AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Certificate: ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ

ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳವಾಗುತ್ತಿದೆ. ಅದರಲ್ಲೂ ಚಾಲಕರಲ್ಲೇ ಹಾರ್ಟ್​ ಅಟ್ಯಾಕ್ ಹೆಚ್ಚು ಕಂಡುಬರುತ್ತಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ, ಚಾಲಕರಿಗೆ ಕಡ್ಡಾಯ ಹೆಲ್ತ್​ ಸರ್ಟಿಫಿಕೇಟ್​​ ಜಾರಿಗೊಳಿಸುವ ಬಗ್ಗೆ ಚಿಂತನೆ ಮಾಡಿದೆ. ಚಾಲಕರು ಡಿಎಲ್​ (ಚಾಲನಾ ಪರವಾನಗಿ) ಮಾದರಿಯಲ್ಲಿ ಹೆಲ್ತ್​ ಕಾರ್ಡ್ ಅನ್ನು ಕೂಡಾ ಹೊಂದಿರಬೇಕು ಎಂಬ ನಿಯಮ ಜಾರಿಗೊಳಿಸಲು ಮುಂದಾಗಿದೆ.

Health Certificate: ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Aug 01, 2025 | 7:00 AM

Share

ಬೆಂಗಳೂರು, ಆಗಸ್ಟ್ 1: ಇತ್ತೀಚಿಗೆ ಅನೇಕರಲ್ಲಿ, ಅದರಲ್ಲೂ ಯುವ ಸಮೂಹದವರಲ್ಲಿ ಹೃದಯಾಘಾತ (Heart Attack) ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಸರ್ಕಾರವು ಹೃದಯಾಘಾತ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಮಾಡಲು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿತ್ತು. ಜಯದೇವ ಆಸ್ಪತ್ರೆಯ ವೈದ್ಯರ ತಂಡ ಕೂಡ ವರದಿ ನೀಡಿತ್ತು. ಈ ವರದಿಗಳಲ್ಲಿ ಚಾಲಕರಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ಉಲ್ಲೇಖವಾಗಿದೆ. ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸಲಹೆ ಕೂಡ ನೀಡಲಾಗಿತ್ತು.

ಈ ವರದಿಯ ಬೆನ್ನಲ್ಲೇ ಇದೀಗ ಆರೋಗ್ಯ ಇಲಾಖೆ ಚಾಲಕರ ಆರೋಗ್ಯದ ಮೇಲೆ ನಿಗಾ ವಹಿಸಲು ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮ ರೂಪಿಸಲು ರೂಪುರೇಷೆ ಸಿದ್ಧಪಡಿಸಿದೆ. ಅದರಂತೆ ಆಟೋ, ಕ್ಯಾಬ್, ಬಸ್​​ ಚಾಲಕರಿಗೆ ಡಿಎಲ್ (ಚಾಲನಾ ಪರವಾನಗಿ)​ ಹೇಗೆ ಕಡ್ಡಾಯವೋ ಅದೇ ರೀತಿ ಇನ್ಮುಂದೆ , ಹೆಲ್ತ್​ ಚೆಕಪ್​ ಸರ್ಟಿಫಿಕೇಟ್​ (ಹೆಲ್ತ್ ಕಾರ್ಡ್) ಕಡ್ಡಾಯ ಮಾಡಲು ಚಿಂತನೆ ನಡೆಸಿದೆ. ಚಾಲಕರಿಗೆ ಇಸಿಜಿ, ಬಿಪಿ, ಶುಗರ್​ ಪರೀಕ್ಷೆ ಮಾಡಿಸಿ ಅವರು ಫಿಟ್​ ಇದ್ದಾರೋ ಇಲ್ಲವೋ ಎಂಬ ಪ್ರಮಾಣಪತ್ರ ನೀಡಲಾಗುತ್ತದೆ.

ಆರೋಗ್ಯ ಪ್ರಮಾಣಪತ್ರಕ್ಕೆ ತಪಾಸಣೆ ಯಾವಾಗ?

ಡಿಎಲ್​ ಪಡೆಯುವಾಗ, ರಿನೀವಲ್ ಮಾಡಿಸುವಾಗ, ಜೊತೆಗೆ ಎಫ್​ಸಿ ಮಾಡಿಸುವಾಗ ಚಾಲಕರಿಗೆ ಹೆಲ್ತ್ ಕಾರ್ಡ್​ ನೀಡುವಂತೆ ಇಲಾಖೆ ನಿಯಮ ರೂಪಿಸಲಿದೆ. ಈಗಾಗಲೇ ಸಂಬಂಧ ಪಟ್ಟ ಸಾರಿಗೆ ಇಲಾಖೆ, ಟ್ರಾಫಿಕ್ ಪೊಲೀಸ್ ಇಲಾಖೆ ಜೊತೆಗೆ ಕೂಡಾ ಚರ್ಚಿಸಿದ್ದು, ಆರೋಗ್ಯ ಇಲಾಖೆಯಿಂದಲೇ ಹೆಲ್ತ್​ ಚೆಕಪ್ ಮಾಡಿಸಬೇಕಾ ಅಥವಾ, ಬೇರೆಡೆಯಿಂದ ಪ್ರಮಾಣಪತ್ರ ಸಲ್ಲಿಕೆ ಮಾಡಲು ಸೂಚಿಸಬೇಕೇ ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ಚಾಲಕರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವ ಬಗ್ಗೆ ಆಟೋ, ಕ್ಯಾಬ್ ಚಾಲಕರು ಕೂಡಾ ಆತಂಕ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆ ಹೆಲ್ತ್​ ಸರ್ಟಿಫಿಕೇಟ್ ಕಡ್ಡಾಯ ಮಾಡುತ್ತಿರುವುದನ್ನು ಸ್ವಾಗತಿಸಿದ್ದಾರೆ. ಈ ರೀತಿ ಮಾಡುವುದರಿಂದ ನಮಗೆ ಅನುಕೂಲ ಇದೆ. ನಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ನಮಗೂ ಕೂಡಾ ಅನೇಕ ಒತ್ತಡಗಳಿರುತ್ತವೆ ಎಂದು ಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ಚರ್ಮದ ಮೇಲೆ ಈ ಸಮಸ್ಯೆಗಳು ಕಾಣಿಸಿಕೊಂಡರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು; ನಿರ್ಲಕ್ಷ್ಯ ಬೇಡ

ಒಟ್ಟಿನಲ್ಲಿ ಆರೋಗ್ಯ ಇಲಾಖೆ ಕಡ್ಡಾಯ ಹೆಲ್ತ್​ ಸರ್ಟಿಫಿಕೇಟ್​ ಜಾರಿಗೆ ಭಾಗಶಃ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ