AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಧಾರಾಕಾರ ಮಳೆ: ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಶಾಲಾ ಕಾಲೇಜಿಗೆ ರಜೆ

ಮಾಜಿ ಸಚಿವೆ ಮೋಟಮ್ಮ(Ex Minister Motamma) ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್ ಅನಂತು ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ರಾಜ್ಯದಲ್ಲಿ ಧಾರಾಕಾರ ಮಳೆ: ಉತ್ತರ ಕನ್ನಡ,  ದಕ್ಷಿಣ ಕನ್ನಡ  ಸೇರಿದಂತೆ ಹಲವೆಡೆ ಶಾಲಾ ಕಾಲೇಜಿಗೆ ರಜೆ
ಮಳೆ
TV9 Web
| Updated By: ಆಯೇಷಾ ಬಾನು|

Updated on:Jul 06, 2022 | 8:35 PM

Share

ರಾಜ್ಯದ ಹಲವೆಡೆ ವರುಣನ ಆರ್ಭಟ(Karnataka Rain) ದಿನದಿಂದ ದಿನಕ್ಕೆ ಜೋರಾಗುತ್ತಲೇ ಇದೆ. ಅದ್ರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಲೇ ಇದ್ದು, ಮನೆಯಿಂದ ಹೊರಬರೋದೆ ದೊಡ್ಡ ಸವಾಲಾಗಿದೆ. ಗುಡ್ಡಗಳು ಕುಸಿದು ಬೀಳುತ್ತಿವೆ. ಜಲಾಶಯಗಳು ತುಂಬಿ ಹರಿಯುತ್ತಿದ್ದು, ನದಿ ಪಕ್ಕದ ಜನರಿಗೆ ನಡುಕ ಶುರುವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ ಕೊರೆತ ಉಂಟಾಗಿದೆ. ಕುಮಟಾ, ಹೊನ್ನಾವರ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಾಳಿ, ಅಘನಾಶಿನಿ, ಶರಾವತಿ ನದಿಗಳೆಲ್ಲ ತುಂಬಿ ಹರಿಯುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅಂಗನವಾಡಿಯಿಂದ ಪದವಿ ಕಾಲೇಜಿನವರೆಗೂ ನಾಳೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಭಾರಿ ಮಳೆಯಿಂದ ಮನೆ ಗೋಡೆ ಕುಸಿದಿದೆ. ಮಾಸ್ತಪ್ಪ ನಾಯ್ಕ ಎಂಬುವರ ಮನೆಯ ಗೋಡೆ ಕುಸಿದಿದ್ದು ಭಾರತಿ ನಾಯ್ಕಗೆ ಗಾಯಗಳಾಗಿವೆ. ಗಾಯಾಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆ ಕುಸಿದ ಸ್ಥಳಕ್ಕೆ ಪಿಡಿಒ, ಆರ್ಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಾಡ್೯ ನಂ 7 ರಲ್ಲಿ ಪುರಸಭೆ ಚರಂಡಿ ದುರಸ್ತಿಗೊಳಿಸದ ಹಿನ್ನಲೆ ಮನೆಗೆ ನೀರು ನುಗ್ಗಿದೆ. ನೀರಲ್ಲೆ ಕುಳಿತು ಕುಟುಂಬಸ್ಥರು, ಸಂಬಂಧಿಕರು ವೈಕುಂಠ ಸಮಾರಾಧನೆಯ ಊಟ ಮಾಡಿದ್ದಾರೆ. ನಾಗಪ್ಪ ನಾಯ್ಕ ಅವರ ತಾಯಿಯ 14ನೇ ದಿನದ ತಿಥಿ ಕಾರ್ಯ ಹಿನ್ನೆಲೆ ವೈಕುಂಠ ಸಮಾರಾಧನೆ ಕಾರ್ಯಕ್ರಮ ನಡೆಸಿದ್ದು ಮಳೆಯ ನೀರಲ್ಲಿ ಕುಳಿತು ಊಟ ಮಾಡಿದ ಘಟನೆ ನಡೆದಿದೆ. ಪುರಸಭೆಗೆ ಹಿಡಿ ಶಾಪ ಹಾಕಿದ್ದಾರೆ. ಇದನ್ನೂ ಓದಿ: Karnataka Rain: ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆ ಸಾಧ್ಯತೆ ಉಡುಪಿಯಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ. ಮಳೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಮೀನುಗಾರರು ನದಿ ಮತ್ತು ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಜುಲೈ 11 ರ ವರೆಗೂ ಭಾರಿ ಮಳೆ ಮುಂದುವರೆಯುವ ನಿರೀಕ್ಷೆ ಇದೆ.

ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಹಿನ್ನೆಲೆ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ.

ಹಾಸನದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಹಾಸನ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ನಾಳೆ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಲೂರು, ಅರಕಲಗೂಡು, ಸಕಲೇಶಪುರ ತಾಲೂಕಿನ, ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ಆದೇಶ ಹೊರಡಿಸಿದ್ದಾರೆ. ನಾಳಿನ ಮಳೆ ಪರಿಸ್ಥಿತಿ ಗಮನಿಸಿ ಮತ್ತೆ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: Saji Cheriyan ಸಂವಿಧಾನದ ವಿರುದ್ಧ ಹೇಳಿಕೆ ನೀಡಿದ್ದ ಕೇರಳದ ಸಚಿವ ಸಜಿ ಚೆರಿಯನ್ ರಾಜೀನಾಮೆ

ಚಿತ್ರದುರ್ಗದಲ್ಲೂ ಭಾರಿ ಮಳೆ ಚಿತ್ರದುರ್ಗ ನಗರದಲ್ಲಿ ಕೆಲ ಹೊತ್ತು ಧಾರಾಕಾರ ಮಳೆ ಹಿನ್ನೆಲೆ ತುರುವನೂರು ರಸ್ತೆಯ ಸೇತುವೆ ಬಳಿ ರಸ್ತೆ ಜಲಾವೃತಗೊಂಡಿದೆ. ಹಳೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಸೇತುವೆ ಬಳಿ ರಸ್ತೆ ಜಲಾವೃತವಾಗಿದ್ದು ನೀರಿನಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.

ಮಾಜಿ ಸಚಿವೆ ಮೋಟಮ್ಮ ಸೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದು ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ಘಟನೆ. ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್ ಅನಂತು ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ಮೈ ಜುಮ್ ಎನಿಸುವ ಸಿಸಿಟಿವಿ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿಯ ಆರ್ಭಟವು ಜೋರಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 6:41 pm, Wed, 6 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ