AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಳ: ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ನಡೆಸಿದ ಮಹತ್ವ ಸಭೆ ಅಂತ್ಯವಾಗಿದೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಳ: ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 19, 2023 | 3:34 PM

Share

ಬೆಂಗಳೂರು, (ಡಿಸೆಂಬರ್ 19): ಕರ್ನಾಟಕದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ(Coronavirus JN1) ತಳಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇನ್ನು ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಆರೋಗ್ಯ ಇಲಾಖೆಯಿಂದ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಿದ್ದೇವೆ. ಕೊವಿಡ್ ಟೆಸ್ಟ್​ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ. ಕೊವಿಡ್ ಟೆಸ್ಟಿಂಗ್​ ಕಿಟ್​​ ಖರೀದಿಗೂ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಿಸಲಾಗುವುದು. ಆರಂಭದಲ್ಲಿ 500 ರಿಂದ 1000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ಒಂದು ವಾರದ ಬಳಿಕ 5000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ವಿಶ್ವದಲ್ಲಿ JN1 ವೈರಸ್ ನವೆಂಬರ್ ನಲ್ಲಿ​ 10% ಹರಡುವಿಕೆ ಇತ್ತು. ಈಗ ಡಿಸೆಂಬರ್ ವೇಳಗೆ 30% ಆಗಿದೆ. ನಮಲ್ಲಿಯೂ ಟೆಸ್ಟ್ ಮಾಡಿದಾಗ ಈ ಸ್ಟ್ರೇನ್ ಬರುವ ಸಾಧ್ಯತೆ ಇದೆ.  ಟೆಸ್ಟಿಂಗ್ ಹೆಚ್ಚಳದ ಬಳಿಕ ಕೊವಿಡ್ ಸ್ಪಷ್ಟತೆ ಸಿಗಲಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ಸೂಚನೆ ನೀಡಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ RTPCR ತಪಾಸಣೆ ಮಾಡಬೇಕು. ಒಂದು ವೇಳೆ ಟೆಸ್ಟ್​​ನಲ್ಲಿ ಪಾಸಿಟಿವ್ ಬಂದ್ರೆ ಜೆನೆಮಿಕ್ ಸೀಕ್ವೆನ್ಸ್​​​​ಗೆ ಸ್ಯಾಂಪಲ್ ಕಳಿಸಬೇಕು ಎಂದರು.

ಇದನ್ನೂ ಓದಿ: Karnataka Covid Guidelines: ಕರ್ನಾಟಕ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ವಿವರ

ಎರಡು ಪ್ರತ್ಯೇಕ ಮಾರ್ಗಸೂಚಿ

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್