ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು
ಮಳೆಯಿಂದ ನೆಲಕ್ಕೆ ಉರುಳಿದ ವಿದ್ಯುತ್ ಕಂಬ

Updated on: Apr 20, 2021 | 10:47 AM

ಗದಗ: ರೈತ ಮಾಡಿರುವ ತಪ್ಪಾದರೂ ಏನು? ಈ ಭೂಮಿ ಮೇಲೆ ಎಂತಹಾ ದುರಂತಗಳು ನಡೆದರು ಅದರ ಕೆಟ್ಟ ಪರಿಣಾಮ ರೈತರ ಬದುಕಿನ ಮೇಲೆ ಬೀರುತ್ತದೆ. ರೈತರು ಬೆಳೆಗಾಗಿ ವರ್ಷಪೂರ್ತಿ ದುಡಿಯುತ್ತಾರೆ. ಬಂದ ಆದಾಯದ ಅರ್ಧದಷ್ಟು ಭಾಗವನ್ನು ಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಬೆಳೆಗಾಗಿ ಎತ್ತಿಡುತ್ತಾರೆ. ಆದರೆ ಅಕಾಲಿಕ ಮಳೆಯಿಂದ ರೈತರ ಶ್ರಮಕ್ಕೆ ಕೊಳ್ಳಿ ಇಟ್ಟಂತಾಗುತ್ತದೆ. ಗದಗ ಜಿಲ್ಲೆಯಲ್ಲೂ ನಿನ್ನೆ ಸಂಜೆ ಹೊತ್ತಿಗೆ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾಶವಾದ ಬೆಳೆಯನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ. ಇನ್ನು ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ.

ಇನ್ನು ಇಂದು ಬೆಳ್ಳಂಬೆಳಗ್ಗೆಯೇ ತುಮಕೂರಿನಲ್ಲಿ ಮಳೆಯಾಗಿದೆ. ತುಮಕೂರು ನಗರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಬಿಸಿಲಿಗೆ ಬೇಗೆಗೆ ತಂಪೆರೆದಂತಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗಿರುವುದು ಕಂಡುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ; ಐವರು ಬಂಧನ, 12 ಲಕ್ಷ ರೂಪಾಯಿ ವಶ

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

(Heavy Rain at gadag and Rain has destroyed an enormous amount of crop)