ಕರ್ನಾಟಕದ ಹಲವೆಡೆ ಮುಂದುವರಿದ ಮಳೆ; ಅಪಾರ ಬೆಳ ನಾಶಕ್ಕೆ ರೈತರು ಕಂಗಾಲು

ಒಂದು ಲಕ್ಷಕ್ಕೂ ಹೆಚ್ಚು ಹಣ ವೆಚ್ಚಾ ಮಾಡಿ ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಸಂತೋಷ್ ಎಂಬ ರೈತ ಕೋಸು ಬೆಳೆದಿದ್ದರು. ಆದರೆ ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಕರ್ನಾಟಕದ ಹಲವೆಡೆ ಮುಂದುವರಿದ ಮಳೆ; ಅಪಾರ ಬೆಳ ನಾಶಕ್ಕೆ ರೈತರು ಕಂಗಾಲು
ನೀರು ಪಾಲಾಗಿರುವ ಕೋಸು
Follow us
| Updated By: sandhya thejappa

Updated on:May 22, 2022 | 9:06 AM

ಬೆಂಗಳೂರು: ರಾಜ್ಯದ ಹಲವೆಡೆ ಧಾರಕಾರ ಮಳೆ (Heavy Rain) ಮುಂದುವರಿದಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಅಪಾರ ಪ್ರಮಾಣದ ಬೆಳೆ (Crop) ನಾಶವಾಗಿದೆ. ದಾವಣಗೆರೆಯಲ್ಲಿ ಒಂದೂವರೆ ಎಕರೆ ಪ್ರದೇಶದಲ್ಲಿದ್ದ ಎಲೆಕೋಸು ಬೆಳೆ ನೀರು ಪಾಲಾಗಿದೆ. ಇನ್ನೆರೆಡು ದಿನಗಳಲ್ಲಿ ಮಾರುಕಟ್ಟೆಗೆ ಹೋಗಬೇಕಿದ್ದ ಕೋಸು, ನೀರು ಪಾಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಹಣ ವೆಚ್ಚಾ ಮಾಡಿ ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಸಂತೋಷ್ ಎಂಬ ರೈತ ಕೋಸು ಬೆಳೆದಿದ್ದರು. ಆದರೆ ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ನಿರಂತರವಾಗಿ ಕುಸಿಯುತ್ತಿರುವ ಮನೆಗಳು: ಗದಗದಲ್ಲಿ ಸದ್ಯ ಮಳೆ ಕಡಿಮೆಯಾದರೂ ಅವಾಂತರ ಮುಂದುವರಿದಿದೆ. ಹಳ್ಳಿಗಳಲ್ಲಿ ಮಣ್ಣಿನ ಮನೆಗಳು ನಿರಂತರ ಕುಸಿಯುತ್ತಿದ್ದು, ಬಡ ಕುಟುಂಬಗಳ ಬದುಕು ಬೀದಿಗೆ ಬಂದಂತಾಗಿದೆ. ಬಾಳಿ ಬದುಕಿದ ಮನೆಯೊಳಗೆ ಹೋಗಲು ಭಯ, ಆತಂಕ ನಿರ್ಮಾಣವಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಈ ದೃಶ್ಯಗಳು ಕಂಡು ಬಂದಿವೆ. ಮನೆಗಳು ಕುಸಿಯುತ್ತಿವೆ ಎಂದು ಮಹಿಳೆ ಕಣ್ಣೀರು ಹಾಕಿದ್ದಾರೆ. ಮನೆ ಯಜಮಾನವೂ ಇಲ್ಲ. ಮನೆಯೂ ಇಲ್ಲ. ನಮಗೆ ಯಾರೂ ದಿಕ್ಕು? ಅಂತ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Poetry: ಅವಿತಕವಿತೆ; ಮನುಷ್ಯ ತನ್ನ ತಲವಾರಿನಲ್ಲೇ ತನ್ನ ಕ್ರೌರ್ಯವ ವಧಿಸುವ ಹಾಗೆ

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!
Image
Poetry: ಅವಿತಕವಿತೆ; ಮನುಷ್ಯ ತನ್ನ ತಲವಾರಿನಲ್ಲೇ ತನ್ನ ಕ್ರೌರ್ಯವ ವಧಿಸುವ ಹಾಗೆ
Image
Dandruff: ತಲೆ ಹೊಟ್ಟಿಗೆ ಕಾರಣವೇನು? ನಿವಾರಣೆ ಹೇಗೆ? ಇಲ್ಲಿದೆ ಮಾಹಿತಿ
Image
MI vs DC: ಮುಂಬೈ ಗೆದ್ದ ತಕ್ಷಣ ಪಂದ್ಯ ನೋಡುತ್ತಿದ್ದ ಆರ್​​ಸಿಬಿ ಆಟಗಾರರು ಮಾಡಿದ್ದೇನು ನೋಡಿ

ನೆಲಕ್ಕರುಳಿದ ಬೃಹತ್ ದೈವಿ ಮರ: ರಾಯಚೂರು: ನಗರದ ಮಂಗಳವಾರಪೇಟೆಯಲ್ಲಿ ಬೃಹತ್ ದೈವಿ ಮರ ನೆಲಕ್ಕರುಳಿದೆ. ಮಂಗಳವಾರಪೇಟೆಯ ಆಂಜನೇಯ ದೇವಸ್ಥಾನದ ಕಟ್ಟೆ ಮೇಲಿದ್ದ ದೈವಿ ಮರವನ್ನು ಭಕ್ತರು ಪೂಜಿಸುತ್ತಿದ್ದರು. ಬಿರುಗಾಳಿಗೆ ಬುಡ ಸಮೇತ ನೆಲಕ್ಕುರುಳಿದೆ. ಪಕ್ಕದಲ್ಲಿದ್ದ ಮನೆ ಮೇಲೆ ಉರುಳಿದೆ. ಮನೆಗೆ ಸಣ್ಣ‌ ಪ್ರಮಾಣದಲ್ಲಿ ಹಾನಿಯಾಗಿದೆ.

ವಾಡಿಕೆಗಿಂತ ಹೆಚ್ಚು ಮಳೆ: ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 40 ಮಿಮಿ ವಾಡಿಕೆ ಮಳೆ ಬರಬೇಕಿತ್ತು. ಆದರೆ 136 ಮಿಮಿ ಮಳೆ ಸುರಿದಿದೆ.   ಕೇವಲ ಮೂರು ದಿನದಲ್ಲಿ ಶೇ.243 ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು  ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆ ಆಗಿದೆ.  ಜಿಲ್ಲೆಯಾದ್ಯಂತ 14 ಮೇಕೆ, ಕುರಿಗಳು ಹಾಗೂ ಒಂದು ಜಾನುವಾರು ಮೃತಪಟ್ಟಿದೆ. 26 ಮನೆಗಳಿಗೆ ಹಾನಿ ಆಗಿದೆ. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿ ಆಗಿದೆ ಎಂದು ಡಿಸಿ ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:58 am, Sun, 22 May 22

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ