AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​, ರೆಮ್​​ಡೆಸಿವರ್​ ಉತ್ಪಾದನೆ ಹೆಚ್ಚಿಸಲಾಗ್ತಿದೆ ಮತ್ತು ಆಮದು ಮಾಡಿಕೊಳ್ಳಲಾಗ್ತಿದೆ ಎಂದು ಮೋದಿ ಹೇಳಿದ್ದಾರೆ: ಡಾ.ಕೆ.ಸುಧಾಕರ್

ಕೊರೊನಾ ಸೋಂಕು ನಿಯಂತ್ರಣಕ್ಕೆ ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೇ ಹೋಂ ಐಸೋಲೇಷನ್​ನಲ್ಲಿ ಇರುವವರಿಗೆ ಟೆಲಿಕಾಲಿಂಗ್ ಮೂಲಕ ಮಾರ್ಗದರ್ಶನ, ಉಪಚಾರ ನೀಡಲಾಗುವುದು: ಡಾ.ಕೆ.ಸುಧಾಕರ್

ಆಕ್ಸಿಜನ್​, ರೆಮ್​​ಡೆಸಿವರ್​ ಉತ್ಪಾದನೆ ಹೆಚ್ಚಿಸಲಾಗ್ತಿದೆ ಮತ್ತು ಆಮದು ಮಾಡಿಕೊಳ್ಳಲಾಗ್ತಿದೆ ಎಂದು ಮೋದಿ ಹೇಳಿದ್ದಾರೆ: ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
Skanda
|

Updated on: Apr 23, 2021 | 1:38 PM

Share

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೇ ಹೋಂ ಐಸೋಲೇಷನ್​ನಲ್ಲಿ ಇರುವವರಿಗೆ ಟೆಲಿಕಾಲಿಂಗ್ ಮೂಲಕ ಮಾರ್ಗದರ್ಶನ, ಉಪಚಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆಕ್ಸಿಜನ್​, ರೆಮ್​ಡೆಸಿವರ್​ ಬಗ್ಗೆ ಮಾತನಾಡಿ, ಅವುಗಳ ಉತ್ಪಾದನೆ ಹೆಚ್ಚು ಮಾಡಲಾಗಿದೆ. ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಿದ್ದಾರೆ. ಆಕ್ಸಿಜನ್​ ಪುರೈಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮನವಿ ಸಲ್ಲಿಸಿದ್ದಾರೆ. ಈ ತಿಂಗಳಾಂತ್ಯಕ್ಕೆ ಪ್ರತಿ ದಿನ ಸಾವಿರ ಟನ್ ಆಕ್ಸಿಜನ್ ಪೂರೈಕೆ ಆಗಲಿದೆ. ಮೇ ಆರಂಭದಲ್ಲಿ 1,500 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಿಸಿದ್ದಾರೆ. ಈ ವೇಳೆ ಬೆಂಗಳೂರಿಗೆ ಮೇಕ್ ಶಿಫ್ಟ್ ಆಸ್ಪತ್ರೆಗಳ ಬಗ್ಗೆ ಪ್ರಸ್ತಾಪವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಮೊದಲ ಅಲೆ ವೈರಾಣು ಹಾಗೂ ರೂಪಾಂತರಿ ವೈರಾಣುವಿನ ಸ್ವಭಾವ ಹೇಗೆ ಬದಲಾಗಿದೆ, ಅವುಗಳ ವ್ಯತ್ಯಾಸವೇನು ಎಂಬ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ, ಜನರು ಪ್ರಾಣಾಯಾಮ ಮಾಡಬೇಕು -ಡಾ. ಕೆ.ಸುಧಾಕರ್ 

ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಲಿ: ಈ ಬಗ್ಗೆ ಪ್ರಕಾಶ್ ಅಮ್ಮಣ್ಣಾಯ ಹೇಳೋದೇನು?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್