AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಭೂಕುಸಿತ: ಜಿಲ್ಲಾಧಿಕಾರಿ ಕಚೇರಿ ಕುಸಿಯುವ ಆತಂಕ

ತಡೆಗೋಡೆ ಬದಿಯಲ್ಲೇ ಮಣ್ಣು ಕುಸಿಯುತ್ತಿರುವುದರಿಂದ ಕಚೇರಿ ಸಮುಚ್ಚಯವೂ ಕುಸಿಯಬಹುದು ಎಂದು ವಿಶ್ಲೇಷಿಸಲಾಗಿದೆ.

ಕೊಡಗಿನಲ್ಲಿ ಭೂಕುಸಿತ: ಜಿಲ್ಲಾಧಿಕಾರಿ ಕಚೇರಿ ಕುಸಿಯುವ ಆತಂಕ
ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ಮರಗಳು ಉರುಳಿವೆ
TV9 Web
| Edited By: |

Updated on: Jul 15, 2021 | 5:17 PM

Share

ಮಡಿಕೇರಿ: ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕೆಳಗೆ ಮಣ್ಣು ಸಡಿಲವಾಗುತ್ತಿರುವುದರಿಂದ ಕೊಡಗು ಜಿಲ್ಲಾಧಿಕಾರಿ ಕಚೇರಿ ಕುಸಿಯಬಹುದು ಎಂಬ ಆತಂಕ ಕಾಣಿಸಿಕೊಂಡಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಡಳಿತ ಆರಂಭಿಸಿದೆ.

ತಡೆಗೋಡೆ ಬದಿಯಲ್ಲೇ ಮಣ್ಣು ಕುಸಿಯುತ್ತಿರುವುದರಿಂದ ಕಚೇರಿ ಸಮುಚ್ಚಯವೂ ಕುಸಿಯಬಹುದು ಎಂದು ವಿಶ್ಲೇಷಿಸಲಾಗಿದೆ. ಮಡಿಕೇರಿ ಮತ್ತು ಮಂಗಳೂರು ರಸ್ತೆಯ ಸಮೀಪದಲ್ಲಿಯೇ ಜಿಲ್ಲಾಧಿಕಾರಿ ಕಚೇರಿಯೂ ಇದೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ತತ್ತರಿಸಿದೆ. ಜಿಲ್ಲೆಯ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಜನರು ಪರದಾಡುವಂತಾಗಿದೆ.

ಹೊನ್ನಾವರ: ಮನೆ ಅಂಗಳಕ್ಕೆ ಬಂಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಳೆಯಿಂದಾಗಿ ನೀರಿನ ಪಸೆ ಹೆಚ್ಚಾಗಿದ್ದು, ಗುಡ್ಡ ಕುಸಿಯುತ್ತಿದೆ. ಹೊನ್ನಾವರ ತಾಲೂಕಿನ ಕಾವೂರಿನಲ್ಲಿ ಗುಡ್ಡದ ಮೇಲಿದ್ದ ಬಂಡೆಯೊಂದು ಉರುಳಿ ಮನೆ ಅಂಗಳಕ್ಕೆ ಬಂದು ಬಿದ್ದಿದೆ.

ಹೊನ್ನಾವರ ತಾಲ್ಲೂಕು ಕಾವೂರು ಗ್ರಾಮದ ಸುರೇಶ್ ಗೌಡ ಎಂಬುವವರ ಮನೆ ಪಕ್ಕದಲ್ಲಿ ಗುಡ್ಡ ಕುಸಿದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಂಗಳೂರಿನಲ್ಲಿ ಕಾರ್ಮೋಡದ ಕತ್ತಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಹಗಲಿನಲ್ಲೇ ಕತ್ತಲೆಯ ವಾತಾವರಣ ಕಂಡು ಬಂದಿದೆ. ಕತ್ತಲು ಆವರಿಸಿರುವ ಹಿನ್ನೆಲೆಯಲ್ಲಿ ಹಾಡಹಗಲೇ ಲೈಟ್ ಹಾಕಿಕೊಂಡು ವಾಹನಗಳು ಸಂಚರಿಸುತ್ತಿವೆ.

ಮಳೆ ವ್ಯಾಪಕವಾಗಿ ಸುರಿಯುತ್ತಿರುವುದರಿಂದ ಮಂಗಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿವೆ. ಮಂಗಳೂರಿನ ಕದ್ರಿ, ನಂತೂರು ಜಂಕ್ಷನ್, ಪಂಪ್​ವೆಲ್ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಮೂಡಿಗೆರೆ: ಮನೆ ಮೇಲೆ ಬಿದ್ದ ಮರ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿದ್ದು, ಮರವೊಂದು ಮನೆಯ ಮೇಲೆ ಬಿದ್ದಿದೆ. ಬೊಮ್ಮನಗದ್ದೆಯಲ್ಲಿ ಫೆಲಿಕ್ಸ್ ಅವರ ಮನೆಯ ಮೇಲೆ ಮರ ಬಿದ್ದಿದೆ.

(heavy rain in Kodagu district dc office in danger landslide in Honnavara)

ಇದನ್ನೂ ಓದಿ: Karnataka Rain: ಬೆಂಗಳೂರಲ್ಲಿ ಮುಂದಿನ 2 ದಿನ, ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 19ರವರೆಗೆ ಭರ್ಜರಿ ಮಳೆಯಾಗುವ ಸಾಧ್ಯತೆ

ಇದನ್ನೂ ಓದಿ: KRS Dam: ಕಬಿನಿ ಜಲಾನಯನ ಪ್ರದೇಶದಲ್ಲಿ ಬಿರುಸುಗೊಂಡ ಮಳೆ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಎಷ್ಟಿದೆ ಈಗ?

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು