ್ಗೆ ಆತಂಕ ಬೇಡ, ನಿಗದಿಯಂತೆ ಶಾಲಾ ಕಾಲೇಜು ಆರಂಭ: ಡಾ.ಕೆ. ಸುಧಾಕರ್
ಡಾ. ಕೆ ಸುಧಾಕರ್, ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 30, 2020 | 12:27 PM

Share

ಬೆಂಗಳೂರು: ಜನವರಿ 1 ರಿಂದ ನಿಗದಿಯಂತೆ ಶಾಲಾ ಕಾಲೇಜು ಆರಂಭವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಹಾವಳಿಗೆ 9 ತಿಂಗಳಿನಿಂದ ಶಾಲೆ ಕಾಲೇಜುಗಳು ನಡೆಯದೆ ಬಹುತೇಕ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಹೊಸ ವೈರಸ್ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡಿಸಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಶಾಲೆ ಹಾಗೂ ವಿದ್ಯಾಗಮ ಪ್ರಾರಂಭಿಸಬಹುದೆಂದು ಸಲಹೆಯನ್ನು ಪಡೆದಿದ್ದೇವೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಆತಂಕ ಬೇಡ: ಕೊರೊನಾ ಸೋಂಕಿನ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಒತ್ತಾಯ ಕೂಡಾ ಮಾಡುವುದಿಲ್ಲ. ಆದರೆ ಶಾಲೆಗೆ ಬರುವ ಮಕ್ಕಳು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು ಎಂದರು.

ವಿದ್ಯಾರ್ಥಿಗಳ ಮನವಿ ಜನವರಿ 1ರಿಂದ ಶಾಲಾ-ಕಾಲೇಜುಗಳ ಆರಂಭ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನ ಕಾಲೇಜಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು. ಆನ್​ಲೈನ್ ಕ್ಲಾಸ್ ಮುಂದುವರೆಸಬೇಕಾ? ಅಥವಾ ಬೇಡವಾ? ಎಂದು ಸಚಿವರು ಕೇಳಿದ ಪ್ರಶ್ನೆಗೆ ಬೇಡ ಎಂದು  ವಿದ್ಯಾರ್ಥಿಗಳು ಉತ್ತರಿಸಿದ್ದು, ಪಾಠಕ್ಕೆ ಸಂಬಂಧಿಸಿದ ಗೊಂದಲಗಳನ್ನು ಕೇಳಲು ಕಷ್ಟವಾಗುತ್ತಿದೆ. ಹೀಗಾಗಿ ಶಾಲೆಗಳನ್ನು ತೆರೆಯಿರಿ ಎಂದು ವಿದ್ಯಾರ್ಥಿಗಳು ಸಚಿವ ಸುರೇಶ್ ಕುಮಾರ್​ಗೆ  ಮನವಿ ಮಾಡಿದರು.

60 ಕೋಟಿ ಡೋಸ್ Covid-19 ಲಸಿಕೆ ವಿತರಣೆಗೆ ಸಜ್ಜಾಗಿದೆ ದೇಶ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ