AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ, ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂನೆ: ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಜೂನ್ 22ರಿಂದ 24ರವರೆಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಭೂ ಕುಸಿತದ ಸಾಧ್ಯತೆ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಉತ್ತರ ಕರ್ನಾಟಕ, ಕರಾವಳಿಯಲ್ಲಿ  ಭಾರೀ ಮಳೆ ಮುನ್ಸೂನೆ: ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂನೆ, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jun 20, 2024 | 9:18 PM

Share

ಕಲಬುರಗಿ, ಜೂನ್​ 20: ಹವಾಮಾನ ಇಲಾಖೆಯಿಂದ ಭಾರೀ ಮಳೆ (rain) ಮುನ್ಸೂಚನೆ ಹಿನ್ನೆಲೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಜೂನ್ 22ರಿಂದ 24ರವರೆಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಜೊತೆ ಭೂ ಕುಸಿತದ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಸಮುದ್ರ ಭಾಗದಲ್ಲಿ 45 ರಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ.

ಹುಬ್ಬಳ್ಳಿಯಲ್ಲಿ ಅರ್ಧ ಗಂಟೆಯಿಂದ ಧಾರಕಾರ ಮಳೆ ಸುರಿದಿದೆ. ಎರಡುಮೂರು ದಿನಗಳಿಂದ ಮರೆಯಾಗಿದ್ದ ವರುಣ ಇಂದು ಏಕಾಏಕಿ ಆರಂಭವಾದ ಮಳೆಗೆ ಜನ‌ಜೀವನ ಅಸ್ತವ್ಯಸ್ತ ಆಗಿದೆ.

ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಎಂಟ್ರಿ ಕೊಟ್ಟಿದ್ದ. ನಾಗವಾರ, ಬಾಣಸವಾಡಿ, ರಿಂಗ ರಸ್ತೆ ಸೇರಿದಂತೆ ನಗರದ ಹಲವೆಡೆ ತುಂತುರು ಮಳೆ ಸುರಿದಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ಇದೆ. ಜೂನ್​ 23 ರಿಂದ ರಾಜ್ಯಾದ್ಯಂತ ಮಳೆ ಚುರುಕುಗೊಳ್ಳಲಿದೆ.

ಇದನ್ನೂ ಓದಿ: Bengaluru Rains: ಸಿಲಿಕಾನ್​ ಸಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವರುಣ: ರಿಚ್​ಮಂಡ್​ ಟೌನ್​ ಸೇರಿ ಕೆಲವೆಡೆ ಮಳೆ

ನೆಲಮಂಗಲದ ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಗಾಳಿ ಸಹಿತ ಭಾರಿ ಮಳೆ ಆಗಿದೆ. ಜೋರು ಮಳೆಗೆ ವಾಹನ ಸವಾರರಿಗೆ ಸಂಕಷ್ಟ ಎದುರಾಗಿತ್ತು. ಕೆಲಸ ಮುಗಿಸಿ ಮನೆಗೆ ತೆರಳಿದ್ದವರಿಗೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಜನರು ಛತ್ರಿ ಹಿಡಿದು ಹೋಗುತ್ತಿರುವುದು ಕಂಡುಬಂತ್ತು.

ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಬಾಗಲಕೋಟೆಯಲ್ಲಿ ಅಬ್ಬರಿಸಿದ್ದ. ನವನಗರ, ವಿದ್ಯಾಗಿರಿ ಸೇರಿದಂತೆ ಹಲವೆಡೆ ಮಳೆ ಆಗಿದೆ. ಆ ಮೂಲಕ ಬಿತ್ತನೆ ಮಾಡಿದ್ದ ರೈತರ ಮುಖದಲ್ಲಿ ಸಂತಸ ಮೂಡಿತ್ತು.

ಇದನ್ನೂ ಓದಿ: Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ

ಅದೇ ರೀತಿಯಾಗಿ ಚಿಕ್ಕಮಗಳೂರಲ್ಲೂ ಗಾಳಿ ಸಹಿತ ಜೋರು ಮಳೆ ಆಗಿದೆ. ಚಾರ್ಮಾಡಿ ಫಾಟ್​, ಬಾಳೂರು, ಬಣಕಲ್​ ಭಾಗದಲ್ಲಿ ಮಳೆ ಸುರಿದಿದೆ. ಅರ್ಧ ಗಂಟೆ ಸುರಿದ ಮಳೆಗೆ ಚಾರ್ಮಾಡಿ ಫಾಟ್​ನಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Thu, 20 June 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ