Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

Bangalore Heavy Rains Effect: ರಾಜಧಾನಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿದ್ದಾನೆ. ಏಕಾಏಕಿ ಸುರಿದ ಧಾರಾಕಾರ ಮಳೆಗೆ ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನಸವಾರರು ಪರದಾಡಿದ ಪ್ರಸಂಗ ನಡೆದಿದೆ. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ
ಮಳೆ
Edited By:

Updated on: Oct 08, 2025 | 4:24 PM

ಬೆಂಗಳೂರು, ಅಕ್ಟೋಬರ್​ 08: ರಾಜಧಾನಿ ಬೆಂಗಳೂರಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ನಗರದ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೆ ಇನ್ನು ಕೆಲವು ಏರಿಯಾಗಳಲ್ಲಿ ತುಂತುರು ಮಳೆಯಾಗಿದೆ. ಯಲಹಂಕ ಆಸುಪಾಸು ಧಾರಾಕಾರ ಮಳೆ (Bangalore Rains) ಸುರಿದಿದ್ದು, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ವೇಳೆ ಸುರಿದ ಮಳೆಯಿಂದ ವಾಜನ ಸವಾರರಿಗೆ ತೊಂದರೆಯಾಗಿದೆ.

ರಸ್ತೆಯಲ್ಲಿ ನಿಂತ ಮಳೆ ನೀರು

ಯಲಹಂಕ ವ್ಯಾಪ್ತಿಯಲ್ಲಿ ವರುಣ ಅಬ್ಬರಿಸಿದ ಕಾರಣ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ್ದಾರೆ. ಕಾಫಿ ಡೇ ಬಳಿ ಮಳೆ ನೀರು ನಿಂತಿರುವುದರಿಂದ ಏರ್‌ಪೋರ್ಟ್ ರಸ್ತೆಯ ಕಡೆಯ ರಸ್ತೆಯಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂದಿದೆ. ಯಲಹಂಕ ರೈಲ್ವೇ ಅಂಡರ್‌ಪಾಸ್‌ ಬಳಿಯೂ ನೀರು ನಿಂತಿರುವುದರಿಂದ ನಗರದ ಕಡೆಗೆ ತೆರಳುವ ವಾಹನಗಳಿಗೆ ತೊಂದರೆಯಾಗಿದೆ. ಹಾಗೆಯೇ ವೀರಸಂದ್ರ ಜಂಕ್ಷನ್ ಬಳಿ ನೀರು ನಿಂತಿರುವುದರಿಂದ ಹೊಸೂರು ಕಡೆಗೆ ನಿಧಾನಗತಿಯ ಸಂಚಾರ ಕಂಡುಬಂತು.

ಬೆಂಗಳೂರು ಸಂಚಾರಿ ಪೊಲೀಸರಿಂದ ಟ್ವೀಟ್​

ಬೆಂಗಳೂರಲ್ಲಿ ನಾಳೆಯೂ ಮಳೆ

ಇನ್ನು ಇವತ್ತು ಬೆಳಗ್ಗೆಯಿಂದಲೇ ಬೆಂಗಳೂರಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿತ್ತು. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಅಥವಾ ಸಣ್ಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:28 pm, Wed, 8 October 25

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us