AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

Bangalore Heavy Rains Effect: ರಾಜಧಾನಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿದ್ದಾನೆ. ಏಕಾಏಕಿ ಸುರಿದ ಧಾರಾಕಾರ ಮಳೆಗೆ ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನಸವಾರರು ಪರದಾಡಿದ ಪ್ರಸಂಗ ನಡೆದಿದೆ. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ
ಮಳೆ
ಪ್ರಸನ್ನ ಹೆಗಡೆ
| Edited By: |

Updated on:Oct 08, 2025 | 4:24 PM

Share

ಬೆಂಗಳೂರು, ಅಕ್ಟೋಬರ್​ 08: ರಾಜಧಾನಿ ಬೆಂಗಳೂರಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ನಗರದ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೆ ಇನ್ನು ಕೆಲವು ಏರಿಯಾಗಳಲ್ಲಿ ತುಂತುರು ಮಳೆಯಾಗಿದೆ. ಯಲಹಂಕ ಆಸುಪಾಸು ಧಾರಾಕಾರ ಮಳೆ (Bangalore Rains) ಸುರಿದಿದ್ದು, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ವೇಳೆ ಸುರಿದ ಮಳೆಯಿಂದ ವಾಜನ ಸವಾರರಿಗೆ ತೊಂದರೆಯಾಗಿದೆ.

ರಸ್ತೆಯಲ್ಲಿ ನಿಂತ ಮಳೆ ನೀರು

ಯಲಹಂಕ ವ್ಯಾಪ್ತಿಯಲ್ಲಿ ವರುಣ ಅಬ್ಬರಿಸಿದ ಕಾರಣ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ್ದಾರೆ. ಕಾಫಿ ಡೇ ಬಳಿ ಮಳೆ ನೀರು ನಿಂತಿರುವುದರಿಂದ ಏರ್‌ಪೋರ್ಟ್ ರಸ್ತೆಯ ಕಡೆಯ ರಸ್ತೆಯಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂದಿದೆ. ಯಲಹಂಕ ರೈಲ್ವೇ ಅಂಡರ್‌ಪಾಸ್‌ ಬಳಿಯೂ ನೀರು ನಿಂತಿರುವುದರಿಂದ ನಗರದ ಕಡೆಗೆ ತೆರಳುವ ವಾಹನಗಳಿಗೆ ತೊಂದರೆಯಾಗಿದೆ. ಹಾಗೆಯೇ ವೀರಸಂದ್ರ ಜಂಕ್ಷನ್ ಬಳಿ ನೀರು ನಿಂತಿರುವುದರಿಂದ ಹೊಸೂರು ಕಡೆಗೆ ನಿಧಾನಗತಿಯ ಸಂಚಾರ ಕಂಡುಬಂತು.

ಬೆಂಗಳೂರು ಸಂಚಾರಿ ಪೊಲೀಸರಿಂದ ಟ್ವೀಟ್​

ಬೆಂಗಳೂರಲ್ಲಿ ನಾಳೆಯೂ ಮಳೆ

ಇನ್ನು ಇವತ್ತು ಬೆಳಗ್ಗೆಯಿಂದಲೇ ಬೆಂಗಳೂರಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿತ್ತು. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಅಥವಾ ಸಣ್ಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:28 pm, Wed, 8 October 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ