AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಾಲಕ್ಕೆ ತಮ್ಮ ಬೆಂಗಾವಲು ವಾಹನ ನೀಡಿ, ಮಹಿಳೆಯ ಜೀವ ಉಳಿಸಿದ ಆರೋಗ್ಯ ಸಚಿವ

ಚಾಮರಾಜನಗರ: ಆರೋಗ್ಯ ಸಚಿವ ಬಿ. ಶ್ರೀರಾಮುಲು ಲಘ ಹೃದಯಾಘಾತವಾಗಿ ರಸ್ತೆ ಬದಿಯ ಮನೆಯೊಂದರ ಬಳಿ ನರಳಾಡುತ್ತಿದ್ದ ಮಹಿಳೆಯನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸೇರಿಸಿ ಮಹಿಳೆಯ ಜೀವ ಉಳಿಸಿದ್ದಾರೆ. ಸಚಿವ ಶ್ರೀರಾಮುಲು ಇಂದು ಜಿಲ್ಲಾಸ್ಪತ್ರೆಯ ವಾಸ್ತವ್ಯದ ನಂತರ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ, ದಾರಿ ಮಧ್ಯೆ ಲಘು ಹೃದಯಾಘಾತವಾಗಿ ಒದ್ದಾಡುತ್ತಿದ್ದ ಮಹಿಳೆಯನ್ನ ಕಂಡಿದ್ದಾರೆ. ತಕ್ಷಣವೇ ತಮ್ಮ ಕಾರು ನಿಲ್ಲಿಸಿ ಅದರಲ್ಲೇ ಮಹಿಳೆಯನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿಸಿದ್ದಾರೆ. ಬೆಳಿಗ್ಗೆಯೆ […]

ಸಕಾಲಕ್ಕೆ ತಮ್ಮ ಬೆಂಗಾವಲು ವಾಹನ ನೀಡಿ, ಮಹಿಳೆಯ ಜೀವ ಉಳಿಸಿದ ಆರೋಗ್ಯ ಸಚಿವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 26, 2019 | 3:03 PM

Share

ಚಾಮರಾಜನಗರ: ಆರೋಗ್ಯ ಸಚಿವ ಬಿ. ಶ್ರೀರಾಮುಲು ಲಘ ಹೃದಯಾಘಾತವಾಗಿ ರಸ್ತೆ ಬದಿಯ ಮನೆಯೊಂದರ ಬಳಿ ನರಳಾಡುತ್ತಿದ್ದ ಮಹಿಳೆಯನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸೇರಿಸಿ ಮಹಿಳೆಯ ಜೀವ ಉಳಿಸಿದ್ದಾರೆ.

ಸಚಿವ ಶ್ರೀರಾಮುಲು ಇಂದು ಜಿಲ್ಲಾಸ್ಪತ್ರೆಯ ವಾಸ್ತವ್ಯದ ನಂತರ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ, ದಾರಿ ಮಧ್ಯೆ ಲಘು ಹೃದಯಾಘಾತವಾಗಿ ಒದ್ದಾಡುತ್ತಿದ್ದ ಮಹಿಳೆಯನ್ನ ಕಂಡಿದ್ದಾರೆ. ತಕ್ಷಣವೇ ತಮ್ಮ ಕಾರು ನಿಲ್ಲಿಸಿ ಅದರಲ್ಲೇ ಮಹಿಳೆಯನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿಸಿದ್ದಾರೆ.

ಬೆಳಿಗ್ಗೆಯೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಕಷ್ಟ ಸುಖವನ್ನು ವಿಚಾರಿಸಿ, ಆಸ್ಪತ್ರೆಯ ಸಿಬ್ಬಂದಿಗಳ ಜೊತೆ ಚರ್ಚಿಸಿ ಅವರ ಬೇಡಿಕೆಗಳನ್ನು ಪೂರೈಸುವುದಾಗಿ ಹೇಳಿ ಸಿಬ್ಬಂದಿಯ ಮೊಗದಲ್ಲಿ ಸಂತೋಷ ತರಿಸಿದ್ದರು ಈಗ ಮತ್ತೆ ಮಹಿಳೆಯ ಕಷ್ಟಕ್ಕೆ ಧಾವಿಸಿ ಮಾನವೀಯತೆಯನ್ನ ಮೆರೆದಿದ್ದಾರೆ. ಸಚಿವರ ಮಾನವೀಯತೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜೀವಕ್ಕೆಬೆಲೆಕಟ್ಟಲಾಗದು. ಆಪತ್ಕಾಲದಲ್ಲಿಹೆಣ್ಣುಮಗಳಜೀವರಕ್ಷಿಸಿ ಧನ್ಯನಾದೆ.

ಚಾಮರಾಜನಗರಿಂದ ವಾಹನದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿಯ ಮನೆಯೊಂದರ ಬಳಿ ಮಹಿಳೆಯೊಬ್ಬರು ಅನಾರೋಗ್ಯದಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.

ಇದನ್ನು ಗಮನಿಸಿ ನನ್ನದೇ ವಾಹನದಲ್ಲಿ ಆಕೆಯನ್ನು ಮಲೆ ಮಹದೇಶ್ವರದ ಆಸ್ಪತ್ರೆಗೆ ಕಳುಹಿಸಿಕೊಟ್ಟು ಚಿಕಿತ್ಸೆ ಕೊಡಿಸಿದೆ. ಬೆಟ್ಟದಿಂದ ವಾಪಸಾಗುವಾಗ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದೆ. ಆಕೆ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸಚಿವನಾಗಿ ಅಲ್ಲದೇ ಇದ್ದರೂ ಒಬ್ಬ ಸಾಮಾನ್ಯನಾಗಿ ಇನ್ನೊಬ್ಬರ ಪ್ರಾಣ ಉಳಿಸಿದ್ದಕ್ಕಿಂತ ಸಮಾಧಾನದ ಸಂಗತಿ ಇನ್ನೇನಿದೆ?

ನಾನೇನೋ ದೊಡ್ಡ ಕೆಲಸ ಮಾಡಿದೆ ಎಂದು ಹೇಳಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರಿಗೂ ಮಾನವೀಯ ಕಳಕಳಿ ಇದ್ದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂಬುದು ನನ್ನ ಆಶಯ – ಬಿ. ಶ್ರೀರಾಮುಲು, ಆರೋಗ್ಯ ಸಚಿವ”

Published On - 3:43 pm, Wed, 25 September 19

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!