AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ವರುಣನ ಆರ್ಭಟ; ರಸ್ತೆ ಮಧ್ಯೆ ಜನರ ಪರದಾಟ

ಬೆಳ್ಳಂ ಬೆಳಿಗ್ಗೆಯಿಂದಲೇ ಚಿತ್ರ ದುರ್ಗದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೊಡಗಿನಲ್ಲೂ ವರುಣನ ಆರ್ಭಟ ಹೆಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ವರುಣನ ಆರ್ಭಟ; ರಸ್ತೆ ಮಧ್ಯೆ ಜನರ ಪರದಾಟ
ಚಿತ್ರದುರ್ಗದಲ್ಲಿ ಇಂದು ಬಾರೀ ಪ್ರಮಾಣದಲ್ಲಿ ಮಳೆಯಾಗಿದೆ
shruti hegde
| Edited By: |

Updated on: Feb 19, 2021 | 5:04 PM

Share

ಚಿತ್ರದುರ್ಗ: ಬೆಳ್ಳಂ ಬೆಳಗ್ಗೆಯಿಂದಲೇ ಚಿತ್ರ ದುರ್ಗದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ಕಡೆ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಂತೆಯೇ ಕೊಡಗಿನಲ್ಲೂ ವರುಣನ ಆರ್ಭಟ ಹೆಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ಪ್ರಶಾಂತ ನಗರ, ಗುಮಾಸ್ತ ಕಾಲೋನಿ ಸೇರಿದಂತೆ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರಿಗೆ ಸಂಚಾರ ಮಾರ್ಗ ಸ್ಥಗಿತಗೊಂಡಿದೆ. ಹಾಗೂ ಕಂಚೀಪುರ, ಬಾಲೇನಹಳ್ಳಿಯಲ್ಲೂ ಗಾಳಿ ಸಹಿತ ಭಾರಿ ಮಳೆಗೆ ರೈತರಾದ ಬಸವರಾಜಪ್ಪ, ರಮೇಶಪ್ಪರಿಗೆ ಸೇರಿದ ಲಕ್ಷಾಂತರ ರೂ. ಬಾಳೆ, ಅಡಕೆ ಬೆಳೆಗಳು ಹಾನಿಗೊಂಡಿದೆ.

heavy rain in chitradurga

ಬಾರೀ ಪ್ರಮಾಣದ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ

ದೊಡ್ಡಯ್ಯನಪಾಳ್ಯದ ನಿವಾಸಿಯಾಗಿರುವ ದಕ್ಷಿಣಮೂರ್ತಿಯವರಿಗೆ ಸೇರಿದ್ದ ಸುಮಾರು 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಹಾನಿಗೊಂಡಿದೆ. ಬೆಳೆ ಹಾನಿಯಿಂದ ದಕ್ಷಿಣಮೂರ್ತಿಯವರಿಗೆ 15 ಲಕ್ಷ ರೂ. ನಷ್ಟವಾಗಿದೆ. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಮನವಿ ಸಲ್ಲಿಸಿದ್ದಾರೆ.

ಕೊಡಗಿನಲ್ಲೂ ವರುಣನ ಆರ್ಭಟ ಜಿಲ್ಲೆಯಲ್ಲಿ ಇಂದು ಧಿಡೀರನೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಶನಿವಾರಸಂತೆ, ಅಂಕನಹಳ್ಳಿ ಸುತ್ತಮುತ್ತ ಮಳೆಯಾಗಿದೆ. ಆಲಿಕಲ್ಲು ಮಳೆ ಹಿನ್ನೆಲೆ ಕಾಫಿ ಸೇರಿದಂತೆ ಕಾಳು ಮೆಣಸು ಸೇರಿ ಲಕ್ಷಾಂತರ ಮೌಲ್ಯದ ಬೆಳೆಗೆ ಹಾನಿಯುಂಟಾಗಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ