AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ಗೆ ಬ್ರೇಕ್​; ಮಾರ್ಗಸೂಚಿ ಪಾಲನೆ ಕಡ್ಡಾಯ – ಸಚಿವ ಡಾ. ಸುಧಾಕರ್ ಸ್ಪಷ್ಟನೆ

ಉಪಚುನಾವಣೆಗೂ ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಿಗೂ ಕಠಿಣ ನಿಯಮ ಜಾರಿಗೊಳಿಸಿದ್ದೇವೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ಗೆ ಬ್ರೇಕ್​; ಮಾರ್ಗಸೂಚಿ ಪಾಲನೆ ಕಡ್ಡಾಯ - ಸಚಿವ ಡಾ. ಸುಧಾಕರ್ ಸ್ಪಷ್ಟನೆ
ನಟ ಪುನೀತ್ ರಾಜ್​ಕುಮಾರ್ ಮನವಿಗೆ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆಯೇನು?
guruganesh bhat
| Updated By: ಸಾಧು ಶ್ರೀನಾಥ್​|

Updated on: Apr 03, 2021 | 11:45 AM

Share

ಬೆಂಗಳೂರು: ಸಿನಿಮಾ ಥಿಯೇಟರ್​ಗಳಲ್ಲಿ ಶೇ 100ರಷ್ಟು ಆಸನಗಳಿಗೆ ಅವಕಾಶ ನೀಡಬೇಕು ಎಂದು ನಟ ಪುನೀತ್ ರಾಜ್​ಕುಮಾರ್ ಮನವಿ ಮಾಡಿಕೊಂಡ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ವಲಯಗಳ ಬಗ್ಗೆಯೂ ನನಗೆ ಗೌರವ, ಅಭಿಮಾನ ಇದೆ. ಎಲ್ಲಾ ಕ್ಷೇತ್ರಗಳಿಗೂ ನೂತನ ಕೊರೊನಾ ತಡೆ ಮಾರ್ಗಸೂಚಿ ಅನ್ವಯವಾಗಲಿದೆ. ಇದರ ಹಿಂದೆ ಕೇವಲ ಕೊರೊನಾ ಸೋಂಕು ತಡೆಯುವ ಉದ್ದೇಶವಿದೆಯೇ ಹೊರತು, ಬೇರೇನೂ ಇಲ್ಲ. ಈ ವಿಷಯದಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟೀಕರಣ ನೀಡಿದ್ದಾರೆ.

ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಅಪಾರ್ಟ್‌ಮೆಂಟ್, ಮದುವೆ​ಗಳಿಗೂ ಕೊರೊನಾ ತಡೆಯ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ. ಇವೆಲ್ಲವುಗಳಿಗೂ ನಿಯಮ ತೆಗೆದರೆ ಏನಾಗಲಿದೆ ಎಂಬುದನ್ನು ನೀವೇ ಯೋಚಿಸಿ. ಅಲ್ಲದೇ ರಾಜಕೀಯ ಕ್ಷೇತ್ರದ ಉಪಚುನಾವಣೆಗೂ ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಿಗೂ ಕಠಿಣ ನಿಯಮ ಜಾರಿಗೊಳಿಸಿದ್ದೇವೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನಿನ್ನೆ ಮನವಿ ಮಾಡಿಕೊಂಡಿದ್ದ ‘ಯುವರತ್ನ’ ಪುನೀತ್

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಗುರುವಾರಷ್ಟೇ ತೆರೆಗೆ ಬಂದಿತ್ತು. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಹೀಗಿರುವಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತಂದಿತ್ತು. ಚಿತ್ರಮಂದಿರದಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶ ಹೊರಡಿಸಿದೆ. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಸಮಾಧಾನ ಹೊರ ಹಾಕಿದ್ದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ಫೇಸ್​ಬುಕ್​ ಲೈವ್​ನಲ್ಲಿ ಬಂದು ಪುನೀತ್​ ರಾಜ್​ಕುಮಾರ್​ ಬೇಸರ ಹೊರ ಹಾಕಿದ್ದರು. ನಂತರ ಟಿವಿ9 ಕನ್ನಡದ ಜತೆಗೂ ಅವರು ಮಾತನಾಡಿದ್ದರು.

ದಯವಿಟ್ಟು ಥಿಯೇಟರ್​​ಗಳಿಗೆ ಶೇ 100ರಷ್ಟು ಅವಕಾಶ ನೀಡಿ. ಜನರು ಕೂಡ ಮುನ್ನೆಚ್ಚರಿಕೆ ಕ್ರಮದಿಂದಲೇ ಚಿತ್ರಮಂದಿರಕ್ಕೆ ಬಂದಿರುತ್ತಾರೆ. ಶೇ 50ರಷ್ಟು ಅವಕಾಶ ನೀಡಿದರೆ ನಿರ್ಮಾಪಕರ ಗತಿ ಏನು? ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮೊದಲೇ ನಮಗೆ ಹೇಳಿದ್ರೆ ಸಿನಿಮಾ ರಿಲೀಸ್​ ಮಾಡುತ್ತಿರಲಿಲ್ಲ ಎಂದು ಪುನೀತ್​ ಟಿವಿ9 ಕನ್ನಡದ ಜತೆ ಬೇಸರ ಹಂಚಿಕೊಂಡಿದ್ದರು.

ಎಲ್ಲರೂ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಚುನಾವಣೆ ರ್ಯಾಲಿಗಳಲ್ಲಿ ಸಾವಿರಾರು ಜನರು ಸೇರುತ್ತಿದ್ದಾರೆ. ಹೀಗಿರುವಾಗ ಸಿನಿಮಾ ರಂಗವನ್ನು ಟಾರ್ಗೆಟ್​ ಮಾಡುವುದು ಸರಿಯಲ್ಲ ಎಂದು ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್​ ಆನಂದ್​ ರಾಮ್ ಫೇಸ್​ಬುಕ್​ ಲೈವ್​ನಲ್ಲಿ​ ಹೇಳಿದ್ದರು.

​ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಇತ್ತೀಚೆಗೆ ಸಲಹೆ ನೀಡಿದ್ದರು.  ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಹೀಗಾಗಿ, ಚಿತ್ರಮಂದಿರಗಳಲ್ಲಿ ಶೇ 50 ಆಸನ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ.

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್