AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​, ರೆಮ್​​ಡೆಸಿವರ್​ ಉತ್ಪಾದನೆ ಹೆಚ್ಚಿಸಲಾಗ್ತಿದೆ ಮತ್ತು ಆಮದು ಮಾಡಿಕೊಳ್ಳಲಾಗ್ತಿದೆ ಎಂದು ಮೋದಿ ಹೇಳಿದ್ದಾರೆ: ಡಾ.ಕೆ.ಸುಧಾಕರ್

ಕೊರೊನಾ ಸೋಂಕು ನಿಯಂತ್ರಣಕ್ಕೆ ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೇ ಹೋಂ ಐಸೋಲೇಷನ್​ನಲ್ಲಿ ಇರುವವರಿಗೆ ಟೆಲಿಕಾಲಿಂಗ್ ಮೂಲಕ ಮಾರ್ಗದರ್ಶನ, ಉಪಚಾರ ನೀಡಲಾಗುವುದು: ಡಾ.ಕೆ.ಸುಧಾಕರ್

ಆಕ್ಸಿಜನ್​, ರೆಮ್​​ಡೆಸಿವರ್​ ಉತ್ಪಾದನೆ ಹೆಚ್ಚಿಸಲಾಗ್ತಿದೆ ಮತ್ತು ಆಮದು ಮಾಡಿಕೊಳ್ಳಲಾಗ್ತಿದೆ ಎಂದು ಮೋದಿ ಹೇಳಿದ್ದಾರೆ: ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
Skanda
|

Updated on: Apr 23, 2021 | 1:38 PM

Share

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೇ ಹೋಂ ಐಸೋಲೇಷನ್​ನಲ್ಲಿ ಇರುವವರಿಗೆ ಟೆಲಿಕಾಲಿಂಗ್ ಮೂಲಕ ಮಾರ್ಗದರ್ಶನ, ಉಪಚಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆಕ್ಸಿಜನ್​, ರೆಮ್​ಡೆಸಿವರ್​ ಬಗ್ಗೆ ಮಾತನಾಡಿ, ಅವುಗಳ ಉತ್ಪಾದನೆ ಹೆಚ್ಚು ಮಾಡಲಾಗಿದೆ. ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಿದ್ದಾರೆ. ಆಕ್ಸಿಜನ್​ ಪುರೈಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮನವಿ ಸಲ್ಲಿಸಿದ್ದಾರೆ. ಈ ತಿಂಗಳಾಂತ್ಯಕ್ಕೆ ಪ್ರತಿ ದಿನ ಸಾವಿರ ಟನ್ ಆಕ್ಸಿಜನ್ ಪೂರೈಕೆ ಆಗಲಿದೆ. ಮೇ ಆರಂಭದಲ್ಲಿ 1,500 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಿಸಿದ್ದಾರೆ. ಈ ವೇಳೆ ಬೆಂಗಳೂರಿಗೆ ಮೇಕ್ ಶಿಫ್ಟ್ ಆಸ್ಪತ್ರೆಗಳ ಬಗ್ಗೆ ಪ್ರಸ್ತಾಪವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಮೊದಲ ಅಲೆ ವೈರಾಣು ಹಾಗೂ ರೂಪಾಂತರಿ ವೈರಾಣುವಿನ ಸ್ವಭಾವ ಹೇಗೆ ಬದಲಾಗಿದೆ, ಅವುಗಳ ವ್ಯತ್ಯಾಸವೇನು ಎಂಬ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ, ಜನರು ಪ್ರಾಣಾಯಾಮ ಮಾಡಬೇಕು -ಡಾ. ಕೆ.ಸುಧಾಕರ್ 

ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಲಿ: ಈ ಬಗ್ಗೆ ಪ್ರಕಾಶ್ ಅಮ್ಮಣ್ಣಾಯ ಹೇಳೋದೇನು?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!