Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ

‘ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ’ ಎಂದು ಸುಧಾಕರ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ವಿವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ
3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಡಾ. ಕೆ. ಸುಧಾಕರ್
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ganapathi bhat

Updated on:Mar 24, 2021 | 6:44 PM

ಬೆಂಗಳೂರು: ಎಲ್ಲ ಶಾಸಕರು ಏಕಪತ್ನೀವ್ರತಸ್ಥರೇ ಎಂಬ ಸಚಿವ ಡಾ.ಕೆ.ಸುಧಾಕರ ಅವರ ಪ್ರಶ್ನೆ ವಿವಾದಕ್ಕೀಡಾಗಿದೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಶಾಸಕರ ಮೇಲೆ ಎಸ್​ಐಟಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಶಾಸಕರನ್ನು ಸೇರಿಸಿ ಭೋಜನಕೂಟ ನಡೆಸಿರುವ ಕಾಂಗ್ರೆಸ್​ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಕುರಿತು ದೂರು ನೀಡಲು ಮುಂದಾಗಿದೆ.

ತಮ್ಮ ಹೇಳಿಕೆ ಹಲವು ಆಯಾಮಗಳಲ್ಲಿ ವಿವಾದಕ್ಕೀಡಾಗಿದ್ದನ್ನು ಮನಗಂಡ ಸಚಿವ ಡಾ.ಕೆ.ಸುಧಾಕರ್ ಇದೀಗ ತಮ್ಮ ಹೇಳಿಕೆಗೆ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ. ‘ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನಾನು ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ’ ಎಂದು ಡಾ.ಕೆ.ಸುಧಾಕರ ಟ್ವೀಟ್ ಮಾಡಿದ್ದಾರೆ.

‘ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ಧ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

‘ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮಗಳ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ’ ಎಂದು ಸುಧಾಕರ ಟ್ವೀಟ್​ನಲ್ಲಿ ಹೇಳಿದ್ದಾರೆ.

ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು .ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ . ನಮ್ಮಗಳ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ.

— Dr Sudhakar K (@mla_sudhakar) March 24, 2021

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ಇದನ್ನೂ ಓದಿ: ಡಾ.ಕೆ.ಸುಧಾಕರ ನೀಡಿದ ‘ಏಕಪತ್ನಿವ್ರತಸ್ಥ’ ಹೇಳಿಕೆಗೆ ಕಾಂಗ್ರೆಸ್ ಪ್ರತ್ಯಸ್ತ್ರ: ಸಿದ್ದರಾಮಯ್ಯ ಮನೆಯಲ್ಲಿ ರಣತಂತ್ರ

Published On - 4:15 pm, Wed, 24 March 21

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ