AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಇಲ್ಲದ ರೋಗಿಗಳ ಚಿಕಿತ್ಸೆಗೆ ಹೊಸ ವ್ಯವಸ್ಥೆ, ಆಕ್ಸಿಜನ್​ಗೆ ಕಾಲ್​ಸೆಂಟರ್: ಡಾ.ಕೆ.ಸುಧಾಕರ್

ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜುಗಳು ಈವರೆಗೆ 4000 ಬೆಡ್​ಗಳನ್ನು ಕೊವಿಡ್ ಚಿಕಿತ್ಸೆಗೆ ನೀಡಿವೆ. ಸರ್ಕಾರಿ ಮೆಡಿಕಲ್ ಕಾಲೇಜ್​ಗಳಲ್ಲಿ 1000, ಸರ್ಕಾರಿ ಆಸ್ಪತ್ರೆಯಲ್ಲಿ 1400 ಬೆಡ್​ಗಳು ಲಭ್ಯವಿವೆ ಎಂದು ಹೇಳಿದ್ದಾರೆ.

ಕೊವಿಡ್ ಇಲ್ಲದ ರೋಗಿಗಳ ಚಿಕಿತ್ಸೆಗೆ ಹೊಸ ವ್ಯವಸ್ಥೆ, ಆಕ್ಸಿಜನ್​ಗೆ ಕಾಲ್​ಸೆಂಟರ್: ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 21, 2021 | 7:39 PM

ಬೆಂಗಳೂರು: ಕರ್ನಾಟಕದಲ್ಲಿ ಆರೋಗ್ಯ ವ್ಯವಸ್ಥೆಯ ಮೊದಲ ಆದ್ಯತೆ ಕೊವಿಡ್-19 ರೋಗಿಗಳಿಗೆ ಇದೆ. ಕೊರೊನಾ ಸೋಂಕು ಇಲ್ಲದ ರೋಗಿಗಳನ್ನು ಮುಂದಿನ ದಿನಗಳಲ್ಲಿ 30 ಬೆಡ್​ಗಳಿಗಿಂತ ಕಡಿಮೆ ಇರುವ ನರ್ಸಿಂಗ್ ಹೋಂಗಳಿಗೆ ರವಾನೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಕೂಡ ಸಣ್ಣ ಸಮಸ್ಯೆ ಕೂಡ ಆಗಬಾರದೆಂದು ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ. ಅಗತ್ಯ ಇರುವವರು ಕಾಲ್​ಸೆಂಟರ್​ಗೆ (ಸಂಖ್ಯೆ 89517 55722) ಕರೆ ಮಾಡಿದರೆ ನೆರವು ನೀಡಲಾಗುವುದು. ಆಕ್ಸಿಜನ್ ಎಲ್ಲಿಯೇ ಬೇಕಾದರೂ ಈ ಸಂಖ್ಯೆಗೆ ಫೋನ್ ಮಾಡಿದರೆ ಸರಬರಾಜು ಮಾಡುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಯಾವ ರಾಜ್ಯಕ್ಕೆ ಎಷ್ಟು ಆಮ್ಲಜನಕ ಬೇಕು ಎಂಬುದನ್ನು ಕೇಂದ್ರ ಸರ್ಕಾರ ನಿಗದಿಪಡಿಸುತ್ತದೆ. ಕೇಂದ್ರ ನಮಗೆ 300 ಟನ್ ಫಿಕ್ಸ್ ಮಾಡಿದೆ. ಮುಂದಿನ ದಿನಗಳಲ್ಲಿ ನಮಗೆ 1500 ಟನ್ ಬೇಕಾಗಬಹುದು. ಈ ಪ್ರಮಾಣದ ಆಮ್ಲಜನಕ ಪೂರೈಸುವಂತೆ ಕೇಂದ್ರ ಆರೋಗ್ಯ ಮತ್ತು ಕೈಗಾರಿಕಾ ಸಚಿವರನ್ನು ವಿನಂತಿಸಿದ್ದೇನೆ. ರೆಮ್​ಡೆಸಿವಿರ್ ಔಷಧಿಯ ಪೂರೈಕೆಯನ್ನೂ ಹೆಚ್ಚಿಸುವಂತೆ ಕೋರಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜುಗಳು ಈವರೆಗೆ 4000 ಬೆಡ್​ಗಳನ್ನು ಕೊವಿಡ್ ಚಿಕಿತ್ಸೆಗೆ ನೀಡಿವೆ. ಸರ್ಕಾರಿ ಮೆಡಿಕಲ್ ಕಾಲೇಜ್​ಗಳಲ್ಲಿ 1000, ಸರ್ಕಾರಿ ಆಸ್ಪತ್ರೆಯಲ್ಲಿ 1400 ಬೆಡ್​ಗಳು ಲಭ್ಯವಿವೆ ಎಂದು ಹೇಳಿದ್ದಾರೆ.

ಐಸಿಯು ಬೆಡ್​ಗಳ ಸಂಖ್ಯೆ ಹೆಚ್ಚಿಸುವುದೇ ಬೆಂಗಳೂರಿನಲ್ಲಿ ನಮಗಿರುವ ದೊಡ್ಡ ಸವಾಲು. 2000 ಮೇಕ್​ಶಿಫ್ಟ್ ಐಸಿಯು ಬೆಡ್​ಗಳು, ಮಾಡ್ಯುಲರ್ ಐಸಿಯುಗಳನ್ನು ಇನ್ನು 15 ದಿನಗಳಲ್ಲಿ ಸಿದ್ದಪಡಿಸ್ತೇವೆ. ಬೆಂಗಳೂರಿನ 8 ಕಡೆಗಳಲ್ಲಿ ಈ ಮಾಡ್ಯುಲರ್ ಐಸಿಯು ಅಳವಡಿಸುತ್ತೇವೆ. ಕಟ್ಟುನಿಟ್ಟಿನ ಕ್ರಮಗಳನ್ನು ಜನರು ಪಾಲಿಸಿದರೆ ನಾಗಾಲೋಟ ಕಡಿಮೆಯಾಗುತ್ತದೆ ಎಂದು ಅವರು ಹೇಳಿದರು.

ಕೊವಿಡ್​ನಿಂದ ಮೃತರ ಅಂತ್ಯಕ್ರಿಯೆ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ 8 ವಲಯಗಳಲ್ಲಿ ಅಂತ್ಯಕ್ರಿಯೆಗೆ ಕೆಲ ಜಮೀನುಗಳನ್ನು ಕಂದಾಯ ಇಲಾಖೆ ಗುರುತಿಸಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.

(Health Minister Dr K Sudhakar Announces New System for No Covid Patient Treatment Oxygen Supply)

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 23,558 ಮಂದಿಗೆ ಸೋಂಕು, ಕೊರೊನಾದಿಂದ 116 ಜನರ ಸಾವು

ಇದನ್ನೂ ಓದಿ: ಮಾಸ್ಕ್ ಹಾಕದೇ ಬಸ್​ಗೆ ಕಾಯುತ್ತಿದ್ದವರಿಗೆ ಕೊರೊನಾ ಪಾಠ ಮಾಡಿದ ಸಚಿವ ಸುರೇಶ್ ಕುಮಾರ್

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ