AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ, ಆದರೆ ಸರ್ಕಾರ ಸೂಚಿಸಿರುವ ಔಷಧಗಳನ್ನೇ ನೀಡಲಿ: ಸುಧಾಕರ್​

ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ. ಆದರೆ ಸರ್ಕಾರ ಸೂಚಿಸಿರುವ ಔಷಧಿಗಳನ್ನೇ ನೀಡಬೇಕು. ಇಲ್ಲವಾದರೆ ಜನರಿಗೆ ಗೊಂದವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಪ್ರತಿಕ್ರಿಯಿಸಿದ್ದಾರೆ.

ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ, ಆದರೆ ಸರ್ಕಾರ ಸೂಚಿಸಿರುವ ಔಷಧಗಳನ್ನೇ ನೀಡಲಿ: ಸುಧಾಕರ್​
ಕೆ. ಸುಧಾಕರ್​
Follow us
shruti hegde
|

Updated on:May 16, 2021 | 4:20 PM

ಬೆಂಗಳೂರು: ಯೂತ್​ ಕಾಂಗ್ರೆಸ್​ ಕಿಟ್​ನಲ್ಲಿ ಸ್ಟಿರಾಯ್ಡ್​ ನೀಡಿದ ವಿಚಾರಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ. ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ. ಆದರೆ ಸರ್ಕಾರ ಸೂಚಿಸಿರುವ ಔಷಧಿಗಳನ್ನೇ ನೀಡಬೇಕು. ಇಲ್ಲವಾದರೆ ಜನರಿಗೆ ಗೊಂದವಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿದ ಸುಧಾಕರ್​, ಅಧಿಕ ಸ್ಟಿರಾಯ್ಡ್ ಬಳಕೆ ಮಾಡಿದರೆ ಮಧುಮೇಹ ಇರುವವರಿಗೆ 10 ದಿನಗಳಲ್ಲಿ ಮೂಗಿನ ಮೂಲಕ ಫಂಗಲ್ ಇನ್​ಫೆಕ್ಷನ್ ಪ್ರಾರಂಭ ಆಗಿ ಕಣ್ಣಿನ ನರಗಳಿಗೆ ಹೋಗಬಹುದು. ಕೊನೆಗೆ ದೃಷ್ಟಿ ಕೂಡ ಹೋಗುವ ಅಪಾಯ ಇದೆ. ಚಿಕಿತ್ಸೆ ಸರಿಯಾದ ಸಮಯಕ್ಕೆ ಆಗದಿದ್ದರೆ ಸಾವೂ ಕೂಡ ಸಂಭವಿಸಬಹುದು. ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡ ಕೂಡಲೇ ನೇತ್ರ ತಜ್ಞರ ಜೊತೆ ಸಮಾಲೋಚನೆ ಮಾಡಿದ್ದೇವೆ. ಬೌರಿಂಗ್​ನಲ್ಲಿ ಬ್ಲ್ಯಾಕ್ ಫಂಗಸ್​ಗೆ ಚಿಕಿತ್ಸೆ ನೀಡಲು ಪ್ರಾರಂಭ ಮಾಡುತ್ತಿದ್ದೇವೆ. ಇದರ ಔಷಧಿ ಸ್ವಲ್ಪ ತುಟ್ಟಿ ಇದೆ ಎಂದು ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್​ಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ, ಒಬ್ಬ ವ್ಯಕ್ತಿಗೆ 2-4 ಲಕ್ಷ ವೆಚ್ಚವಾಗಲಿದೆ ಸತತ ಏಳು ವಾರಗಳ ಚಿಕಿತ್ಸೆ ಮಾಡಬೇಕು. 3-4 ಲಕ್ಷ ಒಬ್ಬ ವ್ಯಕ್ತಿಗೆ ಖರ್ಚಾಗಬಹುದು. ಇದಕ್ಕೆ ಚಿಕಿತ್ಸೆ ಉಚಿತವಾಗಿ ನೀಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಗೆದ್ದು ಬಂದ್ವೀ ಎಂಬ ಸಂತೋಷದಲ್ಲಿದ್ದವರಲ್ಲಿ ಇತ್ತೀಚೆಗೆ ಬ್ಲ್ಯಾಕ್ ಫಂಗಸ್‌ಗೆ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದವರ ಜೀವನದಲ್ಲಿ ಮತ್ತೆ ಸಂಕಷ್ಟಗಳು ಎದುರಾಗಿವೆ. ಕೊರೊನಾ ಅಬ್ಬರದ ನಡುವೆ ಬ್ಲ್ಯಾಕ್ ಫಂಗಸ್‌ ಉಲ್ಬಣಗೊಂಡಿದೆ. 100 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್‌ ಕಾಣಿಸಿಕೊಂಡಿದ್ದು ರಾಜ್ಯದ ನಾನಾ ಕಡೆಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇಂದು ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಪೇಟೆಯ 64 ವರ್ಷದ ವೃದ್ಧ ಹಾಗೂ ಕೊಟಾಲಂ‌ ನಿವಾಸಿ 57 ವರ್ಷದ ಮಹಿಳೆ ಬಲಿಯಾಗಿದ್ದಾರೆ. ಸದ್ಯ ಈಗ ಬೆಂಗಳೂರಿನಲ್ಲೂ ಹೆಚ್ಚಾದ ಬ್ಲ್ಯಾಕ್ ಫಂಗಸ್​ನಿಂದ ಆತಂಕ ಹೆಚ್ಚಾಗಿದೆ.

ಇನ್ನು ಕೊವಿಡ್ ಟೆಸ್ಟ್ ಪಾಸಿಟಿವಿಟಿ ದರ ಇಳಿಕೆ ಕುರಿತು ಮಾತನಾಡಿದ ಸುಧಾಕರ್​, ಪಾಸಿಟಿವಿಟಿ ದರ ಇಳಿಯೋದು ಮುಖ್ಯ ಹೊರತು ನಂಬರ್ ಮುಖ್ಯ ಅಲ್ಲ. ಬೆಂಗಳೂರಲ್ಲಿ ಪಾಸಿಟಿವಿಟಿ ಕಡಿಮೆ ಆಗುತ್ತಿದೆ ಹೀಗಾಗಿ ನಂಬರ್ ಕಡಿಮೆ ಬರುತ್ತಿದೆ. ಹೊರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಸಿದ್ಧತೆ, ಶೀಘ್ರವೇ 2,480 ವೈದ್ಯರ ನೇಮಕ: ಸಚಿವ ಕೆ.ಸುಧಾಕರ್​

Published On - 4:19 pm, Sun, 16 May 21

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್