AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ -ಡಾ. ಕೆ.ಸುಧಾಕರ್​ ಮನವಿ

ಕೆಲ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ. ಮುಂದಿನ 2 ತಿಂಗಳು ಅತ್ಯಂತ ಮಹತ್ವ ಪಡೆದಿದೆ, ಉದಾಸೀನ ಮಾಡಬೇಡಿ. ಎಲ್ಲರೂ ಹಬ್ಬಗಳನ್ನ ಸರಳವಾಗಿ ಆಚರಣೆ ಮಾಡಬೇಕು ಎಂದು ಮಂಚೇನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ -ಡಾ. ಕೆ.ಸುಧಾಕರ್​ ಮನವಿ
ಡಾ.ಕೆ. ಸುಧಾಕರ್​
KUSHAL V
| Edited By: |

Updated on: Mar 26, 2021 | 5:44 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಎಲ್ಲರೂ ಮಾಸ್ಕ್​ ಧರಿಸಬೇಕು, ಅಂತರ ಕಾಪಾಡಬೇಕು ಎಂದು ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೆಲ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ. ಮುಂದಿನ 2 ತಿಂಗಳು ಅತ್ಯಂತ ಮಹತ್ವ ಪಡೆದಿದೆ, ಉದಾಸೀನ ಮಾಡಬೇಡಿ. ಎಲ್ಲರೂ ಹಬ್ಬಗಳನ್ನ ಸರಳವಾಗಿ ಆಚರಣೆ ಮಾಡಬೇಕು ಎಂದು ಮಂಚೇನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಕೊರೊನಾದಿಂದ ಎಷ್ಟೋ ಮನೆಗಳಲ್ಲಿ ಸಾವು ನೋವು ಸಂಭವಿಸಿದೆ. ಹೀಗಾಗಿ ನಾನು, ನನ್ನ ಮನೆಗೆ ಕೊರೊನಾ ಬಂದಿಲ್ಲವೆಂದು ಉದಾಸೀನ ಬೇಡ. 40 ವರ್ಷ ಮೇಲ್ಪಟ್ಟವರೆಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಸುಧಾಕರ್​ ಮನವಿ ಮಾಡಿದರು. ಬೆಂಗಳೂರು ಕರಗ ಸೇರಿದಂತೆ ಪ್ರತಿಯೊಂದು ಹಬ್ಬವನ್ನು ಸರಳವಾಗಿ ಆಚರಿಸಿ ಅಂತಾ ಸುಧಾಕರ್​ ಮನವಿ ಮಾಡಿದರು.

ಮಹಾರಾಷ್ಟ್ರ, ಕೇರಳ, ಪಂಜಾಬ್​ ಹಾಗೂ ಚಂಡೀಗಢದಿಂದ ಬೆಂಗಳೂರಿಗೆ ಬರುವವರಿಗೆ ಕೊರೊನಾ ಟೆಸ್ಟ್​ ಕಡ್ಡಾಯ. ಆದರೆ, ಇತರೆ ರಾಜ್ಯಗಳಿಂದ ಬರುವವರಿಗೆ ಟೆಸ್ಟ್ ಕಡ್ಡಾಯ ಇಲ್ಲ ಎಂದು ಮಂಚೇನಹಳ್ಳಿಯಲ್ಲಿ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಆದರೆ, ಬೆಂಗಳೂರಿನಲ್ಲೇ ಉಳಿಯುವ ಹೊರ ರಾಜ್ಯದವರಿಗೆ ಟೆಸ್ಟ್​ ಕಡ್ಡಾಯ. ಬೆಂಗಳೂರಿಗೆ ಬಂದು ಹೋಗುವವರಿಗೆ ಟೆಸ್ಟ್​ ಕಡ್ಡಾಯ ಇಲ್ಲ. ಶೇ. 60ರಷ್ಟು ಹೊರ ರಾಜ್ಯದಿಂದ ಬಂದವರಿಂದ ಸೋಂಕು ಹರಡುತ್ತಿದೆ ಎಂದು ಮಂಚೇನಹಳ್ಳಿಯಲ್ಲಿ ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಇದನ್ನೂ ಓದಿ: ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ