AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅವತಾರ್​ 2 ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯ: ವಿದೇಶದಿಂದ ಬರೋರಿಗೆ ಹಾಕ್ತಿಲ್ಲ ಸೀಲ್!

ಅಧಿಕಾರಿಗಳು ವಿದೇಶದಿಂದ ಬರುವ ಪ್ರಯಾಣಿಕರಿಗೆ ಯಾವುದೇ ಸೀಲ್ ಹಾಕ್ತಿಲ್ಲ. ಕೇವಲ ಪ್ರಯಾಣಿಕರ ವಿಳಾಸ ಬರೆದುಕೊಂಡು ಸಿಬ್ಬಂದಿ ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ, ಪ್ರಯಾಣಿಕರು ಹೋ‌ಂ ಕ್ವಾರಂಟೈನ್ ಆಗದೆ ಬೇಕಾ ಬಿಟ್ಟಿಯಾಗಿ ಓಡಾಡಿದ್ರೂ ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಹಲವರ ಅಭಿಪ್ರಾಯ.

ಕೊರೊನಾ ಅವತಾರ್​ 2 ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯ: ವಿದೇಶದಿಂದ ಬರೋರಿಗೆ ಹಾಕ್ತಿಲ್ಲ ಸೀಲ್!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
KUSHAL V
| Edited By: |

Updated on: Dec 24, 2020 | 3:39 PM

Share

ಬೆಂಗಳೂರು: ಬ್ರಿಟನ್​ನಲ್ಲಿ ಪತ್ತೆಯಾದ ಕೊರೊನಾದ ಹೊಸ ಪ್ರಭೇದ ವಿಶ್ವದ ಎಲ್ಲೆಡೆ ತಲ್ಲಣ ಮೂಡಿಸಿದೆ. ಹಾಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದೇಶದಿಂದ ಅದರಲ್ಲೂ ಬ್ರಿಟನ್​ನಿಂದ ಆಗಮಿಸುತ್ತಿರೋರ ಮೇಲೆ ವಿಶೇಷ ನಿಗಾ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ, ಇವೆಲ್ಲದರ ನಡುವೆ ಅಧಿಕಾರಿಗಳು ಒಂದು ಮಹತ್ತರ ಕ್ರಮಕ್ಕೆ ಮುಂದಾಗಿಲ್ಲ.

ಹೌದು, ಅಧಿಕಾರಿಗಳು ವಿದೇಶದಿಂದ ಬರುವ ಪ್ರಯಾಣಿಕರಿಗೆ ಯಾವುದೇ ಸೀಲ್ ಹಾಕ್ತಿಲ್ಲ. ಕೇವಲ ಪ್ರಯಾಣಿಕರ ವಿಳಾಸ ಬರೆದುಕೊಂಡು ಸಿಬ್ಬಂದಿ ಕಳುಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ, ಪ್ರಯಾಣಿಕರು ಹೋ‌ಂ ಕ್ವಾರಂಟೈನ್ ಆಗದೆ ಬೇಕಾ ಬಿಟ್ಟಿಯಾಗಿ ಓಡಾಡಿದ್ರೂ ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಹಲವರ ಅಭಿಪ್ರಾಯ.

ಅಂದ ಹಾಗೆ, ಈ‌ ಹಿಂದೆ, ವಿದೇಶದಿಂದ ಬರುತ್ತಿದ್ದವರಿಗೆ ಅಧಿಕಾರಿಗಳು ಹೊಂ ಕ್ವಾರಂಟೈನ್ ಆಗಲು ಏರ್​ಪೋರ್ಟ್​ನಲ್ಲಿ ಸೀಲ್ ಹಾಕಿ ಕಳುಹಿಸುತ್ತಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಯಾಣಿಕರ ಕೈ ಮೇಲೆ ಕ್ವಾರಂಟೈನ್ ಸೀಲ್ ಹಾಕಿ ಕಳುಹಿಸುತ್ತಿದ್ದರು. ಹಾಗಾಗಿ, ಒಂದು ವೇಳೆ ಈ ಸೀಲ್ ಇದ್ರೆ ಸಾರ್ವಜನಿಕರು ಅಂಥವರನ್ನು ಗುರುತಿಸಿ ಕೂಡಲೇ ಮನೆಗೆ ಕಳುಹಿಸುವುದು ಅಥವಾ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದರು.

ಆದ್ರೆ, ಇದೀಗ ವಿದೇಶದಲ್ಲಿ ಮಾಡಿಸಿರೋ ರಿಪೋರ್ಟ್ ಇದೆ ಅಂತಾ ಅಧಿಕಾರಿಗಳು ಪ್ರಯಾಣಿಕರಿಗೆ ಯಾವುದೇ ಸೀಲ್ ಹಾಕದೆ ನಿರ್ಲಕ್ಷ್ಯ ಮೆರೆಯುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ. ಜೊತೆಗೆ ಪ್ರಯಾಣಿಕರು, ಮೂರು ದಿನಗಳ ಹಿಂದೆ ಮಾಡಿಸಿರೋ ಟೆಸ್ಟ್ ರಿಪೋರ್ಟ್​ನ ತೋರಿಸಿ ಬರುತ್ತಿದ್ದಾರೆ ಎಂದು ಹೇಳಿಲಾಗಿದೆ.

ಹಾಗಾಗಿ, ವಿದೇಶದಿಂದ ಬಂದವರಲ್ಲಿ ನಂತರ ವೈರಸ್ ಲಕ್ಷಣ ಕಾಣಿಸಿಕೊಂಡ್ರೆ ಯಾರು ಹೊಣೆ ಅಂತಾ ಸಾರ್ವಜನಿಕರು ಪ್ರಶ್ನೆ ಹಾಕಿದ್ದಾರೆ. ವಿದೇಶದಿಂದ ಬಂದು ಹೊಂ ಕ್ವಾರಂಟೈನ್ ಆಗದೆ ಓಡಾಡಿದ್ರೆ ಅವರನ್ನು ಗುರುತಿಸೋದು ಅಸಾಧ್ಯ ಎಂದೂ ಸಹ ಪ್ರಶ್ನಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಒಳ್ಳೆಯ ಸಲಹೆಗಾರರು ಇಲ್ಲ, ಇದು ಕಾಮಿಡಿ ಕರ್ಫ್ಯೂ: ವಾಟಾಳ್ ನಾಗರಾಜ್

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?