AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು
ಮಳೆಯಿಂದ ನೆಲಕ್ಕೆ ಉರುಳಿದ ವಿದ್ಯುತ್ ಕಂಬ
sandhya thejappa
|

Updated on: Apr 20, 2021 | 10:47 AM

Share

ಗದಗ: ರೈತ ಮಾಡಿರುವ ತಪ್ಪಾದರೂ ಏನು? ಈ ಭೂಮಿ ಮೇಲೆ ಎಂತಹಾ ದುರಂತಗಳು ನಡೆದರು ಅದರ ಕೆಟ್ಟ ಪರಿಣಾಮ ರೈತರ ಬದುಕಿನ ಮೇಲೆ ಬೀರುತ್ತದೆ. ರೈತರು ಬೆಳೆಗಾಗಿ ವರ್ಷಪೂರ್ತಿ ದುಡಿಯುತ್ತಾರೆ. ಬಂದ ಆದಾಯದ ಅರ್ಧದಷ್ಟು ಭಾಗವನ್ನು ಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಬೆಳೆಗಾಗಿ ಎತ್ತಿಡುತ್ತಾರೆ. ಆದರೆ ಅಕಾಲಿಕ ಮಳೆಯಿಂದ ರೈತರ ಶ್ರಮಕ್ಕೆ ಕೊಳ್ಳಿ ಇಟ್ಟಂತಾಗುತ್ತದೆ. ಗದಗ ಜಿಲ್ಲೆಯಲ್ಲೂ ನಿನ್ನೆ ಸಂಜೆ ಹೊತ್ತಿಗೆ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾಶವಾದ ಬೆಳೆಯನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ. ಇನ್ನು ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ.

ಇನ್ನು ಇಂದು ಬೆಳ್ಳಂಬೆಳಗ್ಗೆಯೇ ತುಮಕೂರಿನಲ್ಲಿ ಮಳೆಯಾಗಿದೆ. ತುಮಕೂರು ನಗರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಬಿಸಿಲಿಗೆ ಬೇಗೆಗೆ ತಂಪೆರೆದಂತಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗಿರುವುದು ಕಂಡುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ; ಐವರು ಬಂಧನ, 12 ಲಕ್ಷ ರೂಪಾಯಿ ವಶ

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

(Heavy Rain at gadag and Rain has destroyed an enormous amount of crop)

Follow Us
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ