AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್​ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ನಾಳೆಯಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೌರಿಂಗ್​ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
preethi shettigar
|

Updated on: May 16, 2021 | 6:42 PM

Share

ಬೆಂಗಳೂರು: ಬ್ಲ್ಯಾಕ್ ಫಂಗಸ್​ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೊವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಬ್ಲ್ಯಾಕ್ ಫಂಗಸ್​ನಿಂದ ದೃಷ್ಟಿ ಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು. ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಾಗಲೇ ಇಲ್ಲಿನ ನೇತ್ರ ತಜ್ಞರೊಂದಿಗೆ ಸಮಾಲೋಚನೆ ಮಾಡಲಾಗಿದೆ. ನಾಳೆಯಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ ಏಳು ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂಪಾಯಿ ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಯಾರಿಗೇ ಈ ಸಮಸ್ಯೆ ಇದ್ದರೂ ತಕ್ಷಣ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಬೇಕು. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧಿಯನ್ನು ಕೇಂದ್ರ ಸರ್ಕಾರ ನೀಡಲಿದ್ದು, 20 ಸಾವಿರ ಡೋಸ್​ಗೆ ಮನವಿ ಮಾಡಲಾಗಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬಳಿಕ ಸ್ಟೀರಾಯಿಡ್ ಔಷಧಿ ಬಗ್ಗೆ ಮಾತನಾಡಿದ ಡಾ.ಕೆ.ಸುಧಾಕರ್ ಯಾರೂ ವೈದ್ಯರ ಬಳಿ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು. ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ. ಈ ಕುರಿತು ಪ್ರತಿಪಕ್ಷ ನಾಯಕರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಡೆಂಘೀ ತಡೆಗಟ್ಟಿ ಬಳಿಕ ಡೆಂಘೀ ತಡೆಗಟ್ಟಿ ಎನ್ನುವ ಸಾಮಾಜಿಕ ಕಳಕಳಿಯ ಕುರಿತು ಮಾತನಾಡಿದ ಡಾ.ಕೆ.ಸುಧಾಕರ್ ಸೊಳ್ಳೆಯಿಂದ ಹರಡುವ ಡೆಂಘೀ ರೋಗ ರಾಜ್ಯದಲ್ಲಿ ಪ್ರತಿ ವರ್ಷ 15 ರಿಂದ 20 ಸಾವಿರ ಜನರಿಗೆ ಬರುತ್ತಿದೆ. ಮುಂಗಾರು ಆರಂಭವಾಗುತ್ತಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆ ಹುಟ್ಟದಂತೆ ಜನರು ಕ್ರಮ ವಹಿಸಬೇಕು. ನೀರು ಸಂಗ್ರಹವಾಗುವ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಒಂದು ವಾರ ಬಿಟ್ಟರೆ ಸೊಳ್ಳೆಗಳು ಹುಟ್ಟಿ ರೋಗ ಹರಡುತ್ತದೆ. ಈ ಸೊಳ್ಳೆ ಹಗಲಿನಲ್ಲಿ ಹೆಚ್ಚಾಗಿ ಕಚ್ಚಿ ವೈರಾಣು ಹರಡುತ್ತದೆ. ಮಹಿಳೆಯರು ಮತ್ತು ಮಕ್ಕಳ ವಿಚಾರದಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಯಾವುದೇ ರೀತಿ ಜ್ವರ, ಮೈ ಕೈ ನೋವು, ವಾಂತಿ, ಸ್ನಾಯುಸೆಳೆತ ಕಂಡುಬರುವುದು ಡೆಂಘೀ ಲಕ್ಷಣಗಳು. ಯಾವುದೇ ರೋಗ ಲಕ್ಷಣ ಕಂಡುಬಂದರೆ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:

Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್

ಬ್ಲ್ಯಾಕ್ ಫಂಗಸ್​ಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ.. ಒಬ್ಬ ವ್ಯಕ್ತಿಗೆ 2-4 ಲಕ್ಷ ವೆಚ್ಚವಾಗಲಿದೆ ಎಂದ ಸುಧಾಕರ್

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ