AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ, ಆದರೆ ಸರ್ಕಾರ ಸೂಚಿಸಿರುವ ಔಷಧಗಳನ್ನೇ ನೀಡಲಿ: ಸುಧಾಕರ್​

ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ. ಆದರೆ ಸರ್ಕಾರ ಸೂಚಿಸಿರುವ ಔಷಧಿಗಳನ್ನೇ ನೀಡಬೇಕು. ಇಲ್ಲವಾದರೆ ಜನರಿಗೆ ಗೊಂದವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಪ್ರತಿಕ್ರಿಯಿಸಿದ್ದಾರೆ.

ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ, ಆದರೆ ಸರ್ಕಾರ ಸೂಚಿಸಿರುವ ಔಷಧಗಳನ್ನೇ ನೀಡಲಿ: ಸುಧಾಕರ್​
ಕೆ. ಸುಧಾಕರ್​
shruti hegde
|

Updated on:May 16, 2021 | 4:20 PM

Share

ಬೆಂಗಳೂರು: ಯೂತ್​ ಕಾಂಗ್ರೆಸ್​ ಕಿಟ್​ನಲ್ಲಿ ಸ್ಟಿರಾಯ್ಡ್​ ನೀಡಿದ ವಿಚಾರಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ. ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಮೆಡಿಕಲ್​ ಕಿಟ್​ ನೀಡೋದು ತಪ್ಪಲ್ಲ. ಆದರೆ ಸರ್ಕಾರ ಸೂಚಿಸಿರುವ ಔಷಧಿಗಳನ್ನೇ ನೀಡಬೇಕು. ಇಲ್ಲವಾದರೆ ಜನರಿಗೆ ಗೊಂದವಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿದ ಸುಧಾಕರ್​, ಅಧಿಕ ಸ್ಟಿರಾಯ್ಡ್ ಬಳಕೆ ಮಾಡಿದರೆ ಮಧುಮೇಹ ಇರುವವರಿಗೆ 10 ದಿನಗಳಲ್ಲಿ ಮೂಗಿನ ಮೂಲಕ ಫಂಗಲ್ ಇನ್​ಫೆಕ್ಷನ್ ಪ್ರಾರಂಭ ಆಗಿ ಕಣ್ಣಿನ ನರಗಳಿಗೆ ಹೋಗಬಹುದು. ಕೊನೆಗೆ ದೃಷ್ಟಿ ಕೂಡ ಹೋಗುವ ಅಪಾಯ ಇದೆ. ಚಿಕಿತ್ಸೆ ಸರಿಯಾದ ಸಮಯಕ್ಕೆ ಆಗದಿದ್ದರೆ ಸಾವೂ ಕೂಡ ಸಂಭವಿಸಬಹುದು. ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡ ಕೂಡಲೇ ನೇತ್ರ ತಜ್ಞರ ಜೊತೆ ಸಮಾಲೋಚನೆ ಮಾಡಿದ್ದೇವೆ. ಬೌರಿಂಗ್​ನಲ್ಲಿ ಬ್ಲ್ಯಾಕ್ ಫಂಗಸ್​ಗೆ ಚಿಕಿತ್ಸೆ ನೀಡಲು ಪ್ರಾರಂಭ ಮಾಡುತ್ತಿದ್ದೇವೆ. ಇದರ ಔಷಧಿ ಸ್ವಲ್ಪ ತುಟ್ಟಿ ಇದೆ ಎಂದು ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್​ಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ, ಒಬ್ಬ ವ್ಯಕ್ತಿಗೆ 2-4 ಲಕ್ಷ ವೆಚ್ಚವಾಗಲಿದೆ ಸತತ ಏಳು ವಾರಗಳ ಚಿಕಿತ್ಸೆ ಮಾಡಬೇಕು. 3-4 ಲಕ್ಷ ಒಬ್ಬ ವ್ಯಕ್ತಿಗೆ ಖರ್ಚಾಗಬಹುದು. ಇದಕ್ಕೆ ಚಿಕಿತ್ಸೆ ಉಚಿತವಾಗಿ ನೀಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಗೆದ್ದು ಬಂದ್ವೀ ಎಂಬ ಸಂತೋಷದಲ್ಲಿದ್ದವರಲ್ಲಿ ಇತ್ತೀಚೆಗೆ ಬ್ಲ್ಯಾಕ್ ಫಂಗಸ್‌ಗೆ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದವರ ಜೀವನದಲ್ಲಿ ಮತ್ತೆ ಸಂಕಷ್ಟಗಳು ಎದುರಾಗಿವೆ. ಕೊರೊನಾ ಅಬ್ಬರದ ನಡುವೆ ಬ್ಲ್ಯಾಕ್ ಫಂಗಸ್‌ ಉಲ್ಬಣಗೊಂಡಿದೆ. 100 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್‌ ಕಾಣಿಸಿಕೊಂಡಿದ್ದು ರಾಜ್ಯದ ನಾನಾ ಕಡೆಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇಂದು ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಪೇಟೆಯ 64 ವರ್ಷದ ವೃದ್ಧ ಹಾಗೂ ಕೊಟಾಲಂ‌ ನಿವಾಸಿ 57 ವರ್ಷದ ಮಹಿಳೆ ಬಲಿಯಾಗಿದ್ದಾರೆ. ಸದ್ಯ ಈಗ ಬೆಂಗಳೂರಿನಲ್ಲೂ ಹೆಚ್ಚಾದ ಬ್ಲ್ಯಾಕ್ ಫಂಗಸ್​ನಿಂದ ಆತಂಕ ಹೆಚ್ಚಾಗಿದೆ.

ಇನ್ನು ಕೊವಿಡ್ ಟೆಸ್ಟ್ ಪಾಸಿಟಿವಿಟಿ ದರ ಇಳಿಕೆ ಕುರಿತು ಮಾತನಾಡಿದ ಸುಧಾಕರ್​, ಪಾಸಿಟಿವಿಟಿ ದರ ಇಳಿಯೋದು ಮುಖ್ಯ ಹೊರತು ನಂಬರ್ ಮುಖ್ಯ ಅಲ್ಲ. ಬೆಂಗಳೂರಲ್ಲಿ ಪಾಸಿಟಿವಿಟಿ ಕಡಿಮೆ ಆಗುತ್ತಿದೆ ಹೀಗಾಗಿ ನಂಬರ್ ಕಡಿಮೆ ಬರುತ್ತಿದೆ. ಹೊರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಸಿದ್ಧತೆ, ಶೀಘ್ರವೇ 2,480 ವೈದ್ಯರ ನೇಮಕ: ಸಚಿವ ಕೆ.ಸುಧಾಕರ್​

Published On - 4:19 pm, Sun, 16 May 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ