AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

Bangalore Heavy Rains Effect: ರಾಜಧಾನಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿದ್ದಾನೆ. ಏಕಾಏಕಿ ಸುರಿದ ಧಾರಾಕಾರ ಮಳೆಗೆ ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನಸವಾರರು ಪರದಾಡಿದ ಪ್ರಸಂಗ ನಡೆದಿದೆ. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ
ಮಳೆ
ಪ್ರಸನ್ನ ಹೆಗಡೆ
| Updated By: Digi Tech Desk|

Updated on:Oct 08, 2025 | 4:24 PM

Share

ಬೆಂಗಳೂರು, ಅಕ್ಟೋಬರ್​ 08: ರಾಜಧಾನಿ ಬೆಂಗಳೂರಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ನಗರದ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೆ ಇನ್ನು ಕೆಲವು ಏರಿಯಾಗಳಲ್ಲಿ ತುಂತುರು ಮಳೆಯಾಗಿದೆ. ಯಲಹಂಕ ಆಸುಪಾಸು ಧಾರಾಕಾರ ಮಳೆ (Bangalore Rains) ಸುರಿದಿದ್ದು, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ವೇಳೆ ಸುರಿದ ಮಳೆಯಿಂದ ವಾಜನ ಸವಾರರಿಗೆ ತೊಂದರೆಯಾಗಿದೆ.

ರಸ್ತೆಯಲ್ಲಿ ನಿಂತ ಮಳೆ ನೀರು

ಯಲಹಂಕ ವ್ಯಾಪ್ತಿಯಲ್ಲಿ ವರುಣ ಅಬ್ಬರಿಸಿದ ಕಾರಣ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ್ದಾರೆ. ಕಾಫಿ ಡೇ ಬಳಿ ಮಳೆ ನೀರು ನಿಂತಿರುವುದರಿಂದ ಏರ್‌ಪೋರ್ಟ್ ರಸ್ತೆಯ ಕಡೆಯ ರಸ್ತೆಯಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂದಿದೆ. ಯಲಹಂಕ ರೈಲ್ವೇ ಅಂಡರ್‌ಪಾಸ್‌ ಬಳಿಯೂ ನೀರು ನಿಂತಿರುವುದರಿಂದ ನಗರದ ಕಡೆಗೆ ತೆರಳುವ ವಾಹನಗಳಿಗೆ ತೊಂದರೆಯಾಗಿದೆ. ಹಾಗೆಯೇ ವೀರಸಂದ್ರ ಜಂಕ್ಷನ್ ಬಳಿ ನೀರು ನಿಂತಿರುವುದರಿಂದ ಹೊಸೂರು ಕಡೆಗೆ ನಿಧಾನಗತಿಯ ಸಂಚಾರ ಕಂಡುಬಂತು.

ಬೆಂಗಳೂರು ಸಂಚಾರಿ ಪೊಲೀಸರಿಂದ ಟ್ವೀಟ್​

ಬೆಂಗಳೂರಲ್ಲಿ ನಾಳೆಯೂ ಮಳೆ

ಇನ್ನು ಇವತ್ತು ಬೆಳಗ್ಗೆಯಿಂದಲೇ ಬೆಂಗಳೂರಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿತ್ತು. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಅಥವಾ ಸಣ್ಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:28 pm, Wed, 8 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ