AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ -ಡಾ. ಕೆ.ಸುಧಾಕರ್​ ಮನವಿ

ಕೆಲ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ. ಮುಂದಿನ 2 ತಿಂಗಳು ಅತ್ಯಂತ ಮಹತ್ವ ಪಡೆದಿದೆ, ಉದಾಸೀನ ಮಾಡಬೇಡಿ. ಎಲ್ಲರೂ ಹಬ್ಬಗಳನ್ನ ಸರಳವಾಗಿ ಆಚರಣೆ ಮಾಡಬೇಕು ಎಂದು ಮಂಚೇನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ -ಡಾ. ಕೆ.ಸುಧಾಕರ್​ ಮನವಿ
ಡಾ.ಕೆ. ಸುಧಾಕರ್​
KUSHAL V
| Edited By: |

Updated on: Mar 26, 2021 | 5:44 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಎಲ್ಲರೂ ಮಾಸ್ಕ್​ ಧರಿಸಬೇಕು, ಅಂತರ ಕಾಪಾಡಬೇಕು ಎಂದು ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೆಲ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಲಾಕ್​​ಡೌನ್ ಘೋಷಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಬೇಡಿ. ಮುಂದಿನ 2 ತಿಂಗಳು ಅತ್ಯಂತ ಮಹತ್ವ ಪಡೆದಿದೆ, ಉದಾಸೀನ ಮಾಡಬೇಡಿ. ಎಲ್ಲರೂ ಹಬ್ಬಗಳನ್ನ ಸರಳವಾಗಿ ಆಚರಣೆ ಮಾಡಬೇಕು ಎಂದು ಮಂಚೇನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಕೊರೊನಾದಿಂದ ಎಷ್ಟೋ ಮನೆಗಳಲ್ಲಿ ಸಾವು ನೋವು ಸಂಭವಿಸಿದೆ. ಹೀಗಾಗಿ ನಾನು, ನನ್ನ ಮನೆಗೆ ಕೊರೊನಾ ಬಂದಿಲ್ಲವೆಂದು ಉದಾಸೀನ ಬೇಡ. 40 ವರ್ಷ ಮೇಲ್ಪಟ್ಟವರೆಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಸುಧಾಕರ್​ ಮನವಿ ಮಾಡಿದರು. ಬೆಂಗಳೂರು ಕರಗ ಸೇರಿದಂತೆ ಪ್ರತಿಯೊಂದು ಹಬ್ಬವನ್ನು ಸರಳವಾಗಿ ಆಚರಿಸಿ ಅಂತಾ ಸುಧಾಕರ್​ ಮನವಿ ಮಾಡಿದರು.

ಮಹಾರಾಷ್ಟ್ರ, ಕೇರಳ, ಪಂಜಾಬ್​ ಹಾಗೂ ಚಂಡೀಗಢದಿಂದ ಬೆಂಗಳೂರಿಗೆ ಬರುವವರಿಗೆ ಕೊರೊನಾ ಟೆಸ್ಟ್​ ಕಡ್ಡಾಯ. ಆದರೆ, ಇತರೆ ರಾಜ್ಯಗಳಿಂದ ಬರುವವರಿಗೆ ಟೆಸ್ಟ್ ಕಡ್ಡಾಯ ಇಲ್ಲ ಎಂದು ಮಂಚೇನಹಳ್ಳಿಯಲ್ಲಿ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಆದರೆ, ಬೆಂಗಳೂರಿನಲ್ಲೇ ಉಳಿಯುವ ಹೊರ ರಾಜ್ಯದವರಿಗೆ ಟೆಸ್ಟ್​ ಕಡ್ಡಾಯ. ಬೆಂಗಳೂರಿಗೆ ಬಂದು ಹೋಗುವವರಿಗೆ ಟೆಸ್ಟ್​ ಕಡ್ಡಾಯ ಇಲ್ಲ. ಶೇ. 60ರಷ್ಟು ಹೊರ ರಾಜ್ಯದಿಂದ ಬಂದವರಿಂದ ಸೋಂಕು ಹರಡುತ್ತಿದೆ ಎಂದು ಮಂಚೇನಹಳ್ಳಿಯಲ್ಲಿ ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಇದನ್ನೂ ಓದಿ: ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ