AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮಲೆನಾಡಿನಲ್ಲಿ ಹನಿ ಕಡಿಯದೇ ಸುರಿಯುತ್ತಿದೆ ಮಳೆ; ಭಾರೀ ಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತ

Monsoon 2021: ಚಿಕ್ಕಮಗಳೂರಿನ ಹಲವೆಡೆ ಮೊನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟಿ, ಕೊಟ್ಟಿಗೆಹಾರ, ಬಣಕಲ್, ಬಾಳೆಹೊನ್ನೂರು ಭಾಗದಲ್ಲಿನ ಜಡಿಮಳೆಗೆ ಜನ ಭಯಭೀತರಾಗಿದ್ದಾರೆ.

Karnataka Weather: ಮಲೆನಾಡಿನಲ್ಲಿ ಹನಿ ಕಡಿಯದೇ ಸುರಿಯುತ್ತಿದೆ ಮಳೆ; ಭಾರೀ ಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತ
ರಾಜ್ಯದ ಹಲವೆಡೆ ಭಾರೀ ಮಳೆ (ಸಾಂಕೇತಿಕ ಚಿತ್ರ)
TV9 Web
| Edited By: |

Updated on: Jun 17, 2021 | 8:20 AM

Share

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಎರಡು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿದ್ದು, ಆರಂಭದಲ್ಲೇ ಈ ಪ್ರಮಾಣದ ಮಳೆ ಸುರಿದರೆ ಮುಂದೆ ಹೇಗಿರಬಹುದು ಎಂದು ಜನ ಈಗಲೇ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಎರಡು ಮೂರು ವರ್ಷಗಳ ಮಳೆಗಾಲದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಕಂಡು ತತ್ತರಿಸಿ ಹೋಗಿರುವ ಜನ ಈ ಬಾರಿ ಹಾಗಾಗದಿರಲಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಮಳೆಯೊಂದಿಗೆ ಗಾಳಿಯ ಅಬ್ಬರವೂ ಜೋರಾಗಿರುವ ಕಾರಣ ಕೃಷಿಕರು ತಮ್ಮ ತೋಟ, ಗದ್ದೆಗಳ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಮಳೆಗಾಲದ ಶುರುವಿನಲ್ಲೇ ಜನ ಹೈರಾಣಾಗಿ ಹೋಗುವಂತೆ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರಿನ ಹಲವೆಡೆ ಮೊನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟಿ, ಕೊಟ್ಟಿಗೆಹಾರ, ಬಣಕಲ್, ಬಾಳೆಹೊನ್ನೂರು ಭಾಗದಲ್ಲಿನ ಜಡಿಮಳೆಗೆ ಜನ ಭಯಭೀತರಾಗಿದ್ದಾರೆ. ನಿನ್ನೆ ಸಂಜೆ ವೇಳೆಗೆ ಕೊಟ್ಟಿಗೆಹಾರ ಸಮೀಪ ಚಾರ್ಮಾಡಿ ಘಾಟ್​ನಲ್ಲಿ ಮರವೊಂದು ಉರುಳಿದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಜೆಸಿಬಿ ಯಂತ್ರದ ಸಹಾಯದಿಂದ ಮರವನ್ನು ತೆರವುಗೊಳಿಸಿದರು.

ಕೊಪ್ಪ ತಾಲ್ಲೂಕಿನ ಜಯಪುರ ಸಮೀಪದ ಬಸರಿಕಟ್ಟೆ ಬಳಿಯೂ ಮರವೊಂದು ಧರೆಗೆ ಉರುಳಿದ ಪರಿಣಾಮ ಜಯಪುರ, ಬಸರಿಕಟ್ಟೆಗೆ ಸಂಪರ್ಕ ಕಲ್ಪಿಸುವ ಮಾರ್ಗದ ಸಂಚಾರ ಕಡಿತಗೊಂಡಿತ್ತು. ಕೆಲವೆಡೆ ಭಾರೀ ಗಾಳಿಯ ಪರಿಣಾಮ ವಿದ್ಯುತ್​ ಕಂಬಗಳ ಮೇಲೆಯೇ ಮರ ಬಿದ್ದಿದ್ದು, ಹಳ್ಳಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ.

ಕುದುರೆಮುಖ ಶ್ರೇಣಿಯಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಪರಿಣಾಮ ಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಕಳಸ, ಹೊರನಾಡು ನಡುವಿನ ಹೆಬ್ಬಾಳೆ ಸೇತುವೆ ಮೇಲೆ ಈಗಾಗಲೇ ನೀರು ಬರುವ ಮಟ್ಟಕ್ಕೆ ನದಿ ತುಂಬಿದ್ದು, ಸೇತುವೆ ಮುಳುಗಲು ಇನ್ನು ಎರಡು ಅಡಿಗಳಷ್ಟೇ ಬಾಕಿ ಇದೆ. ಕಳೆದ ಮೂರು ವರ್ಷಗಳಿಂದ ಹೆಬ್ಬಾಳೆ ಸೇತುವೆ ಮುಳುಗಡೆ ಆಗುತ್ತಿದ್ದು, ಈ ಬಾರಿ ಮುಂಗಾರು ಆರಂಭದಲ್ಲೇ ಮುಳುಗುವ ಹಂತ ತಲುಪಿದೆ.

ಇತ್ತ ಮಳೆ ಹೆಚ್ಚಾಗಿ ಜನ ಈಗಲೇ ಮಳೆಗಾಲದ ಸಹವಾಸ ಸಾಕಪ್ಪಾ ಎನ್ನುತ್ತಿದ್ದರೆ ಅತ್ತ ಬಯಲುಸೀಮೆ ಭಾಗದಲ್ಲಿ ಮಳೆಗಾಗಿ ಕಾಯುವಂತಾಗಿದೆ. ತರೀಕೆರೆ-ಕಡೂರು ತಾಲೂಕಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದ್ದು, ಬಯಲುಸೀಮೆ ಭಾಗದ ಹಲವೆಡೆ ಹನಿ ಮಳೆಯೂ ಇಲ್ಲವೆಂಬಂತಾಗಿದೆ.

ಇದನ್ನೂ ಓದಿ: Tunga Dam: ತುಂಗಾ ಡ್ಯಾಂ ಭರ್ತಿ; ಮಲೆನಾಡಿನ ಸೌಂದರ್ಯದ ಹೆಚ್ಚಳಕ್ಕೆ ಸಾಕ್ಷಿ ಆಯ್ತು ಮುಂಗಾರು ಮಳೆ 

Karnataka Weather: ಮುಂಗಾರು ಮಳೆ ಆರ್ಭಟಕ್ಕೆ ಮಲೆನಾಡು, ಕರಾವಳಿ ತತ್ತರ; ವಾಯುಭಾರ ಕುಸಿತದಿಂದ ಬೆಂಗಳೂರಿನಲ್ಲಿ ಮಳೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ