AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಇಂದಿನಿಂದ ಮೇ 25ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸಂಭವ

Karnataka Weather: ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಈಗಾಗಲೇ ಮಳೆ ಆಗಿದೆ. ಕೋಲಾರದಲ್ಲಿ 10 ಸೆಂ.ಮೀ ಮಳೆ ಆಗಿದೆ. ಭಟ್ಕಳ 3 ಸೆಂ.ಮೀ, ಸುಳ್ಯ 3 ಸೆಂ.‌ಮೀ, ಆನೆಕಲ್ಲು 3 ಸೆಂ.ಮೀ ಮಳೆ ಆಗಿದೆ ಎಂದು ಅವರು ಮಾಹಿತಿ ನೀಡಿದರು.

Karnataka Rain: ಇಂದಿನಿಂದ ಮೇ 25ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸಂಭವ
ಕರ್ನಾಟಕ ರಾಜ್ಯ ಹವಮಾನ ವರದಿ
Follow us
guruganesh bhat
|

Updated on: May 21, 2021 | 5:29 PM

ಬೆಂಗಳೂರು: ಇಂದಿನಿಂದ ಮೇ 25ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಆಗಲಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ ಜಿಲ್ಲೆ ಮತ್ತು ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಇಂದು ಬಹುತೇಕ ಕರಾವಳಿಯ ಎಲ್ಲಾ ಭಾಗದಲ್ಲೂ ಮಳೆ ಆಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಈಗಾಗಲೇ ಮಳೆ ಆಗಿದೆ. ಕೋಲಾರದಲ್ಲಿ 10 ಸೆಂ.ಮೀ ಮಳೆ ಆಗಿದೆ. ಭಟ್ಕಳ 3 ಸೆಂ.ಮೀ, ಸುಳ್ಯ 3 ಸೆಂ.‌ಮೀ, ಆನೆಕಲ್ಲು 3 ಸೆಂ.ಮೀ ಮಳೆ ಆಗಿದೆ ಎಂದು ಅವರು ಮಾಹಿತಿ ನೀಡಿದರು.

ತೌಕ್ತೆ ಚಂಡಮಾರುತದ ನಂತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಹೊತ್ತಿನಲ್ಲಿ ಮಳೆ ಸುರಿಯುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯವ್ಯಾಪಿ ಲೆಕ್ಕಾಚಾರದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದೆಯಾದರೂ ಮಲೆನಾಡು, ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪು ಹವೆಯ ಪರಿಣಾಮ ಮಳೆಗಾಲದ ವಾತಾವರಣದಂತೆಯೇ ಪರಿಸರ ಕಾಣಿಸುತ್ತಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ. ಅದೇರೀತಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ, ತ್ರಿಪುರಾ ಮತ್ತು ಕೇರಳ ಪ್ರಾಂತ್ಯಗಳಲ್ಲೂ ಉತ್ತಮ ಮಳೆ ಸುರಿಯುವ ಸಂಭವವಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಉತ್ತರಾಖಂಡ, ಪಶ್ಚಿಮ ಬಂಗಾಳದ ಕೆಲ ಭಾಗ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ತುಂತುರು ಮಳೆ ಸುರಿಯಬಹುದಾಗಿದ್ದು, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ತೆಲಂಗಾಣದ ಒಂದಷ್ಟು ಪ್ರದೇಶಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದೆನ್ನಲಾಗಿದೆ. ಏತನ್ಮಧ್ಯೆ ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಹಾಗೂ ಗುಜರಾತ್ ರಾಜ್ಯದ ಪಶ್ಚಿಮ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 40ಡಿಗ್ರಿ ಸೆಲ್ಸಿಯಸ್ ದಾಟಲಿದೆ ಎಂಬುದನ್ನೂ ವರದಿಗಳು ತಿಳಿಸಿವೆ.

ಇದನ್ನೂ ಓದಿ: ಕೊವಿಡ್ ಔಷಧಿಗಳಿಗೆ ಉಚ್ಚರಿಸಲು ಅಸಾಧ್ಯವಾದ ಹೆಸರು ಇಟ್ಟದ್ದು ಶಶಿ ತರೂರ್ ಆಗಿರಬಹುದೇ; ತೆಲಂಗಾಣ ಸಚಿವ ಕೆಟಿಆರ್ ಪ್ರಶ್ನೆ

ಚಿಪ್ಕೊ ಚಳವಳಿಯ ರೂವಾರಿ ಸುಂದರ್​ಲಾಲ್ ಬಹುಗುಣ ಕೊವಿಡ್​ಗೆ ಬಲಿ

(Heavy rain expected along the coastal area of Karnataka from today till May 25)

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್