AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಕ್ಕೆ ತಾಯಿ ಕಳೆದುಕೊಂಡ ಹುಡುಗಿಯ ಭಾವುಕ ಪತ್ರ: ಅಮ್ಮನ ಮೊಬೈಲ್ ಸಿಕ್ಕರೆ ಹಿಂದಿರುಗಿಸಿ

ತಾಯಿ ಇಲ್ಲದೆ ನಾನು ತಬ್ಬಲಿಯಾಗಿದ್ದೇನೆ, ಹೀಗಾಗಿ ತಾಯಿ ನೆನಪಿಗಾಗಿ ಇದ್ದ ಮೊಬೈಲ್ ಯಾರಾದರು ತೆಗೆದುಕೊಂಡಿದ್ದರೆ ಅಥವಾ ಸಿಕ್ಕಿದ್ದರೆ ದಯವಿಟ್ಟು ಈ ತಬ್ಬಲಿಗೆ ಅದನ್ನು ತಲುಪಿಸಿ ಎಂದು ಹೃತಿಕ್ಷ ಕಣ್ಣೀರು ಇಡುತ್ತಾ ಬೇಡಿಕೊಂಡಿದ್ದಾಳೆ.

ಕೊರೊನಾಕ್ಕೆ ತಾಯಿ ಕಳೆದುಕೊಂಡ ಹುಡುಗಿಯ ಭಾವುಕ ಪತ್ರ: ಅಮ್ಮನ ಮೊಬೈಲ್ ಸಿಕ್ಕರೆ ಹಿಂದಿರುಗಿಸಿ
ಮೊಬೈಲ್ ಹುಡುಕಿಕೊಡುವಂತೆ ಪುಟ್ಟ ಕಂದಮ್ಮನ ಮನವಿ
preethi shettigar
|

Updated on:May 23, 2021 | 12:57 PM

Share

ಕೊಡಗು: ಕೊರೊನಾ ಎರಡನೇ ಅಲೆಯಿಂದಾಗಿ ಕುಟುಂಬದ ಸದಸ್ಯರನ್ನು ಕಳೆದುಕೊಂಡ ದುಖಃದ ಅದೆಷ್ಟೋ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಆದರೆ ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕಿಯೊಬ್ಬಳು ಅಮ್ಮನ ನೆನಪಿಗಾಗಿ ಇದ್ದ ಮೊಬೈಲ್​ ಅನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ ಈ ಕಥೆ ನಿಜಕ್ಕೂ ಮನಕಲುಕುವಂತದ್ದು. ಕೊವಿಡ್ ತೀವ್ರವಾಗಿದ್ದ ತಾಯಿ ಆಸ್ಪತ್ರೆಯಿಂದ ಮರಳಿ ಮನೆಗೆ ಬರಲಿಲ್ಲ. ಅಮ್ಮನಂತು ಬಾರದ ಲೋಕಕ್ಕೆ ಹೋಗಿದ್ದಾರೆ. ಆದರೆ ಅಮ್ಮನ ನೆನಪಿನ ಮಧುರ ಕ್ಷಣಗಳನ್ನು ಅಡಗಿಸಿಟ್ಟಿದ ಮೊಬೈಲ್ ನನ್ನ ಪಾಲಿಗೆ ಈಗ ಬೇಕು ಎಂದು ಪುಟ್ಟ ಬಾಲಕಿ ರೋಧಿಸುತ್ತಿದ್ದಾಳೆ.

ಕೊಡಗು ಜಿಲ್ಲೆಯ ಗುಮ್ಮನಕೊಲ್ಲಿ ಗ್ರಾಮದ ಹೃತಿಕ್ಷ ಹೆಸರಿನ ಪುಟ್ಟ ಕಂದಮ್ಮ ತನ್ನ ತಾಯಿಯನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾಳೆ. ತಾಯಿ ಜೊತೆಗೆ ಮಾತನಾಡಲು ಬಳಸುತ್ತಿದ್ದ ಫೋನ್ ಕಾಣೆಯಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ, ಶಾಸಕರಿಗೆ ಮತ್ತು ಜಿಲ್ಲಾ ಕೊವಿಡ್ ಆಸ್ಪತ್ರೆ ಸಿಬ್ಬಂದಿಗೆ ಪತ್ರ ಬರೆದು ತನ್ನ ತಾಯಿಯೊಂದಿಗೆ ಇದ್ದ ಮೊಬೈಲ್ ಹುಡುಕಿಕೊಡುವಂತೆ ಮನವಿ ಮಾಡಿದ್ದಾಳೆ. ನಮ್ಮ ಮನೆಯಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ನನಗೆ, ನನ್ನ ತಂದೆ ಮತ್ತು ತಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಂದೆ ಮತ್ತು ನಾನು ಹೋಂ ಐಸೋಲೇಷನ್​ನಲ್ಲಿ ಇದ್ದೆವು. ತಾಯಿಗೆ ಕೊರೊನಾ ತೀವ್ರವಾಗಿದ್ದರಿಂದ ಮೇ 6ರಂದು ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದೆವು. ಆದರೆ ತಾಯಿ ಚಿಕಿತ್ಸೆ ಫಲಕಾರಿಯಾದೆ ಮೇ 16ರಂದು ಬೆಳಿಗ್ಗೆ 6 ಗಂಟೆಗೆ ಮೃತಪಟ್ಟಿದ್ದಾರೆ ಎಂದು ನೊಂದ ಹುಡುಗಿ ಹೃತಿಕ್ಷ ಅಳಲು ತೋಡಿಕೊಂಡಿದ್ದಾರೆ.

ಈಗಷ್ಟೇ ಅಮ್ಮ ಇನ್ನಿಲ್ಲ ಎನ್ನುವ ನೋವನ್ನು ನುಂಗುತ್ತಿದ್ದೇನೆ. ಆದರೆ ಮನೆಯಲ್ಲಿ ಅಮ್ಮನೊಂದಿಗೆ ಇದ್ದ ಪ್ರತಿ ಕ್ಷಣವು ನೆನಪಿಗೆ ಬರುತ್ತಿದೆ. ಅದರಲ್ಲೂ ಲಾಕ್​ಡೌನ್ ಸಂದರ್ಭದಲ್ಲಿ ಅಮ್ಮನೇ ನನಗೆ ಎಲ್ಲಾ. ಆನ್​ಲೈನ್​ ಕ್ಲಾಸ್​ ಆಗುವಾಗ ಅಮ್ಮ ಸಹಅಯ ಮಾಡುತ್ತಿದ್ದರು. ಮನೆಯಲ್ಲಿ ಅಮ್ಮನೊಂದಿಗೆ ಆಡುತ್ತಿದ್ದ ಆಟಗಳು ನನ್ನನ್ನು ಕಾಡುತ್ತಿದೆ. ಕಳೆದ ಪ್ರತಿಯೊಂದು ಸನ್ನಿವೇಶವು ಅಮ್ಮನ ಕೈಯಲ್ಲಿ ಇದ್ದ ಮೊಬೈಲ್​ನಲ್ಲಿದೆ. ಹೀಗಾಗಿ ಆ ಮೊಬೈಲ್ ​ನನಗೆ ಬೇಕು ಎಂದು ಹೃತಿಕ್ಷ ಮನವಿ ಮಾಡಿದ್ದಾಳೆ.

ತಾಯಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಅಂತ್ಯಸಂಸ್ಕಾರಕ್ಕೆ ಅವಸರವಿತ್ತು. ಹೀಗಾಗಿ ವಿಷಯ ತಿಳಿದು ನಮ್ಮ ತಂದೆ ಆಸ್ಪತ್ರೆಗೆ ತೆರಳಿದ್ದಾರೆ. ತಾಯಿಯ ಮೃತದೇಹವನ್ನು ಆಸ್ಪತ್ರೆಯವರು ಹಸ್ತಾಂತರಿಸಿದ್ದು, ಆಸ್ಪತ್ರೆಯಲ್ಲಿ ಇದ್ದ ಅಮ್ಮನ ಇನ್ನಿತರ ಸಾಮಗ್ರಿಗಳನ್ನು ಸಿಬ್ಬಂದಿಗಳು ತಂದೆ ಕೈಗೆ ಇಟ್ಟಿದ್ದಾರೆ. ಆದರೆ ತಾಯಿ ಜೊತೆಗಿದ್ದ ಮೊಬೈಲ್ ಕಾಣಿಸುತ್ತಿಲ್ಲ. ಆಸ್ಪತ್ರೆಯವರ ಬಳಿ ಕೇಳಿದರೆ ನಮಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ. ಆ ಮೊಬೈಲ್​ನಲ್ಲಿ ನನ್ನ ತಾಯಿಯ ಜೊತೆಗಿದ್ದ ಸಾಕಷ್ಟು ನೆನಪುಗಳಿದೆ. ಹೀಗಾಗಿ ಮೊಬೈಲ್ ಹುಡುಕಿಕೊಡಿ ಎಂದು ನೊಂದ ಹುಡುಗಿ ಹೃತಿಕ್ಷ ಕೇಳಿಕೊಂಡಿದ್ದಾಳೆ.

ನನ್ನ ತಂದೆ ಕೂಲಿ ಕಾರ್ಮಿಕರಾಗಿದ್ದಾರೆ. ಕೊರೊನಾ ಕಾಲದಲ್ಲಿ ಓದಲು ಉಪಯೋಗವಾಗಲಿ ಎಂದು ಸ್ಯಾಮ್​ಸಂಗ್ ಮೊಬೈಲ್ ಕೊಡಿಸಿದ್ದರು. ಇದರಲ್ಲಿ ನನಗೆ ಆನ್​ಲೈನ್ ಕ್ಲಾಸ್ ಕೂಡ ನಡೆಯುತ್ತಿತ್ತು. ತಾಯಿಗೆ ಹುಷಾರಿಲ್ಲದ ಕಾರಣ ಇದು ಅವರ ಬಳಿ ಇತ್ತು. ಅಮ್ಮನ ಅಪ್ಪುಗೆಯಲ್ಲಿ ಇದ್ದ ಫೋಟೊಗಳು ಈ ಮೊಬೈಲ್​ನಲ್ಲಿ ಇದೆ. ಅಮ್ಮನ ಬಳಿ ಶುಕ್ರವಾರ ಸಂಜೆ (ಮೇ 15) ಮಾತನಾಡಿದ್ದೆ. ಆದರೆ ಶನಿವಾರ ಬೆಳಿಗ್ಗೆ ರಿಂಗ್ ಆದ ಫೋನ್ ಮಧ್ಯಾಹ್ನ ಸ್ವಿಚ್​ ಆಫ್ ಆಗಿದೆ. ಹೀಗಾಗಿ ನನ್ನ ತಾಯಿಯ ಮೊಬೈಲ್ ಹುಡುಕಿ ಕೋಡಿ ಎಂದು 5ನೇ ತರಗತಿ ಓದುತ್ತಿರುವ ಹೃತಿಕ್ಷ ಬೇಡಿಕೊಂಡಿದ್ದಾಳೆ.​

ತಾಯಿ ಇಲ್ಲದೆ ನಾನು ತಬ್ಬಲಿಯಾಗಿದ್ದೇನೆ, ಹೀಗಾಗಿ ತಾಯಿ ನೆನಪಿಗಾಗಿ ಇದ್ದ ಮೊಬೈಲ್ ಯಾರಾದರು ತೆಗೆದುಕೊಂಡಿದ್ದರೆ ಅಥವಾ ಸಿಕ್ಕಿದ್ದರೆ ದಯವಿಟ್ಟು ಈ ತಬ್ಬಲಿಗೆ ಅದನ್ನು ತಲುಪಿಸಿ ಎಂದು ಹೃತಿಕ್ಷ ಕಣ್ಣೀರು ಇಡುತ್ತಾ ಬೇಡಿಕೊಂಡಿದ್ದಾಳೆ.

ಇದನ್ನೂ ಓದಿ:

ಮೃತ ಸೋಂಕಿತರ ಆಭರಣ, ಬೆಲೆಬಾಳುವ ವಸ್ತು, ಮೊಬೈಲ್​ ಮಾಯ; ಆಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಆರೋಪ

Published On - 12:05 pm, Sun, 23 May 21

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ