AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವೆಡೆ ಮುಂದುವರಿದ ಮಳೆ; ಅಪಾರ ಬೆಳ ನಾಶಕ್ಕೆ ರೈತರು ಕಂಗಾಲು

ಒಂದು ಲಕ್ಷಕ್ಕೂ ಹೆಚ್ಚು ಹಣ ವೆಚ್ಚಾ ಮಾಡಿ ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಸಂತೋಷ್ ಎಂಬ ರೈತ ಕೋಸು ಬೆಳೆದಿದ್ದರು. ಆದರೆ ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಕರ್ನಾಟಕದ ಹಲವೆಡೆ ಮುಂದುವರಿದ ಮಳೆ; ಅಪಾರ ಬೆಳ ನಾಶಕ್ಕೆ ರೈತರು ಕಂಗಾಲು
ನೀರು ಪಾಲಾಗಿರುವ ಕೋಸು
TV9 Web
| Edited By: |

Updated on:May 22, 2022 | 9:06 AM

Share

ಬೆಂಗಳೂರು: ರಾಜ್ಯದ ಹಲವೆಡೆ ಧಾರಕಾರ ಮಳೆ (Heavy Rain) ಮುಂದುವರಿದಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಅಪಾರ ಪ್ರಮಾಣದ ಬೆಳೆ (Crop) ನಾಶವಾಗಿದೆ. ದಾವಣಗೆರೆಯಲ್ಲಿ ಒಂದೂವರೆ ಎಕರೆ ಪ್ರದೇಶದಲ್ಲಿದ್ದ ಎಲೆಕೋಸು ಬೆಳೆ ನೀರು ಪಾಲಾಗಿದೆ. ಇನ್ನೆರೆಡು ದಿನಗಳಲ್ಲಿ ಮಾರುಕಟ್ಟೆಗೆ ಹೋಗಬೇಕಿದ್ದ ಕೋಸು, ನೀರು ಪಾಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಹಣ ವೆಚ್ಚಾ ಮಾಡಿ ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಸಂತೋಷ್ ಎಂಬ ರೈತ ಕೋಸು ಬೆಳೆದಿದ್ದರು. ಆದರೆ ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ನಿರಂತರವಾಗಿ ಕುಸಿಯುತ್ತಿರುವ ಮನೆಗಳು: ಗದಗದಲ್ಲಿ ಸದ್ಯ ಮಳೆ ಕಡಿಮೆಯಾದರೂ ಅವಾಂತರ ಮುಂದುವರಿದಿದೆ. ಹಳ್ಳಿಗಳಲ್ಲಿ ಮಣ್ಣಿನ ಮನೆಗಳು ನಿರಂತರ ಕುಸಿಯುತ್ತಿದ್ದು, ಬಡ ಕುಟುಂಬಗಳ ಬದುಕು ಬೀದಿಗೆ ಬಂದಂತಾಗಿದೆ. ಬಾಳಿ ಬದುಕಿದ ಮನೆಯೊಳಗೆ ಹೋಗಲು ಭಯ, ಆತಂಕ ನಿರ್ಮಾಣವಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಈ ದೃಶ್ಯಗಳು ಕಂಡು ಬಂದಿವೆ. ಮನೆಗಳು ಕುಸಿಯುತ್ತಿವೆ ಎಂದು ಮಹಿಳೆ ಕಣ್ಣೀರು ಹಾಕಿದ್ದಾರೆ. ಮನೆ ಯಜಮಾನವೂ ಇಲ್ಲ. ಮನೆಯೂ ಇಲ್ಲ. ನಮಗೆ ಯಾರೂ ದಿಕ್ಕು? ಅಂತ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Poetry: ಅವಿತಕವಿತೆ; ಮನುಷ್ಯ ತನ್ನ ತಲವಾರಿನಲ್ಲೇ ತನ್ನ ಕ್ರೌರ್ಯವ ವಧಿಸುವ ಹಾಗೆ

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!
Image
Poetry: ಅವಿತಕವಿತೆ; ಮನುಷ್ಯ ತನ್ನ ತಲವಾರಿನಲ್ಲೇ ತನ್ನ ಕ್ರೌರ್ಯವ ವಧಿಸುವ ಹಾಗೆ
Image
Dandruff: ತಲೆ ಹೊಟ್ಟಿಗೆ ಕಾರಣವೇನು? ನಿವಾರಣೆ ಹೇಗೆ? ಇಲ್ಲಿದೆ ಮಾಹಿತಿ
Image
MI vs DC: ಮುಂಬೈ ಗೆದ್ದ ತಕ್ಷಣ ಪಂದ್ಯ ನೋಡುತ್ತಿದ್ದ ಆರ್​​ಸಿಬಿ ಆಟಗಾರರು ಮಾಡಿದ್ದೇನು ನೋಡಿ

ನೆಲಕ್ಕರುಳಿದ ಬೃಹತ್ ದೈವಿ ಮರ: ರಾಯಚೂರು: ನಗರದ ಮಂಗಳವಾರಪೇಟೆಯಲ್ಲಿ ಬೃಹತ್ ದೈವಿ ಮರ ನೆಲಕ್ಕರುಳಿದೆ. ಮಂಗಳವಾರಪೇಟೆಯ ಆಂಜನೇಯ ದೇವಸ್ಥಾನದ ಕಟ್ಟೆ ಮೇಲಿದ್ದ ದೈವಿ ಮರವನ್ನು ಭಕ್ತರು ಪೂಜಿಸುತ್ತಿದ್ದರು. ಬಿರುಗಾಳಿಗೆ ಬುಡ ಸಮೇತ ನೆಲಕ್ಕುರುಳಿದೆ. ಪಕ್ಕದಲ್ಲಿದ್ದ ಮನೆ ಮೇಲೆ ಉರುಳಿದೆ. ಮನೆಗೆ ಸಣ್ಣ‌ ಪ್ರಮಾಣದಲ್ಲಿ ಹಾನಿಯಾಗಿದೆ.

ವಾಡಿಕೆಗಿಂತ ಹೆಚ್ಚು ಮಳೆ: ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 40 ಮಿಮಿ ವಾಡಿಕೆ ಮಳೆ ಬರಬೇಕಿತ್ತು. ಆದರೆ 136 ಮಿಮಿ ಮಳೆ ಸುರಿದಿದೆ.   ಕೇವಲ ಮೂರು ದಿನದಲ್ಲಿ ಶೇ.243 ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು  ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆ ಆಗಿದೆ.  ಜಿಲ್ಲೆಯಾದ್ಯಂತ 14 ಮೇಕೆ, ಕುರಿಗಳು ಹಾಗೂ ಒಂದು ಜಾನುವಾರು ಮೃತಪಟ್ಟಿದೆ. 26 ಮನೆಗಳಿಗೆ ಹಾನಿ ಆಗಿದೆ. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿ ಆಗಿದೆ ಎಂದು ಡಿಸಿ ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:58 am, Sun, 22 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್