AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅವತಾರ್​ 2 ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯ: ವಿದೇಶದಿಂದ ಬರೋರಿಗೆ ಹಾಕ್ತಿಲ್ಲ ಸೀಲ್!

ಅಧಿಕಾರಿಗಳು ವಿದೇಶದಿಂದ ಬರುವ ಪ್ರಯಾಣಿಕರಿಗೆ ಯಾವುದೇ ಸೀಲ್ ಹಾಕ್ತಿಲ್ಲ. ಕೇವಲ ಪ್ರಯಾಣಿಕರ ವಿಳಾಸ ಬರೆದುಕೊಂಡು ಸಿಬ್ಬಂದಿ ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ, ಪ್ರಯಾಣಿಕರು ಹೋ‌ಂ ಕ್ವಾರಂಟೈನ್ ಆಗದೆ ಬೇಕಾ ಬಿಟ್ಟಿಯಾಗಿ ಓಡಾಡಿದ್ರೂ ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಹಲವರ ಅಭಿಪ್ರಾಯ.

ಕೊರೊನಾ ಅವತಾರ್​ 2 ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯ: ವಿದೇಶದಿಂದ ಬರೋರಿಗೆ ಹಾಕ್ತಿಲ್ಲ ಸೀಲ್!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
KUSHAL V
| Edited By: |

Updated on: Dec 24, 2020 | 3:39 PM

Share

ಬೆಂಗಳೂರು: ಬ್ರಿಟನ್​ನಲ್ಲಿ ಪತ್ತೆಯಾದ ಕೊರೊನಾದ ಹೊಸ ಪ್ರಭೇದ ವಿಶ್ವದ ಎಲ್ಲೆಡೆ ತಲ್ಲಣ ಮೂಡಿಸಿದೆ. ಹಾಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದೇಶದಿಂದ ಅದರಲ್ಲೂ ಬ್ರಿಟನ್​ನಿಂದ ಆಗಮಿಸುತ್ತಿರೋರ ಮೇಲೆ ವಿಶೇಷ ನಿಗಾ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ, ಇವೆಲ್ಲದರ ನಡುವೆ ಅಧಿಕಾರಿಗಳು ಒಂದು ಮಹತ್ತರ ಕ್ರಮಕ್ಕೆ ಮುಂದಾಗಿಲ್ಲ.

ಹೌದು, ಅಧಿಕಾರಿಗಳು ವಿದೇಶದಿಂದ ಬರುವ ಪ್ರಯಾಣಿಕರಿಗೆ ಯಾವುದೇ ಸೀಲ್ ಹಾಕ್ತಿಲ್ಲ. ಕೇವಲ ಪ್ರಯಾಣಿಕರ ವಿಳಾಸ ಬರೆದುಕೊಂಡು ಸಿಬ್ಬಂದಿ ಕಳುಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ, ಪ್ರಯಾಣಿಕರು ಹೋ‌ಂ ಕ್ವಾರಂಟೈನ್ ಆಗದೆ ಬೇಕಾ ಬಿಟ್ಟಿಯಾಗಿ ಓಡಾಡಿದ್ರೂ ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಹಲವರ ಅಭಿಪ್ರಾಯ.

ಅಂದ ಹಾಗೆ, ಈ‌ ಹಿಂದೆ, ವಿದೇಶದಿಂದ ಬರುತ್ತಿದ್ದವರಿಗೆ ಅಧಿಕಾರಿಗಳು ಹೊಂ ಕ್ವಾರಂಟೈನ್ ಆಗಲು ಏರ್​ಪೋರ್ಟ್​ನಲ್ಲಿ ಸೀಲ್ ಹಾಕಿ ಕಳುಹಿಸುತ್ತಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಯಾಣಿಕರ ಕೈ ಮೇಲೆ ಕ್ವಾರಂಟೈನ್ ಸೀಲ್ ಹಾಕಿ ಕಳುಹಿಸುತ್ತಿದ್ದರು. ಹಾಗಾಗಿ, ಒಂದು ವೇಳೆ ಈ ಸೀಲ್ ಇದ್ರೆ ಸಾರ್ವಜನಿಕರು ಅಂಥವರನ್ನು ಗುರುತಿಸಿ ಕೂಡಲೇ ಮನೆಗೆ ಕಳುಹಿಸುವುದು ಅಥವಾ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದರು.

ಆದ್ರೆ, ಇದೀಗ ವಿದೇಶದಲ್ಲಿ ಮಾಡಿಸಿರೋ ರಿಪೋರ್ಟ್ ಇದೆ ಅಂತಾ ಅಧಿಕಾರಿಗಳು ಪ್ರಯಾಣಿಕರಿಗೆ ಯಾವುದೇ ಸೀಲ್ ಹಾಕದೆ ನಿರ್ಲಕ್ಷ್ಯ ಮೆರೆಯುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ. ಜೊತೆಗೆ ಪ್ರಯಾಣಿಕರು, ಮೂರು ದಿನಗಳ ಹಿಂದೆ ಮಾಡಿಸಿರೋ ಟೆಸ್ಟ್ ರಿಪೋರ್ಟ್​ನ ತೋರಿಸಿ ಬರುತ್ತಿದ್ದಾರೆ ಎಂದು ಹೇಳಿಲಾಗಿದೆ.

ಹಾಗಾಗಿ, ವಿದೇಶದಿಂದ ಬಂದವರಲ್ಲಿ ನಂತರ ವೈರಸ್ ಲಕ್ಷಣ ಕಾಣಿಸಿಕೊಂಡ್ರೆ ಯಾರು ಹೊಣೆ ಅಂತಾ ಸಾರ್ವಜನಿಕರು ಪ್ರಶ್ನೆ ಹಾಕಿದ್ದಾರೆ. ವಿದೇಶದಿಂದ ಬಂದು ಹೊಂ ಕ್ವಾರಂಟೈನ್ ಆಗದೆ ಓಡಾಡಿದ್ರೆ ಅವರನ್ನು ಗುರುತಿಸೋದು ಅಸಾಧ್ಯ ಎಂದೂ ಸಹ ಪ್ರಶ್ನಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಒಳ್ಳೆಯ ಸಲಹೆಗಾರರು ಇಲ್ಲ, ಇದು ಕಾಮಿಡಿ ಕರ್ಫ್ಯೂ: ವಾಟಾಳ್ ನಾಗರಾಜ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್