AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ವರುಣನ ಆರ್ಭಟ; ರಸ್ತೆ ಮಧ್ಯೆ ಜನರ ಪರದಾಟ

ಬೆಳ್ಳಂ ಬೆಳಿಗ್ಗೆಯಿಂದಲೇ ಚಿತ್ರ ದುರ್ಗದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೊಡಗಿನಲ್ಲೂ ವರುಣನ ಆರ್ಭಟ ಹೆಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ವರುಣನ ಆರ್ಭಟ; ರಸ್ತೆ ಮಧ್ಯೆ ಜನರ ಪರದಾಟ
ಚಿತ್ರದುರ್ಗದಲ್ಲಿ ಇಂದು ಬಾರೀ ಪ್ರಮಾಣದಲ್ಲಿ ಮಳೆಯಾಗಿದೆ
shruti hegde
| Edited By: |

Updated on: Feb 19, 2021 | 5:04 PM

Share

ಚಿತ್ರದುರ್ಗ: ಬೆಳ್ಳಂ ಬೆಳಗ್ಗೆಯಿಂದಲೇ ಚಿತ್ರ ದುರ್ಗದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ಕಡೆ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಂತೆಯೇ ಕೊಡಗಿನಲ್ಲೂ ವರುಣನ ಆರ್ಭಟ ಹೆಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ಪ್ರಶಾಂತ ನಗರ, ಗುಮಾಸ್ತ ಕಾಲೋನಿ ಸೇರಿದಂತೆ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರಿಗೆ ಸಂಚಾರ ಮಾರ್ಗ ಸ್ಥಗಿತಗೊಂಡಿದೆ. ಹಾಗೂ ಕಂಚೀಪುರ, ಬಾಲೇನಹಳ್ಳಿಯಲ್ಲೂ ಗಾಳಿ ಸಹಿತ ಭಾರಿ ಮಳೆಗೆ ರೈತರಾದ ಬಸವರಾಜಪ್ಪ, ರಮೇಶಪ್ಪರಿಗೆ ಸೇರಿದ ಲಕ್ಷಾಂತರ ರೂ. ಬಾಳೆ, ಅಡಕೆ ಬೆಳೆಗಳು ಹಾನಿಗೊಂಡಿದೆ.

heavy rain in chitradurga

ಬಾರೀ ಪ್ರಮಾಣದ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ

ದೊಡ್ಡಯ್ಯನಪಾಳ್ಯದ ನಿವಾಸಿಯಾಗಿರುವ ದಕ್ಷಿಣಮೂರ್ತಿಯವರಿಗೆ ಸೇರಿದ್ದ ಸುಮಾರು 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಹಾನಿಗೊಂಡಿದೆ. ಬೆಳೆ ಹಾನಿಯಿಂದ ದಕ್ಷಿಣಮೂರ್ತಿಯವರಿಗೆ 15 ಲಕ್ಷ ರೂ. ನಷ್ಟವಾಗಿದೆ. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಮನವಿ ಸಲ್ಲಿಸಿದ್ದಾರೆ.

ಕೊಡಗಿನಲ್ಲೂ ವರುಣನ ಆರ್ಭಟ ಜಿಲ್ಲೆಯಲ್ಲಿ ಇಂದು ಧಿಡೀರನೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಶನಿವಾರಸಂತೆ, ಅಂಕನಹಳ್ಳಿ ಸುತ್ತಮುತ್ತ ಮಳೆಯಾಗಿದೆ. ಆಲಿಕಲ್ಲು ಮಳೆ ಹಿನ್ನೆಲೆ ಕಾಫಿ ಸೇರಿದಂತೆ ಕಾಳು ಮೆಣಸು ಸೇರಿ ಲಕ್ಷಾಂತರ ಮೌಲ್ಯದ ಬೆಳೆಗೆ ಹಾನಿಯುಂಟಾಗಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ