AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ: ಗಗನಕ್ಕೇರಿದ ತರಕಾರಿ ಬೆಲೆ, ಯಾವುದಕ್ಕೆ ಎಷ್ಟೆಷ್ಟು?

ಹಿಂಗಾರು ಮಳೆಯ ಪರಿಣಾಮ ತರಕಾರಿಗಳು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ತರಕಾರಿ ಬೆಲೆ ಏರಿಕೆಯಾಗಿದ್ದು, ದೀಪಾವಳಿ ಹಬ್ಬಕ್ಕೆ ಈ ಬೆಲೆ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತರಕಾರಿಗಳ ಬೆಲೆ‌ ತುಂಬ ದುಬಾರಿಯಾಗಿದೆ.‌ ಬೆಲೆ‌ ಕೇಳಿಯೇ ಗ್ರಾಹಕರು ಶಾಕ್ ಆಗುತ್ತಿದೆ.‌

ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ: ಗಗನಕ್ಕೇರಿದ ತರಕಾರಿ ಬೆಲೆ, ಯಾವುದಕ್ಕೆ ಎಷ್ಟೆಷ್ಟು?
ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ: ಗಗನಕ್ಕೇರಿದ ತರಕಾರಿ ಬೆಲೆ, ಯಾವುದಕ್ಕೆ ಎಷ್ಟೆಷ್ಟು?
Poornima Agali Nagaraj
Poornima Agali Nagaraj| Edited By: |

Updated on: Oct 18, 2024 | 9:26 PM

Share

ಬೆಂಗಳೂರು, ಅಕ್ಟೋಬರ್​ 18: ರಾಜ್ಯ ರಾಜಾಧಾನಿಯಲ್ಲಿ ಒಂದು ವಾರದಿಂದ ಹಿಂಗಾರು ಮಳೆ ಚುರುಕಾಗಿದ್ದು, ಮಳೆ ಪರಿಣಾಮ ತರಕಾರಿಗಳ ಬೆಲೆ (Vegetable price hike) ಏರಿಕೆಯಾಗಿದೆ. ಕಳೆದ ವಾರಕ್ಕಿಂತ ಈ‌ ವಾರ 10 ರಿಂದ‌ 20 ರೂಪಾಯಿ‌ ಹಚ್ಚಾಗಿದ್ದು,‌ ದೀಪಾವಳಿ ಹಬ್ಬದ ವೇಳೆ‌ಗೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದ್ದು, ತರಕಾರಿಗಳ‌ ಬೆಲೆ‌ಗೆ ಗ್ರಾಹಕರು ಶಾಕ್ ಆಗುತ್ತಿದ್ದಾರೆ.

ಹೌದು, ಹಿಂಗಾರು ಮಳೆಯ ಪರಿಣಾಮ ತರಕಾರಿಗಳ‌ ಬೆಲೆ ಜಾಸ್ತಿಯಾಗಿದೆ.‌ ಕಳೆದ ವಾರ ಟೊಮೆಟೊ ಬೆಲೆ 50 ರೂ ಇತ್ತು.‌ ಈ ವಾರ 60 ರೂ ಆಗಿದೆ. ಇನ್ನು ಆಲೂಗಡ್ಡೆ ಕಳೆದ ವಾರ 30 ರೂ ಇತ್ತು. ಈ ವಾರ 45 ರೂ ಆಗಿದೆ.‌ ಇನ್ನು ಈರುಳ್ಳಿಯಂತು‌ ಮಾರುಕಟ್ಟೆಯಲ್ಲಿ ಕೆಜಿಗೆ 60 ರೂ ಇದ್ದರೆ, ತಳ್ಳುವ ಗಾಡಿಗಳಲ್ಲಿ ಹಾಗೂ ಮನೆಗಳ ಅಕ್ಕಪಕ್ಕದ ಅಂಗಡಿಗಳಲ್ಲಿ 70 ರಿಂದ 100 ರೂ. ರವರೆಗೂ ವ್ಯಾಪಾರವಾಗುತ್ತಿದೆಯಂತೆ.

ಇದನ್ನೂ ಓದಿ: Vegetables Price in Bangalore: ಮುಂಗಾರು ಮಳೆ ಅಬ್ಬರ, ಗಗನಕ್ಕೇರಿದ ತರಕಾರಿ ಬೆಲೆ: ಇಲ್ಲಿದೆ ದರ ಪಟ್ಟಿ

ಇನ್ನು ಕ್ಯಾರೆಟ್, ಬೀನ್ಸ್, ನಾಟಿ ಬಟಾಣಿ, ಹಸಿರು, ಕ್ಯಾಪ್ಸಿಕಮ್, ಮೆಣಸಿನಗಾಯಿ ಎಲ್ಲವೂ 100 ರ ಗಡಿದಾಟಿವೆ. ಹಿಂಗಾರು ಮಳೆಯ ಪರಿಣಾಮ ತರಕಾರಿಗಳು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ತರಕಾರಿ ಬೆಲೆ ಏರಿಕೆಯಾಗಿದ್ದು, ದೀಪಾವಳಿ ಹಬ್ಬಕ್ಕೆ ಈ ಬೆಲೆ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗಾದ್ರೆ ಈ ವಾರ ತರಾಕಾರಿಗಳ ಬೆಲೆ ಎಷ್ಟೆಷ್ಟು ಅಂತ ನೋಡುವುದಾದರೆ,

        ತರಕಾರಿ   ಹಿಂದಿನ ಬೆಲೆ     ಇಂದಿನ ಬೆಲೆ

  • ನಾಟಿ ಬೀನ್ಸ್: 120, 80 ರೂ.
  • ಟೊಮೆಟೊ: 15,     40 ರೂ.
  • ಬಿಳಿ ಬದನೆ: 60,     40 ರೂ.
  • ಮೆಣಸಿನ ಕಾಯಿ:  40,  80 ರೂ.
  • ನುಗ್ಗೆಕಾಯಿ ಕೆಜಿಗೆ: 100 ರಿಂದ 120, ಒಂದಕ್ಕೆ 20 ರೂ.
  • ಊಟಿ ಕ್ಯಾರೆಟ್: 120,   40ರೂ.
  • ನವಿಲುಕೋಸು: 40,  40ರೂ.
  • ಮೂಲಂಗಿ: 40,  40 ರೂ.
  • ಹೀರೇಕಾಯಿ: 40,  60 ರೂ.
  • ಆಲೂಗಡ್ಡೆ:   40,   40 ರೂ.
  • ದಪ್ಪ ಈರುಳ್ಳಿ: 60,   60ರೂ.
  • ಸಣ್ಣ ಈರುಳ್ಳಿ: 40,    30 ರೂ.
  • ಕ್ಯಾಪ್ಸಿಕಂ: 40,    40 ರೂ.
  • ಹಾಗಲಕಾಯಿ: 40, 40 ರೂ.
  • ಕೊತ್ತಂಬರಿ ಸೊಪ್ಪುಕಟ್: 30 ರೂ.
  • ಶುಂಠಿ: 150, 150 ರೂ.
  • ಬೆಳ್ಳುಳ್ಳಿ: 400,  400 ರೂ.
  • ಪಾಲಕ್ ಕೆಜಿ: 40 ರೂ.
  • ಪುದಿನ ಸೊಪ್ಪು ಕೆಜಿ: 92 ರೂ.
  • ನಾಟಿ ಬಟಾಣಿ:  200,   200 ರೂ.
  • ಫಾರಂ ಬಟಾಣಿ:   100, 100 ರೂ.

ಈ ಬೆಲೆ ಇನ್ನು ಮೂರು ದಿನಗಳು ಮುಂದುವರಿಯಲಿದೆ ಎನ್ನಲಾಗುತ್ತಿದೆ. ಸದ್ಯ ಮಳೆ ಇರುವ ಕಾರಣ ಈರುಳ್ಳಿ, ಟೋಮಾಟೋ, ಆಲೂಗಡ್ಡೆ, ಸೇರಿದಂತೆ ಹಲವು ತರಕಾರಿಗಳು ಮಳೆಗೆ ಹಾನಿಯಾಗಿವೆ. ಹೀಗಾಗಿ ತರಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಹಾಗಾಗಿ ತರಕಾರಿಗಳ ಬೆಲೆ ಏರಿಕೆಯಾಗಿದೆ.‌ ಅಲ್ಲದೇ ಇದೀಗ ಮದುವೆ ಸೀಸನ್​ ಆಗಿರುವುದರಿಂದ ತರಕಾರಿಗೆ ಹೆಚ್ಚು ಬೇಡಿಕೆ ಇದೆ‌.

ಆದರೆ ತರಕಾರಿಗಳು ಕಡಿಮೆ ಪೂರೈಕೆಯಾಗುತ್ತಿರುವ ಪರಿಣಾಮ ಬೆಲೆ ಏರಿಕೆಯಾಗಿದೆ. ಹೀಗಾಗಿ ವ್ಯಾಪಾರ ವಹಿವಾಟು‌ ಅಷ್ಟಾಗಿ ನಡೆಯುತ್ತಿಲ್ಲ. ಒಂದು ಕೆಜೆ ತೆಗೆದುಕೊಳ್ಳುವಲ್ಲಿ ಅರ್ಧ ಕೆಜೆ ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ವ್ಯಾಪಾರ ವಹಿವಾಟು‌ ಕಡಿಮೆ ಇದೆ ಅಂತ ವ್ಯಾಪಾರಸ್ಥರಾದ ಮುಬಾರಕ್ ಅವರು ಹೇಳಿದ್ದಾರೆ.

ತರಕಾರಿಗಳ ಬೆಲೆ‌ ಏರಿಕೆ ಬಗ್ಗೆ ಗ್ರಾಹಕರು ಬೇಸರ

ತರಕಾರಿಗಳ ಬೆಲೆ‌ ತುಂಬ ದುಬಾರಿಯಾಗಿದೆ.‌ ಬೆಲೆ‌ ಕೇಳಿಯೇ ಶಾಕ್ ಆಗುತ್ತಿದೆ.‌ ಆದರೆ ಏನು ಮಾಡುವುದಕ್ಕೆ ಆಗುವುದಿಲ್ಲ. ಮಳೆ ಕಾರಣ ಹೇಳುತ್ತಿದ್ದಾರೆ. ನಾವು ರೈತರ ಕಷ್ಟ ಅರ್ಥ ಮಾಡಿಕೊಳ್ಳಬೇಕು. ಬೆಲೆ ಜಾಸ್ತಿಯಾದ್ರು, ಕಡಿಮೆಯಾದ್ರು ತರಕಾರಿಯನ್ನ ಖರೀದಿ ಮಾಡಲೇಬೇಕು. ಮಧ್ಯಮ ವರ್ಗದವರಿಗೆ ಈ ಬೆಲೆ ಏರಿಕೆ ತುಂಬ ಕಷ್ಟ. ಹೀಗಾಗಿ ಇಂದೆ ಬಂದು ತರಾಕಾರಿಗಳ‌ನ್ನ ಖರೀದಿ ಮಾಡುತ್ತಿದ್ದೇವೆ ಅಂತ ಗ್ರಾಹಕರಾದ ಚೈತ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ ವಾರವೂ ತರಕಾರಿಗಳ‌ ಬೆಲೆ ಏರಿಕೆ: ಮೆಣಸಿನಕಾಯಿ, ಬೀನ್ಸ್​ ದರ ಗಗನಕ್ಕೆ!

ಹಿಂಗಾರು ಮಳೆಯ ಆರ್ಭಟದಿಂದಾಗಿ ಜನರು ರೋಸಿ ಹೋಗಿದ್ದು, ಈ ಮಧ್ಯೆ ರೈತರಿಗೆ ಇನ್ನಿಲ್ಲದ ಸಮಸ್ಯೆ ಉಂಟಾಗಿದೆ. ತರಕಾರಿ ಬೆಲೆ ಫುಲ್ ದುಬಾರಿಯಾಗಿದೆ. ಇನ್ನು ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ಹಬ್ಬದ ವೇಳೆ ತರಕಾರಿ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯಾತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Poornima Agali Nagaraj
Poornima Agali Nagaraj
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ