AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ

Bengaluru Rain Forecast: ಈ ವರ್ಷ ದೇಶಾದ್ಯಂತ ಶೇ 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ, ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಿದೆ. ಹೀಗಾಗಿ ಮುಂಬರುವ ಮುಂಗಾರು ಮಳೆ ಮತ್ತು ಮಳೆ ಸಂಬಂಧಿ ಅವಘಡಗಳ ತಪ್ಪಿಸಲು ಈಗಲೇ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿಗಳೂ ಒಳಗೊಂಡಂತೆ ಸಂಬಂಧಪಟ್ಟವರಿಗೆ ಸರ್ಕಾರ ಪತ್ರ ಬರೆದಿದೆ.

Karnataka Rains: ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ
ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ
Follow us
Ganapathi Sharma
| Updated By: Digi Tech Desk

Updated on:May 07, 2024 | 3:10 PM

ಬೆಂಗಳೂರು, ಮೇ 7: ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ (Karnataka Rains) ಮಳೆಯಾಗುತ್ತಿದ್ದು, ಮುಂಗಾರು ಪ್ರಾರಂಭವಾಗುವ ಸುಳಿವು ನೀಡಿದೆ. ಹೀಗಾಗಿ, ಭಾರಿ ಮಳೆ ಹಾಗೂ ಮಳೆ (Rain) ಸಂಬಂಧಿತ ಹಾನಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾದೇಶಿಕ ಆಯುಕ್ತರು, ಡಿಸಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಂದಾಯ ಇಲಾಖೆ (Revenue Department) ಪತ್ರ ಬರೆದಿದೆ. ತಗ್ಗು ಪ್ರದೇಶಗಳನ್ನು ಗುರುತಿಸಲು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲು ಮತ್ತು ಅಣೆಕಟ್ಟುಗಳ ಸಮೀಪವಿರುವ ನಿವಾಸಿಗಳನ್ನು ತ್ವರಿತವಾಗಿ ಎಚ್ಚರಿಸಲು ಸಿದ್ಧತೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಈ ವರ್ಷ ದೇಶಾದ್ಯಂತ ಶೇ 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿಯೂ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಕಂದಾಯ ಇಲಾಖೆಯ ಅಧೀನದಲ್ಲಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಾಗಿ ಇತರ ಇಲಾಖೆಗಳೊಂದಿಗೆ ಸಭೆ ನಡೆಸಿ ಜವಾಬ್ದಾರಿಗಳನ್ನು ಹಂಚುವ ಅಗತ್ಯವೂ ಇದೆ. ತಗ್ಗು ಪ್ರದೇಶಗಳನ್ನು ಗುರುತಿಸಲು ಅಧಿಕಾರಿಗಳು ಡಿಸಿಗಳಿಗೆ ಸೂಚನೆ ನೀಡಿದ್ದು, ಇದಕ್ಕಾಗಿ ನಗರಾಭಿವೃದ್ಧಿ ಇಲಾಖೆ/ಆರ್‌ಡಿಪಿಆರ್ ಮತ್ತು ಪಿಡಬ್ಲ್ಯೂಡಿಯೊಂದಿಗೆ ಸಮನ್ವಯತೆ ಸಾಧಿಸುವ ಅಗತ್ಯವಿದೆ.

ಮಳೆಯಿಂದ ಹಾನಿ: ಬೆಳೆ ಪರಿಹಾರಕ್ಕೆ ರೈತರ ಆಗ್ರಹ

ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ದನಕರುಗಳಿಗೆ ಆಹಾರಕ್ಕಾಗಿ ಗೋಶಾಲೆ ಆರಂಭಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರು-ಊಟಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತರು ಬಾಳೆ ಮತ್ತಿತರ ತೋಟಗಾರಿಕಾ ಬೆಳೆಗಳನ್ನು ಕಳೆದುಕೊಂಡಿದ್ದು, ರೈತರನ್ನು ಅಪಾರ ನಷ್ಟದಿಂದ ಪಾರು ಮಾಡಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.

ಇದನ್ನೂ ಓದಿ: ಚಾಮರಾಜನಗರ: ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ

ಮೈಸೂರು ತಾಲೂಕಿನ ಕತ್ತೂರು ಹಾಗೂ ಇತರೆಡೆ ಗಾಳಿ ಮಳೆಯಿಂದಾಗಿ ನೂರಾರು ಎಕರೆ ಬಾಳೆ ತೋಟಗಳು ನಾಶವಾಗಿದ್ದವು. ನೆರೆಯ ಚಾಮರಾಜನಗರದಲ್ಲಿಯೂ 1,250 ಎಕರೆ ಪ್ರದೇಶದ ಬಾಳೆ ತೋಟ ನಾಶವಾಗಿತ್ತು.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿದಿದೆ. ಭಾರಿ ಗುಡುಗು ಮಿಂಚು ಸಹಿತ ಗಾಳಿಯೊಂದಿಗೆ ಸುಮಾರು ಅರ್ಧ ಗಂಟೆ ಮಳೆ ಸುರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 7 May 24

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು