AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವೆಡೆ ಮಳೆ ಅವಾಂತರ; ಬೆಳೆ ನಾಶ, ನಂಜನಗೂಡಿನಲ್ಲಿ ಮರ ಬಿದ್ದು ಕಾರು ಜಖಂ

ಮೈಸೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ಹುಣಸೂರು ತಾಲೂಕಿನ ಸಬ್ಬಾನಹಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ನಾಶವಾಗಿದೆ. ಕೃಷ್ಣಯ್ಯ ಎಂಬ ರೈತ ಸಾಲ ಮಾಡಿ ಒಂದೂವರೆ ಎಕರೆಯಲ್ಲಿ ಬಾಳೆ ಬೆಳೆದಿದ್ದರು.

ಕರ್ನಾಟಕದ ಹಲವೆಡೆ ಮಳೆ ಅವಾಂತರ; ಬೆಳೆ ನಾಶ, ನಂಜನಗೂಡಿನಲ್ಲಿ ಮರ ಬಿದ್ದು ಕಾರು ಜಖಂ
ಬಾಳೆ ಗಿಡಗಳು ನೆಲಕ್ಕೆ ಉರುಳಿವೆ
TV9 Web
| Edited By: |

Updated on:May 04, 2022 | 9:16 AM

Share

ತುಮಕೂರು: ರಾಜ್ಯದಲ್ಲಿ ಹಲವೆಡೆ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು (Heavy Rain), ಅವಾಂತರ ಸೃಷ್ಟಿಯಾಗಿದೆ. ತಡರಾತ್ರಿ ತುಮಕೂರು ಜಿಲ್ಲೆಯಲ್ಲಿ ಸುರಿದ ಮಳೆ ಅಬ್ಬರಕ್ಕೆ ವಿದ್ಯುತ್ ಕಂಬಗಳು (Power poles), ಮರಗಳು ನೆಲಕ್ಕೆ ಉರುಳಿವೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಮೂರ್ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಇನ್ನು ಚಿತ್ರದುರ್ಗ ನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ತಡರಾತ್ರಿ ಓಬವ್ವ ಕ್ರೀಡಾಂಗಣದ ರಸ್ತೆಯಲ್ಲಿ ಮರಗಳು ಧರೆಗುರುಳಿವೆ. ಅದೃಷ್ಟವಶಾತ್ ನಗರದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮೈಸೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ಹುಣಸೂರು ತಾಲೂಕಿನ ಸಬ್ಬಾನಹಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ನಾಶವಾಗಿದೆ. ಕೃಷ್ಣಯ್ಯ ಎಂಬ ರೈತ ಸಾಲ ಮಾಡಿ ಒಂದೂವರೆ ಎಕರೆಯಲ್ಲಿ ಬಾಳೆ ಬೆಳೆದಿದ್ದರು. ಆದರೆ ಮಳೆಯಿಂದ ಬೆಳೆ ಹಾಳಾಗಿದೆ. ಹೀಗಾಗಿ ಬೆಳೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಂಜನಗೂಡಿನಲ್ಲಿ ಕಾರಿನ ಮೇಲೆ ಭಾರಿ ಗಾತ್ರದ ಮರ ಬಿದ್ದು ಕಾರು ಸಂಪೂರ್ಣ ಜಖಂ ಆಗಿದೆ. ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯ ರೋಟರಿ ಶಾಲೆ ಬಳಿ ಘಟನೆ ನಡೆದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಹಾಗೂ ತಂತಿಗಳು ತುಂಡಾಗಿವೆ.

ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ ಇನ್ನೂ ದಿನವೂ ಸಂಜೆಯ ಬಳಿಕ ಆಗಾಗ ಮುಖ ತೋರಿಸಿ ಹೋಗುತ್ತಿದ್ದಾನೆ. ಕರ್ನಾಟಕದಲ್ಲಿ ವರುಣನ ಅಬ್ಬರ  ಇನ್ನೂ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ.

ಇದನ್ನೂ ಓದಿ

ಹೆಣ್ಣು ಮಗು ಎಂದು ಮನೆ ಬಿಟ್ಟು ಹೋದ ಅಪ್ಪ; ಪಿಎಸ್ಐ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಜೀವನ ಹೇಗಿದೆ ಗೊತ್ತಾ?

RCB vs CSK: ಸಿಎಸ್​​ಕೆ ವಿರುದ್ಧ ಹೊಸ ಪ್ರಯೋಗಕ್ಕೆ ಮುಂದಾದ ಆರ್​ಸಿಬಿ: ಶಹಬಾಜ್ ಔಟ್, ಈ ಆಟಗಾರ ಇನ್?

Published On - 9:15 am, Wed, 4 May 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್